ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವ ಯತ್ನ ಸರಿಯಲ್ಲ
Team Udayavani, Jun 11, 2020, 8:08 AM IST
ಹರಿಹರ: ಲಂಬಾಣಿ, ಬೋವಿ, ಕೊರಚ, ಕೊರಮ ಜಾತಿಗಳನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಕೈಬಿಡಲು ವ್ಯವಸ್ಥಿತ ಸಂಚು ನಡೆಯುತ್ತಿದ್ದು, ಇದಕ್ಕೆ ಮಣಿಯಬಾರದೆಂದು ಆಗ್ರಹಿಸಿ ಈ ಸಮುದಾಯಗಳ ಜನರು ಬುಧವಾರ ನಗರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಹಾಕುವ ಮೂಲಕ ಪತ್ರ ಚಳವಳಿ ನಡೆಸಿದರು.
ನಗರದ ಮುಖ್ಯ ಅಂಚೆ ಕಚೇರಿ ಮುಂದೆ ಕರ್ನಾಟಕ ತಾಂಡಾ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಶಿಕ್ಷಕ ರೇವಣ್ಣ ನಾಯ್ಕ ಮಾತನಾಡಿ, ಲಂಬಾಣಿ, ಬೋವಿ, ಕೊರಚ, ಕೊರಮ ಜಾತಿಗಳು ಅತಿ ಹಿಂದುಳಿದಿವೆ. ಕೆಲವು ಪಟ್ಟಭದ್ರರು ಸದರಿ ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ಕೈಬಿಡಬೇಕೆಂದು ಸಂಚು ನಡೆಸಿದ್ದಾರೆ.ಇದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ ನಡೆಯಾಗಿದೆ. ಇಂತಹ ಸಂಚಿಗೆ ಒಳಗಾಗಬಾರದು.ಈ ಜಾತಿಗಳನ್ನು ಯಥಾರೀತಿ ಎಸ್ಸಿ ಪಟ್ಟಿಯಲ್ಲಿ ಮುಂದುವರೆಸಬೇಕೆಂದು ಆಗ್ರಹಿಸಿದರು.
ತಾಂಡಾ ರಕ್ಷಣಾ ವೇದಿಕೆ ಅಧ್ಯಕ್ಷ ಶಶಿ ನಾಯ್ಕ ಮಾತನಾಡಿ, ಸಿಕ್ಕಿರುವ ಮೀಸಲಾತಿ ಯಾರ ಭಿಕ್ಷೆಯೂ ಅಲ್ಲ. ಡಾ| ಅಂಬೇಡ್ಕರ್ ರವರು ರಚಿತ ಸಂವಿಧಾನ ಬದ್ಧ ಹಕ್ಕಾಗಿದೆ. ವಿನಾಕಾರಣ ಸಮಾಜದಲ್ಲಿ ಈ ವಿಷಯದಲ್ಲಿ ಕೆಲವರು ಗೊಂದಲ ಸೃಷ್ಟಿಸುತ್ತಿದ್ದಾರೆ. ಈಗಲೂ ಮೂಲ ಸೌಕರ್ಯವಿಲ್ಲದ ತಾಂಡಾಗಳಲ್ಲಿ, ಕಾಡು, ಮೇಡುಗಳಲ್ಲಿ ಲಂಬಾಣಿ ಸಮುದಾಯದವರು ವಾಸಿಸುತ್ತಿದ್ದಾರೆ.ಬೋವಿ, ಕೊರಚ, ಕೊರಮ ಸಮುದಾಯದವರೂ ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿದ್ದಾರೆ. ಇವರ ಸರ್ವತೋಮುಖಅಭಿವೃದ್ಧಿಗೆ ಮೀಸಲಾತಿ ಅತ್ಯಗತ್ಯ ಎಂದರು.
ಭೋವಿ ಸಮಾಜದ ಮುಖಂಡರಾದ ಪರಶುರಾಮಪ್ಪ, ಮಂಜುನಾಥ, ಆರ್ ಯಮನೂರು, ವೆಂಕಟೇಶ್, ಮೋತ್ಯಾ ನಾಯ್ಕ, ರಾಜಾ ನಾಯ್ಕ, ಮಂಜಾ ನಾಯ್ಕ, ಮಂಜು, ಹರೀಶ್, ಶಾರುಖ್, ಹನುಮಂತ ನಾಯ್ಕ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ