ಹೊಂದಾಣಿಕೆಯಿಂದ ಜೀವನ ಸುಖಮಯ


Team Udayavani, Feb 11, 2019, 6:03 AM IST

dvg-1.jpg

ದಾವಣಗೆರೆ: ನವ ದಂಪತಿ ಪರಸ್ಪರ ಕಷ್ಟ-ಸುಖದಲ್ಲಿ ಸಹನೆಯಿಂದ ಹೊಂದಾಣಿಕೆ ಮಾಡಿಕೊಂಡು ಜೀವನ ಸಾಗಿಸಿದ್ದಲ್ಲಿ ಬದುಕು ಸಾರ್ಥಕವಾಗುತ್ತದೆ ಎಂದು ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದರು.

ಭಾನುವಾರ ಹದಡಿ ರಸ್ತೆಯ ಎಂ.ಬಿ. ರೈಸ್‌ಮಿಲ್‌ ಆವರಣದಲ್ಲಿ ಭೀಮಸಮುದ್ರದ ಶ್ರೀ ಜಿ. ಮಲ್ಲಿಕಾರ್ಜುನಪ್ಪ ಶ್ರೀಮತಿ ಹಾಲಮ್ಮ ಚಾರಿಟಿ ಫೌಂಡೇಶನ್‌ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದರು.

ನವ ದಂಪತಿ ಆರಂಭದಲ್ಲಿ ಖುಷಿಯಾಗಿದ್ದು, ಕಾಲಾಂತರದಲ್ಲಿ ಭಿನ್ನಾಭಿಪ್ರಾಯದಿಂದ ದೂರವಾಗುವ ಚಿಂತನೆ ಮಾಡಬಾರದು. ಇಬ್ಬರೂ ಪರಸ್ಪರರ ಸಂತಸ, ದುಃಖದಲ್ಲಿ ಒಂದಾಗಿ, ಸಹನೆಯಿಂದ ವರ್ತಿಸುತ್ತಾ ಧೈರ್ಯದಿಂದ ಜೀವನ ಸಾಗಿಸಬೇಕು. ಆಗ ಜೀವನ ಸುಖಮಯವಾಗಿರುತ್ತದೆ ಎಂದರಲ್ಲದೇ, ನವ ವಧು ಹುಟ್ಟಿದ ಮನೆಗೂ, ಗಂಡನ ಮನೆಗೂ ಕೀರ್ತಿ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದರು.

ಜೀವನವೆಂದರೆ ಕೀರ್ತಿ ತರುವುದು, ಸಾಧನೆ ಮಾಡುವುದಾಗಿದೆ. ಬಸವಾದಿ ಶರಣರು, ಪೈಗಂಬರ್‌, ಬುದ್ಧ, ಅಂಬೇಡ್ಕರ್‌ ಮೊದಲಾದ ದಾರ್ಶನಿಕರು, ಚಿಂತಕರು, ಶರಣರು ಕಾಯಕ ನಿಷ್ಠೆಯಿಂದಲೇ ಉತ್ತಮ ಸಮಾಜಮುಖೀ ಕೆಲಸ ಮಾಡಿದ್ದಾರೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರು ಕೂಡ ತಮ್ಮ ಉಸಿರು ಇರುವವರೆಗೂ ರೂಢಿಸಿಕೊಳ್ಳಬೇಕು. ಒಳ್ಳೆಯ ಆಲೋಚನೆ ಮಾಡುತ್ತಾ ಸತ್ಕಾರ್ಯ ಮಾಡಬೇಕು. ಆಗ ಸಮಾಜದಲ್ಲಿ ಕೀರ್ತಿ, ಹೆಸರು ದೊರೆಯುತ್ತದೆ ಎಂದು ಹೇಳಿದರು.

ಯಾರು ಜನನಾಯಕ ಆಗಿರುತ್ತಾರೋ ಅಂಥವರು ಸಮಾಜದ ಜನರ ಕಷ್ಟಗಳಿಗೆ ಸುಲಭವಾಗಿ ಸಿಗುವಂತಾಗಬೇಕು. ಅಂತಹ ಕೆಲಸವನ್ನು ಸಂಸದ ಜಿ.ಎಂ. ಸಿದ್ದೇಶ್ವರ್‌ ಮಾಡುತ್ತಾ ಬಂದಿದ್ದಾರೆ. ಜೊತೆಗೆ ತಮ್ಮ ತಂದೆ-ತಾಯಿ ಹೆಸರಿನಲ್ಲಿ ಟ್ರಸ್ಟ್‌ ಸ್ಥಾಪಿಸಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿವೇತನ, ಪುಸ್ತಕ ವಿತರಣೆ, ಬಡವರ ವೆಚ್ಚವನ್ನು ಕಡಿಮೆ ಮಾಡುವ ಸಾಮೂಹಿಕ ವಿವಾಹ ಏರ್ಪಡಿಸುತ್ತಿದ್ದಾರೆ. ಇಂತಹ ಜನನಾಯಕರಾದ ಜಿ.ಎಂ. ಸಿದ್ದೇಶ್ವರ್‌ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೂಮ್ಮೆ ವಿಜಯೋತ್ಸವ ಆಚರಿಸಲಿ ಎಂದು ಆಶಯ ವ್ಯಕ್ತಪಡಿಸಿದರು.

ಚಿತ್ರದುರ್ಗದ ಮಾದಾರ ಗುರುಪೀಠದ ಶ್ರೀ ಬಸವ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ಕಳೆದ ನಾಲ್ಕೈದು ದಶಕಗಳ ಹಿಂದೆ ಸಾಮೂಹಿಕ ವಿವಾಹ ಎಂದರೆ ಜನರಲ್ಲಿ ಕೀಳರಿಮೆ ಭಾವವಿತ್ತು. ಆದರಿಂದು ಯಾವುದೇ ಜಾತಿ, ಧರ್ಮ, ವರ್ಗ, ಪಂಥ, ಭೇದವಿಲ್ಲದ ಭಾವೈಕ್ಯತಾ ವೇದಿಕೆಯಾಗಿವೆ. ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಜೊತೆಗೆ ಆರ್ಥಿಕವಾಗಿ ಹಿಂದುಳಿದ ಎಲ್ಲಾ ಬಡಜನರಿಗೂ ಸಾಕಷ್ಟು ಪ್ರಯೋಜನಕಾರಿಯಾಗಿದೆ ಎಂದರು.

ಜೀವನದಲ್ಲಿ ಬರೀ ಸಂಪತ್ತಿನ ಕ್ರೋಡೀಕರಣ ಮಾಡಿದರೆ ಸಾಲದು. ಅದರ ಒಂದಿಷ್ಟು ಭಾಗವನ್ನು ಸಮಾಜದ ಒಳಿತಿಗೂ ಮೀಸಲಿಡಬೇಕು. ಅಂತಹ ಕಾರ್ಯವನ್ನು ಸಂಸದ ಜಿ.ಎಂ. ಸಿದ್ದೇಶ್ವರ್‌ ಮಾಡುತ್ತಾ ಬಂದಿದ್ದು, ಪೋಷಕರಿಗೆ ಕೀರ್ತಿ ತರುವ ಕೆಲಸ ಮಾಡುತ್ತಿದ್ದಾರೆ. ಇಂತಹ ಜನನಾಯಕರನ್ನು ಮಧ್ಯಕರ್ನಾಟಕ ದಾವಣಗೆರೆ ಜನರು ಸೋಲಿಲ್ಲದ ನಾಯಕರನ್ನಾಗಿ ಮಾಡಲಿ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಂಸದ ಜಿ.ಎಂ. ಸಿದ್ದೇಶ್ವರ್‌ ಮಾತನಾಡಿ, ನಮ್ಮ ತಂದೆ-ತಾಯಿ ಹೆಸರಿನ ಟ್ರಸ್ಟ್‌ನಿಂದ 2006ರಿಂದಲೂ ಸಾಮೂಹಿಕ ವಿವಾಹ ಮಾಡುತ್ತಾ ಬರಲಾಗಿದೆ. ಈ ಬಾರಿ 44 ಜೋಡಿಗಳ ಸಾಮೂಹಿಕ ವಿವಾಹ ನೆರವೇರಿಸಲಾಗಿದೆ. ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿವೇತನ, ಪುಸ್ತಕ, ಬ್ಯಾಗ್‌ ವಿತರಣೆ, ಆರೋಗ್ಯ ಸೇವೆ, ಐಎಎಸ್‌. ಕೆಎಎಸ್‌ನಂತಹ ಸ್ಪರ್ಧಾತ್ಮ ಪರೀಕ್ಷೆಗೆ ಓದುವ ಬಡ ವಿದ್ಯಾರ್ಥಿಗಳಿಗೂ ಸಹಾಯ ಮಾಡಲಾಗಿದೆ ಎಂದು ತಿಳಿಸಿದರು.

ನವ ದಂಪತಿಗಳು ಅನೋನ್ಯವಾಗಿ ಪ್ರೀತಿ, ವಿಶ್ವಾಸದಿಂದ ಬಾಳಿ. ಮುಂದಿನ ದಿನಗಳಲ್ಲಿ ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ. ಸಾಕಿ ಸಲುಹಿದ ಪೋಷಕರನ್ನು ವೃದ್ಧಾಶ್ರಮಗಳಿಗೆ ತಳ್ಳದೇ ನಿಮ್ಮ ಜೊತೆ ಇಟ್ಟಕೊಂಡು ಪ್ರೀತಿಯಿಂದ ನೋಡಿಕೊಳ್ಳಿ ಎಂದರು.

ಆವರಗೊಳ್ಳ ಪುರವರ್ಗ ಹಿರೇಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌, ಗಾಯತ್ರಿ ಸಿದ್ದೇಶ್ವರ್‌, ಶಾಸಕರಾದ ಮಾಡಾಳ್‌ ವಿರೂಪಾಕ್ಷಪ್ಪ, ಕರುಣಾಕರ್‌ರೆಡ್ಡಿ, ಎಸ್‌.ವಿ. ರಾಮಚಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್‌ ಜಾಧವ್‌, ಮಾಜಿ ಶಾಸಕ ಬಿ.ಪಿ. ಹರೀಶ್‌, ಡಾ| ಎ.ಎಚ್. ಶಿವಯೋಗಿಸ್ವಾಮಿ, ಜಿ.ಎಂ. ಲಿಂಗರಾಜ್‌, ಪ್ರಭುದೇವ್‌, ಅನಿಲ್‌ಕುಮಾರ್‌, ಪ್ರಸಾದ್‌, ಹನಗವಾಡಿ ವೀರೇಶ್‌, ಸಮಿತಿ ಅಧ್ಯಕ್ಷ ಕೆ.ಬಿ. ಶಂಕರ್‌ನಾರಾಯಣ್‌, ಡಾ| ನಾಗಪ್ಪ ಕಡ್ಲಿ, ಏಕನಾಥ್‌ ಡಿ. ರಾಯ್ಕರ್‌, ವಿಜಯ್‌ಕುಮಾರ್‌, ಎಸ್‌. ಆದಿನಾಥ್‌, ವಿನಾಯಕ ರಾನಡೆ, ಬಿ.ಎಸ್‌. ಜಗದೀಶ್‌, ಕೊಂಡಜ್ಜಿ ಜಯಪ್ರಕಾಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.