ಕೋವಿಡ್‌ನಿಂದ ಮೃತ ರೈತರ ಸಾಲಮನ್ನಾಕ್ಕೆ ಸಿದ್ಧತೆ 


Team Udayavani, Jul 17, 2021, 9:28 AM IST

ಕೋವಿಡ್‌ನಿಂದ ಮೃತ ರೈತರ ಸಾಲಮನ್ನಾಕ್ಕೆ ಸಿದ್ಧತೆ 

ಸಾಂದರ್ಭಿಕ ಚಿತ್ರ

ದಾವಣಗೆರೆ: ಮಹಾಮಾರಿ ಕೋವಿಡ್‌ನಿಂದ ಮೃತಪಟ್ಟ ರೈತರು ಸಹಕಾರಿ ಸಂಘ/ ಬ್ಯಾಂಕ್‌ ಗಳಲ್ಲಿ ಮಾಡಿದ ಸಾಲದ ವಿವರಗಳನ್ನು ಸರ್ಕಾರ ಸಂಗ್ರಹಿಸುತ್ತಿದ್ದು, ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟ 402 ರೈತರ ಸಾಲದ ಮಾಹಿತಿ ಸಹಕಾರ ಇಲಾಖೆ ಕೇಂದ್ರ ಕಚೇರಿಗೆ ಕಳುಹಿಸಲಾಗಿದೆ.

ರಾಜ್ಯ ಸಹಕಾರ ಇಲಾಖೆಯ ಸಹಕಾರ ಸಂಘಗಳ ನಿಬಂಧಕರು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಹಾಗೂ ಅಪೆಕ್ಸ್‌ ಬ್ಯಾಂಕ್‌ಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆದು ಸಹಕಾರ ಸಂಘ/ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಕೋವಿಡ್‌ನಿಂದ ಮೃತಪಟ್ಟ ಸಾಲಗಾರರ ಮಾಹಿತಿ ಕೊಡಲು ಸೂಚಿಸಿರುವ ಹಿನ್ನೆಲೆಯಲ್ಲಿ ಈ ಮಾಹಿತಿ ಕಳುಹಿಸಲಾಗಿದ್ದು, ಕೋವಿಡ್‌ನಿಂದ ಮೃತಪಟ್ಟಜಿಲ್ಲೆಯ 402ರೈತರಿಗೆ ಸಂಬಂಧಿಸಿ 2.66 ಕೋಟಿ ರೂ. ಸಾಲದ ಮಾಹಿತಿ ನೀಡಲಾಗಿದೆ.

ಸಹಕಾರ ಸಂಘ/ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಜನವರಿ 2020ರಿಂದ ಕೋವಿಡ್‌ನಿಂದ ಮೃತಪಟ್ಟ ಸಾಲಗಾರರ ಸಾಲದ ಮಾಹಿತಿ ಪರಿಶೀಲನೆಗೆಬೇಕಾಗಿದೆ ಎಂದು ಪತ್ರದಲ್ಲಿ ತಿಳಿಸಿರುವನಿಬಂಧಕರು, ಕೃಷಿ ಮತ್ತು ಕೃಷಿಯೇತರ ಸಾಲ ಪಡೆದು ಕೋವಿಡ್‌ನಿಂದ ಮೃತಪಟ್ಟ ಸಾಲಗಾರರು30-6-2021ಕ್ಕೆ ಹೊರ ಬಾಕಿ ಹೊಂದಿರುವಸಾಲದ ಮಾಹಿತಿಯನ್ನು ನಿಗದಿತನಮೂನೆಯಲ್ಲಿ ಕ್ರೋಢೀಕರಿಸಿ ಕಚೇರಿಗೆ ಕಳುಹಿಸಬೇಕು ಎಂದು ಸೂಚಿಸಿದ್ದರು.

ಸಂಗ್ರಹಿಸಿದ ಮಾಹಿತಿ: ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳ ಹೆಸರಿನಲ್ಲಿ ಸಾಲದ ಖಾತೆ ಇದ್ದಲ್ಲಿ ಮಾತ್ರಮಾಹಿತಿ ಮಾಹಿತಿ ನೀಡಬೇಕು. ಸಾಲ ಪಡೆದಕುಟುಂಬದ ಸದಸ್ಯರು ಕೋವಿಡ್‌ನಿಂದ ಮೃತಪಟ್ಟರೆಅಂಥ ಸಾಲದ ಮಾಹಿತಿ ನಮೂದಿಸುವುದು ಬೇಡಎಂದು ಸಹ ನಿಬಂಧಕರು ನಿರ್ದೇಶಿಸಿದ್ದು, ಆ ಪ್ರಕಾರ ನಿಗದಿತ ನಮೂನೆಯಲ್ಲಿ ಕೋವಿಡ್‌ನಿಂದ ಮೃತಪಟ್ಟ ಸಾಲಗಾರರ ಮಾಹಿತಿ ಕೊಡಲಾಗಿದೆ.

ಸಾಲಗಾರರ ಹೆಸರು, ಸಾಲಗಾರರ ತಂದೆ ಇಲ್ಲವೇ ಗಂಡನ ಹೆಸರು, ತಾಲೂಕು, ಜಿಲ್ಲೆ, ಆಧಾರ್‌ ಸಂಖ್ಯೆ,ಸಾಲದ ಖಾತೆ ಸಂಖ್ಯೆ, ಸಾಲದ ಉದ್ದೇಶ,ಸಾಲ ಪಡೆದ ಮೊತ್ತ, 30-6-2021ಕ್ಕೆಹೊರ ಬಾಕಿ ಅಸಲು-ಬಡ್ಡಿ, ಮರಣಹೊಂದಿದ ದಿನಾಂಕ, ಕೋವಿಡ್‌ ಮರಣ ಪ್ರಮಾಣ ಪತ್ರದ ದಿನಾಂಕದ ಮಾಹಿತಿ ನೀಡಲಾಗಿದೆ.

ಈ ವಿಚಾರದಲ್ಲಿ ಸರ್ಕಾರ ಕೋವಿಡ್‌ನಿಂದ ಮೃತಪಟ್ಟ ರೈತರ ಕೃಷಿ ಸಾಲವಷ್ಟೇ ಮನ್ನಾ ಮಾಡುತ್ತದೆಯೋ, ಕೃಷಿಯೇತರ ಸಾಲವನ್ನೂ ಮನ್ನಾ ಮಾಡುತ್ತದೆಯೋ, ಸಾಲದ ಬಡ್ಡಿಯಷ್ಟೇ ಮನ್ನಾ ಮಾಡುತ್ತದೆಯೋ ಇಲ್ಲವೇ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ ಬೆಳ್ಳಿ ಪ್ರಕಾಶ್‌ ಅವರು ಘೋಷಿಸಿದಂತೆಗರಿಷ್ಠ ಒಂದು ಲಕ್ಷ ರೂ.ವರೆಗೆ ಮಾತ್ರ ಸಾಲಮನ್ನಾ ಮಾಡುತ್ತದೆಯೋ ಎಂಬುದು ರೈತ ಕುಟುಂಬದವರಲ್ಲಿ ಕುತೂಹಲ ಕೆರಳಿಸಿದೆ.

ಸಾಲಮನ್ನಾಕ್ಕೆ ಪ್ರಸ್ತಾವನೆ: ಸಹಕಾರ ಇಲಾಖೆಯಿಂದ ಕೋವಿಡ್‌ನಿಂದ ಮೃತಪಟ್ಟ ಸಾಲಗಾರರ ಮಾಹಿತಿ ಕೇಳಿದ್ದು, ನಿಗದಿತನಮೂನೆಯಲ್ಲಿ ನಾವು ಮಾಹಿತಿ ಕಳುಹಿಸಿ, ಸಂಪೂರ್ಣ ಸಾಲಮನ್ನಾ ಮಾಡಲು ಮನವಿ ಮಾಡಿದ್ದೇವೆ.ಸಾಲಮನ್ನಾ ವಿಚಾರವಾಗಿ ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತದೆಯೋ ಕಾಯ್ದು ನೋಡಬೇಕು. –ಜೆ.ಎಸ್‌. ವೇಣುಗೋಪಾಲರೆಡ್ಡಿ,  ಅಧ್ಯಕ್ಷರು, ಡಿಸಿಸಿ ಬ್ಯಾಂಕ್‌, ದಾವಣಗೆರೆ.

ಕೋವಿಡ್‌ನಿಂದ ಮೃತಪಟ್ಟವರ ಸಹಕಾರಿ ಸಂಘಗಳಲ್ಲಿನ ಸಾಲಮನ್ನಾ ಮಾಡುವ ರಾಜ್ಯ ಸರ್ಕಾರ ಚಿಂತನೆ ಸ್ವಾಗತಾರ್ಹ. ಇದರ ಜತೆಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಕೋವಿಡ್‌ನಿಂದ ಮೃತಪಟ್ಟ ರೈತರ ಸಾಲವನ್ನೂ ಮನ್ನಾ ಮಾಡಲು ಕ್ರಮವಹಿಸಬೇಕು.-ತೇಜಸ್ವಿ ಪಟೇಲ್‌, ರೈತ ಮುಖಂಡರು.

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.