ಲಿಂಗಾಯತ ಧರ್ಮಕ್ಕೆ ಬೇಕಿದೆ ಸ್ವತಂತ್ರ ಸ್ಥಾನಮಾನ 


Team Udayavani, Aug 2, 2017, 1:21 PM IST

02-DV-1.jpg

ದಾವಣಗೆರೆ: ಮಹಾನ್‌ ದಾರ್ಶನಿಕ ಬಸವಣ್ಣನವರೇ ಧರ್ಮಗುರು, ವಚನಗಳೇ ಧರ್ಮಗ್ರಂಥ, ಕನ್ನಡವೇ ಧರ್ಮಭಾಷೆ, ಬಸವಕಲ್ಯಾಣವೇ ಧರ್ಮಕೇಂದ್ರ. ಹಾಗಾಗಿ ಬಸವಣ್ಣನವರ ಅನುಯಾಯಿಗಳು ಒಪ್ಪುವ, ಅಪ್ಪುವ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕು ಎಂದು ದಾವಣಗೆರೆ ಸರಸ್ವತಿ ಬಡಾವಣೆಯಲ್ಲಿರುವ ಬಸವ ಬಳಗದ ಪದಾಧಿಕಾರಿಗಳು ಒಕ್ಕೊರಲಿನಿಂದ ಒತ್ತಾಯಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಬಸವ ಬಳಗದ ಉಪಾಧ್ಯಕ್ಷ ಹುಚ್ಚಪ್ಪ ಮಾಸ್ತರ್‌, ಲಿಂಗ ಧರಿಸಿದವರು ಲಿಂಗಾಯತರು. ವೀರಶೈವ-ಲಿಂಗಾಯತ ಒಂದಲ್ಲ. ಹಾಗಾಗಲು ಸಾಧ್ಯವೇ ಇಲ್ಲ. ಬಸವಣ್ಣನವರೇ ನಮ್ಮ ಧರ್ಮಗುರು, ಅವರ ವಚನಗಳೇ ಧರ್ಮಗ್ರಂಥ. ಹಾಗಾಗಿ ನಮಗೆ ಸ್ವತಂತ್ರ ಧರ್ಮದ ಸ್ಥಾನಮಾನ ನೀಡಬೇಕು. ಬೇರೆಯವರು ಏನಾದರೂ ಹೇಳಿಕೊಳ್ಳಲಿ, ಅವರಿಗೂ ಸ್ವತಂತ್ರ ಧರ್ಮದ ಸ್ಥಾನಮಾನ ಕೊಡಲಿ ಬೇಡ ಎನ್ನುವುದಿಲ್ಲ. ನಮ್ಮದು ಲಿಂಗಾಯತ ಧರ್ಮ. ಹಾಗಾಗಿ ನಮಗೆ ಸ್ವತಂತ್ರ ಧರ್ಮದ ಸ್ಥಾನಮಾನ ಕೊಡಬೇಕು ಎಂದು ಕೋರಿದರು. 

12ನೇ ಶತಮಾನದಲ್ಲಿ ಕನ್ನಡದಲ್ಲಿ ಲಿಂಗಾಯತ ಧರ್ಮ ಉದಯವಾಯಿತು. ನಾವೆಲ್ಲರೂ ಬಸವಣ್ಣನವರನ್ನೇ ನಮ್ಮ ಧರ್ಮಗುರುಗಳಾಗಿ ಸ್ವೀಕರಿಸಿದ್ದೇವೆ. ಯಾವುದೇ ಧರ್ಮ, ಜಾತಿಯವರೇ ಆಗಿರಲಿ ಲಿಂಗಧಾರಿಗಳಾದಲ್ಲಿ ಸ್ವಾಗತಿಸುತ್ತೇವೆ. ನಮ್ಮಲ್ಲಿನ 30-40 ಒಳಪಂಗಡಗಳು ಇದ್ದರೂ ಲಿಂಗ ಧರಿಸಿದವರೆಲ್ಲ ಲಿಂಗಾಯತರು. ಬಸವಧರ್ಮದವರು. ನಮ್ಮ ಲಿಂಗಾಯತ ಧರ್ಮವನ್ನ ಸ್ವತಂತ್ರ ಧರ್ಮವನ್ನಾಗಿ ಮಾಡಬೇಕು ಎಂಬುದು ಬಸವಬಳಗದ ಆಗ್ರಹ ಎಂದು ತಿಳಿಸಿದರು.

1882ರಲ್ಲಿಯೇ ಬ್ರಿಟಷ್‌ ಅಧಿಕಾರಿ ಸ್ಟೀಲ್‌ ಎಂಬ ಅಧಿಕಾರಿ ವೀರಶೈವ ಧರ್ಮಕ್ಕೆ ಸ್ವತಂತ್ರ ಧರ್ಮದ ಸ್ಥಾನಮಾನ ನೀಡಲು ಸ್ಪಷ್ಟವಾಗಿ ನಿರಾಕರಿಸಿದ್ದರು. 2,08,325 ದಷ್ಟು ಸಂಸ್ಕೃತ ಶ್ಲೋಕಗಳನ್ನು ಕೊಟ್ಟು ಅವುಗಳ ಆಧಾರದಲ್ಲಿ ಸ್ವತಂತ್ರ ಧರ್ಮಧ ಸ್ಥಾನಮಾನ ಕೇಳಲಾಗಿತ್ತು. ಆಗ ಬ್ರಿಟಿಷ್‌ ಅಧಿಕಾರಿ ಸ್ಟೀಲ್‌ ಕೇಳಿದ್ದ ಮತ ಸ್ಥಾಪನೆ ಕಾಲ, ಮತ ಸ್ಥಾಪಕರು ಯಾರು, ಧಾರ್ಮಿಕ ಆಚರಣೆ ಏನು, ಗುರು-ವಿರಕ್ತರ ವ್ಯತ್ಯಾಸ, ಮಠಪತಿ ಕೆಲಸವೇನು, ಗಣಚಾರಿ ಎಂದರೇನು… ಎಂಬ ಆರು ಪ್ರಶ್ನೆಗಳಿಗೆ ಈವರೆಗೆ ಯಾರೂ ಉತ್ತರಿಸಿಯೇ ಇಲ್ಲ ಎಂದು ತಿಳಿಸಿದರು. 

ವೀರಶೈವ-ಲಿಂಗಾಯತ ಒಂದೇ ಎಂದು ಹೇಳುವ ಮೂಲಕ ಜನರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡಲಾಗುತ್ತಿದೆ.
ವೀರಶೈವರು-ಲಿಂಗಾಯತರು ಒಂದು ಅಲ್ಲವೇ ಅಲ್ಲ. ವೀರಶೈವರು-ಲಿಂಗಾಯತರು ಒಂದೇ ಎನ್ನುವುದಾದರೆ ಧರ್ಮಗುರುಗಳು ಎಂಬುದಕ್ಕೆ ಸಂಬಂಧಿತರು ಉತ್ತರ ನೀಡಬೇಕು. ಈ ಹಿಂದೆಯೂ ಪ್ರತ್ಯೇಕ ವೀರಶೈವ ಧರ್ಮದ
ಸ್ಥಾನಮಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿತ್ತು ಎಂದು ತಿಳಿಸಿದರು. ಬಸವಬಳಗದ ವಿ. ಸಿದ್ದರಾಮ ಶರಣರು, ಎಚ್‌.ಎಂ. ಸ್ವಾಮಿ, ದೇವಿಗೆರೆ ವೀರಭದ್ರಪ್ಪ, ಅಶೋಕ್‌ ಬಣಕಾರ್‌, ಟಿ.ಎಸ್‌. ಜಯರುದ್ರೇಶ್‌, ಅಜ್ಜಂಪುರಶೆಟ್ರಾ ಷಡಕ್ಷರಿ, ವೀಣಾ ಮಂಜುನಾಥ್‌, ಸುಮಂಗಲ, ಗಾಯತ್ರಿ, ನಿರ್ಮಲಮ್ಮ, ಲತಾ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.