ಸಂಪೂರ್ಣ ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ


Team Udayavani, May 22, 2021, 9:47 AM IST

ಸಂಪೂರ್ಣ ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ

ದಾವಣಗೆರೆ: ಮಹಾಮಾರಿ ಕೊರೊನಾ ವೈರಸ್‌ ಹರಡುವಿಕೆ ಸರಪಳಿ ತುಂಡರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಶುಕ್ರವಾರದಿಂದ ಜಾರಿಗೊಳಿಸಿರುವ ಸಂಪೂರ್ಣ ಲಾಕ್‌ಡೌನ್‌ಗೆ ಜಿಲ್ಲಾ ಕೇಂದ್ರ ದಾವಣಗೆರೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕೊರೊನಾ ಕರ್ಫ್ಯೂ ನಿರೀಕ್ಷಿತ ಪ್ರಮಾಣದ ಫಲಿತಾಂಶ ನೀಡದ ಹಿನ್ನೆಲೆ ಮತ್ತು ಸಂಪೂರ್ಣ ಲಾಕ್‌ಡೌನ್‌ಗೆ ಹೆಚ್ಚುತ್ತಿರುವ ಒತ್ತಡದ ಕಾರಣಕ್ಕೆ ಜಿಲ್ಲಾಡಳಿತ ಮೇ 21 ರ ಶುಕ್ರವಾರ ಬೆಳಗ್ಗೆ 10 ರಿಂದ ಮೇ 24ರ ಸೋಮವಾರ ಬೆಳಗ್ಗೆ 6 ರವರೆಗೆ ಸಂಪೂರ್ಣ ಲಾಕ್‌ಡೌನ್‌ ಘೋಷಿಸಿದೆ.

ಮೂರು ದಿನ ಸಂಪೂರ್ಣ ಲಾಕ್‌ಡೌನ್‌ ಕಾರಣಕ್ಕೆ ಜನರು ಶುಕ್ರವಾರ ಬೆಳಗ್ಗೆ 6 ರಿಂದ 10ರ ವರೆಗೆ ಅಗತ್ಯ ವಸ್ತುಗಳನ್ನು ಮುಗಿ ಬಿದ್ದು ಖರೀದಿಸಿದರು. ಕೆ.ಆರ್‌. ಮಾರ್ಕೆಟ್‌, ಗಡಿಯಾರ ಕಂಬದ ರಸ್ತೆ,ವಿಜಯಲಕ್ಷ್ಮಿ ರಸ್ತೆ, ಚೌಕಿಪೇಟೆ, ಚಾಮರಾಜಪೇಟೆ,ಮಂಡಿಪೇಟೆ, ವಿನೋಬ ನಗರ 2 ಮತ್ತು 3ನೇ ಮುಖ್ಯ ರಸ್ತೆ, ನಿಟುವಳ್ಳಿ, ವಿದ್ಯಾನಗರ,ಆಂಜನೇಯ ಬಡಾವಣೆ, ತರಳಬಾಳು ಬಡಾವಣೆಹೀಗೆ ಅನೇಕ ಕಡೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನಸಂದಣಿ, ವಾಹನ ಸಂಚಾರ ಹೆಚ್ಚಾಗಿರುವುದು ಸಾಮಾನ್ಯವಾಗಿತ್ತು.

ಇನ್ನು ಮೂರು ದಿನ ತರಕಾರಿ ದೊರೆಯುವುದಿಲ್ಲಎಂದು ಜನರು ತರಕಾರಿ ಖರೀದಿಗೆ ಹೆಚ್ಚಿನ ಗಮನನೀಡಿದರ ಪರಿಣಾಮ ಕೆಲವಾರು ಅಂಗಡಿಗಳಲ್ಲಿಕೆಲ ಹೊತ್ತಿನಲ್ಲೇ ತರಕಾರಿ ಖಾಲಿ ಖಾಲಿ. ಹಾಲಿನಕೇಂದ್ರ ತೆರೆಯಲು ಅವಕಾಶವಿದ್ದರೂ ಕೆಲವಾರು ಕಡೆ ಹಾಲಿನ ಕೇಂದ್ರಗಳು ಬಂದ್‌ ಆಗಿದ್ದವು. ಸೋಮವಾರದವರೆಗೆ ಮಾಂಸ, ಮೀನು ಮಾರಾಟಕ್ಕೆ ಅವಕಾಶ ಇಲ್ಲದ ಕಾರಣಕ್ಕೆ ವಿನೋಬ ನಗರ 2ನೇ ಮುಖ್ಯ ರಸ್ತೆ, ಕೆಟಿಜೆ ನಗರ, ಡಾಂಗೇಪಾರ್ಕ್‌, ಭಾರತ್‌ ಕಾಲೋನಿ, ಹೊಂಡದ ವೃತ್ತ,ಹಗೇದಿಬ್ಬ ವೃತ್ತ ಇತರೆ ಭಾಗದಲ್ಲಿ ಮಾಂಸದ ಅಂಗಡಿಗಳ ಮುಂದೆ ಜನಸಂದಣಿ ಕಂಡು ಬಂತು. ಅಗತ್ಯ ವಸ್ತುಗಳ ಖರೀದಿ ಸಮಯ ಮುಗಿದ ನಂತರವೂ ಜನರು ಅಲ್ಲಲ್ಲಿ ಅಂಗಡಿಗಳಿಗೆ ಎಡತಾಕುವುದು ನಡೆಯುತ್ತಲೇ ಇತ್ತು.

ಹೆಚ್ಚು ವಾಹನ, ಜನರ ಸಂಚಾರದಿಂದ ಕೆಲ ಭಾಗದಲ್ಲಿ ಟ್ರಾಫಿಕ್‌ ಜಾಮ್‌ ಸಹ ಆಗಿತ್ತು.ಅಗತ್ಯ ವಸ್ತುಗಳ ಖರೀದಿ ನೀಡಲಾಗಿದ್ದ ಸಮಯದ ನಂತರ ಪೊಲೀಸರು ಮತ್ತು ನಗರಪಾಲಿಕೆ ಅಧಿಕಾರಿಗಳು ಫೀಲ್ಡ್‌ಗೆ ಇಳಿದರು. ವಿನಾಕಾರಣ ಓಡಾಡದಂತೆ ಸೂಚನೆ ನೀಡಿದರು. ಕೆಲವರಿಗೆ ಎಚ್ಚರಿಕೆ ನೀಡಿದರು. ಪೊಲೀಸರು ಕೆಲವರಿಗೆ ಬಿಸಿ ಮುಟ್ಟಿಸಿದರು.

ದಾವಣಗೆರೆಯ ಪ್ರಮುಖ ವೃತ್ತ, ರಸ್ತೆಗಳ ಬಂದ್‌ ಮಾಡಲಾಗಿತ್ತು. ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ಲಾಕ್‌ಡೌನ್‌ ನಡುವೆಯೂ ಸಂಚರಿಸುತ್ತಿದ್ದ ವಾಹನ ಸವಾರರ ತಡೆದು, ಕಾರಣ ಕೇಳಿದರು. ಸಕಾರಣ ಇಲ್ಲದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸಿದರು.ಅನೇಕ ವಾಹನಗಳನ್ನು ವಶಕ್ಕೆ ಪಡೆದು, ಜಿಲ್ಲಾಕವಾಯತ್‌ ಮೈದಾನಕ್ಕೆ ರವಾನಿಸಿದರು. ಔಷಧಿ ಅಂಗಡಿ, ಆಸ್ಪತ್ರೆಗಳನ್ನ ಹೊರತುಪಡಿಸಿದರೆದಿನಸಿ, ತರಕಾರಿ, ಎಲೆಕ್ಟ್ರಿಕಲ್‌, ಹೋಟೆಲ್‌, ಗ್ಯಾರೇಜ್‌, ಸಲೂನ್‌, ಬ್ಯೂಟಿಪಾರ್ಲರ್‌, ಸ್ಪಾ,ವಾಣಿಜ್ಯ ಸಂಕೀರ್ಣ, ಆಟೋ ಸಂಚಾರ ಎಲ್ಲವೂ ಬಂದ್‌ ಆಗಿದ್ದವು. ಹೋಟೆಲ್‌ಗ‌ಳಲ್ಲಿ ಆನ್‌ಲೈನ್‌ಪಾರ್ಸೆಲ್‌, ಕೃಷಿ ಚಟುವಟಿಕೆಗೆ ಮಾತ್ರ ಅವಕಾಶ ಇತ್ತು. ಜನ, ವಾಹನ ಸಂಚಾರ ಇಲ್ಲದೆ ಪ್ರಮುಖ ರಸ್ತೆ, ವೃತ್ತಗಳು ಬಿಕೋ ಎನ್ನುತ್ತಿದ್ದವು. ಸಮಯಕಳೆಯುತ್ತಿದ್ದಂತೆ ವಾಣಿಜ್ಯ ನಗರಿ ದಾವಣಗೆರೆ ಅಕ್ಷರಶಃ ಸ್ತಬ್ದವಾಯಿತು. ಸಂಪೂರ್ಣ ಲಾಕ್‌ಡೌನ್‌ ನ ಮೊದಲ ದಿನ ಯಶಸ್ವಿಯಾಯಿತು.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.