ರಿಲಯನ್ಸ್‌ ಮಾರ್ಕೆಟ್‌ಗೆ ಬೀಗ ಜಡಿದ ಪಾಲಿಕೆ


Team Udayavani, Oct 27, 2018, 3:57 PM IST

dvg-3.jpg

ದಾವಣಗೆರೆ: ನಿಷೇಧಿತ ಪ್ಲಾಸ್ಟಿಕ್‌ ಬಳಕೆ, ನಿರ್ವಹಣೆಯಲ್ಲಿ ಅವ್ಯವಸ್ಥೆ, ಅವಧಿ ಮೀರಿದ ಪದಾರ್ಥಗಳ ಮಾರಾಟ ಮತ್ತು ನಗರ ಪಾಲಿಕೆಗೆ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ನಗರದ ಪಿಬಿ ರಸ್ತೆಯಲ್ಲಿರುವ ರಿಲಯನ್ಸ್‌ ಮಾರ್ಕೆಟ್‌ ಗೆ ಶುಕ್ರವಾರ ಪಾಲಿಕೆ ಆರೋಗ್ಯಾಧಿಕಾರಿಗಳ ನೇತೃತ್ವದ ತಂಡ ದಾಳಿ ನಡೆಸಿ, ಬೀಗ ಜಡಿದಿದೆ.

ಸಾರ್ವಜನಿಕರ ದೂರಿನ ಮೇರೆಗೆ ರಿಲಯನ್ಸ್‌ ಮಾರ್ಕೆಟ್‌ಗೆ ಕಳೆದ ಅ. 13ರಂದು ಪಾಲಿಕೆ ಆಯುಕ್ತರು ಮತ್ತು ಆರೋಗ್ಯ ಶಾಖೆ ಅಧಿಕಾರಿಗಳ ತಂಡ ದಿಢೀರ್‌ ಭೇಟಿ ನೀಡಿದಾಗ ಸುಮಾರು 1.5 ಟನ್‌ನಷ್ಟು ಅಪಾರ ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್‌ ಪತ್ತೆ ಆಗಿತ್ತು. ಜತೆಗೆ ಅವಧಿ ಮುಗಿದ, ಹಳಸಿದ ಕೇಕ್‌ ಸೇರಿದಂತೆ ಆಹಾರ ಪದಾರ್ಥಗಳು ಮತ್ತು ಅವುಗಳ ಮೇಲಿನ ಲೇಬಲ್‌ ಕಿತ್ತು ಮಾರಾಟ, ಅಸಮರ್ಪಕ ತ್ಯಾಜ್ಯ ವಿಲೇವಾರಿ ಸೇರಿದಂತೆ ಉದ್ದಿಮೆಯಲ್ಲಿ ಹಲವು ನ್ಯೂನ್ಯತೆಗಳು ಮತ್ತು ಕಾನೂನು ಉಲಂಘನೆ ಎಸಗಿರುವುದು ಕಂಡು ಬಂದಿತ್ತು. ಪಾಲಿಕೆಯಿಂದ ನೀಡಲಾಗಿರುವ ಉದ್ದಿಮೆ ಪರವಾನಗಿ ಪರಿಶೀಲಿಸಿದಾಗ ಪರವಾನಗಿ ಪಡೆಯಲು ವಾಸ್ತವದಲ್ಲಿ ಒಟ್ಟು ವಿಸ್ತೀರ್ಣಕ್ಕೆ ಬದಲಾಗಿ ಕಡಿಮೆ ವಿಸ್ತೀರ್ಣವೆಂದು ತಪ್ಪು ಮಾಹಿತಿ ನೀಡಿರುವುದಲ್ಲದೆ, ಸೂಪರ್‌ ಮಾರ್ಕೆಟ್‌ ಎಂದು ಪರವಾನಗಿ ಪಡೆದು ತೆರೆದ ಆಹಾರ ಪದಾರ್ಥಗಳನ್ನು ಮಾರುವ ಮೂಲಕ ಕರ್ನಾಟಕ ಪೌರ ನಿಗಮಗಳ ಕಾಯ್ದೆಯಡಿ ಪ್ರಮಾದವೆಸಗಲಾಗಿದೆ.

ಅವಧಿ ಮುಗಿದ ಆಹಾರ ಪದಾರ್ಥಗಳನ್ನು ನಾಶಪಡಿಸದೇ ತ್ಯಾಜ್ಯದೊಂದಿಗೆ ಸುರಿದು ಸಾಗಾಣಿಕೆ ಮಾಡುವ ಮೂಲಕ ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಉಲ್ಲಂಘಿ ಸಿರುವುದು ದಾಳಿ ವೇಳೆ ಬೆಳಕಿಗೆ ಬಂದಿತ್ತು.  ಕಟ್ಟಡ ನಿರ್ಮಾಣಕ್ಕೆ ಪಾಲಿಕೆಯಿಂದ ಮಂಜೂರಾದ ಪರವಾನಗಿ ಮತ್ತು ನೀಲನಕ್ಷೆಗೆ ವಿರುದ್ಧವಾಗಿ ಕಾನೂನು ಬಾಹಿರವಾಗಿ ಕಟ್ಟಡ ನಿರ್ಮಿಸಿರುವ ಬಗ್ಗೆ ಜಾರಿ ಮಾಡಿದ್ದ ನೋಟಿಸ್‌ ಗೆ ರಿಲಯನ್ಸ್‌ ಮಾರ್ಕೆಟ್‌ನವರು ಸಮಂಜಸ ಉತ್ತರ ಕೊಟ್ಟಿರಲಿಲ್ಲ. ಹಾಗಾಗಿ ಪಾಲಿಕೆ ಆರೋಗ್ಯಾಧಿಕಾರಿಗಳು, ಪರಿಸರ ಅಭಿಯಂತರ ಅಧಿಕಾರಿಗಳ ತಂಡ ಮಾರ್ಕೆಟ್‌ನ 6 ಗೇಟ… ಬಂದ್‌ಗೊಳಿಸಿ ಜಪ್ತಿಗೊಳಿಸಲಾಗಿದೆ ಎಂದು ಪಾಲಿಕೆ ಆರೋಗ್ಯ ಶಾಖೆಯ ಸಹಾಯಕ ನಿರ್ದೇಶಕ ಡಾ. ಚಂದ್ರಶೇಖರ್‌ ಸುಂಕದ್‌
ತಿಳಿಸಿದ್ದಾರೆ. 

ಪರಿಸರ ಅಭಿಯಂತರ ಸುನೀಲ್‌, ಆರೋಗ್ಯ ನಿರೀಕ್ಷಕ ಸಂತೋಷ್‌ ಕುಮಾರ್‌, ಅಲ್ತಮಷ್‌, ರಾಜಪ್ಪ, ಪ್ರಕಾಶ…, ಉಷಾ, ಲಕ್ಷ್ಮೀ, ಮಹಾಂತೇಶ್‌, ಜಯಪ್ರಕಾಶ್‌, ಮಹಾಂತೇಶ್‌, ಕರಿಬಸಪ್ಪ, ಕಾಂತರಾಜ್‌ ಇತರರು ದಾಳಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.