ಬರವಿದ್ದರೂ ಸಂತ್ರಸ್ತರಿಗೆ ಸಹಾಯ ಭರಪೂರ

•ನೆರೆ ಪೀಡಿತರಿಗೆ ಜಗಳೂರು ತಾಲೂಕಿನ ಜನರ ಸಹಾಯ ಹಸ್ತ•ತಹಶೀಲ್ದಾರ್‌ ಮೂಲಕ ನೆರವು

Team Udayavani, Aug 20, 2019, 9:59 AM IST

dg-tdy-1

ಜಗಳೂರು: ಬರದನಾಡು ಎಂಬ ಹಣೆಪಟ್ಟಿ ಹೊಂದಿರುವ ಜಗಳೂರು ತಾಲೂಕಿನಲ್ಲಿ ಸಹಾಯ ಮಾಡುವುದಕ್ಕೆ ಬರವಿಲ್ಲ ಎಂಬುದನ್ನು ಜನತೆ ನೆರೆ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚುವ ಮೂಲಕ ತೋರಿಸಿಕೊಟ್ಟಿದ್ದು, ಈವರೆಗೆ ಸುಮಾರು 500 ಕುಟುಂಬಗಳಿಗೆ ಎರಡು ತಿಂಗಳಿಗಾಗುವಷ್ಟು ಆಹಾರ ಸಾಮಗ್ರಿ, ಅಗತ್ಯ ವಸ್ತುಗಳನ್ನು ಸಂಗ್ರಹಿಸಿ ತಮ್ಮದೇ ಆದ ಅಲ್ಪ ಕೊಡುಗೆಯನ್ನು ಜನತೆ ನೀಡಿದ್ದಾರೆ.

ಜಗಳೂರು ರಾಜ್ಯದಲ್ಲಿಯೇ ಅತಿ ಹಿಂದುಳಿದ ಹಾಗೂ ಬರಗಾಲ ಪ್ರದೇಶವಾಗಿದ್ದು, ನೂರು ವರ್ಷದಲ್ಲಿ ಸುಮಾರು 75 ವರ್ಷ ಬರಗಾಲಕ್ಕೆ ತುತ್ತಾಗಿದೆ. ಯಾವುದೇ ನದಿಮೂಲ ಇಲ್ಲದ ಈ ತಾಲೂಕಿನಲ್ಲಿ ಮಳೆಗಾಲದಲ್ಲಿ ಸಹ 80 ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತದೆ. ಇಂಥ ಕಷ್ಟದ ಪರಿಸ್ಥಿತಿಯಲ್ಲಿಯೂ ನೆರೆ ಸಂತ್ರಸ್ತರಿಗೆ ತಮ್ಮ ಕೈಲಾದ ಸಹಾಯ ಮಾಡಲು ಜನ ಮುಂದಾಗಿದ್ದಾರೆ.

ಒಗ್ಗೂಡಿ ದೇಣಿಗೆ ಸಂಗ್ರಹ: ಇಲ್ಲಿನ ತಹಶೀಲ್ದಾರ್‌ ಹುಲ್ಲುಮನಿ ತಿಮ್ಮಣ್ಣ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆ ನಡೆಸಿ ಎಲ್ಲರೂ ಒಗ್ಗೂಡಿ ನಿಧಿ ಸಂಗ್ರಹಿಸುವುದಕ್ಕೆ ಚಾಲನೆ ನೀಡಿದರು. ಸರಕಾರಿ ನೌಕರರ ಸಂಘವು ಸಂಗ್ರಹವಾಗುವ ಆಹಾರ ಸಾಮಗ್ರಿಗಳನ್ನು ಸಮರ್ಪಕವಾಗಿ ಒಂದೆಡೆ ಸೇರಿಸುವಂತಹ ಕೆಲಸ ಮಾಡುತ್ತಿದೆ.

ನಿಧಿ ಸಂಗ್ರಹಣೆಗೆ ಸ್ಪರ್ಧೆ: ನಾ ಮುಂದು, ತಾ ಮುಂದು ಎಂದು ತಾಲೂಕಿನ ಗ್ರಾಮಗಳು ನಿಧಿ ಸಂಗ್ರಹಿಸುತ್ತಿದ್ದು, ತಾಲೂಕಿನ ಹುಚ್ಚಂಗಿಪುರ, ಮುಸ್ಟೂರು, ಕಲ್ಲೇದೇವರಪುರ, ಕಮಂಡಲಗೊಂದಿ, ಸೊಕ್ಕೆ, ಕೆಳಗೋಟೆ, ಲಕ್ಕಂಪುರ ಗ್ರಾಮಸ್ಥರು ನೆರವು ಸಂಗ್ರಹಿಸಿ ತಾಲೂಕಾಡಳಿತಕ್ಕೆ ನೀಡಿದ್ದಾರೆ.

ಬಿಳಿಚೋಡು, ಮಲ್ಲಪುರ, ಆಸಗೋಡು, ಗುಡ್ಡದ ಲಿಂಗಣ್ಣಹಳ್ಳಿ, ಚಿಕ್ಕ ಉಜ್ಜಿನಿ, ಚಿಕ್ಕಮಲ್ಲನಹೋಳೆ, ಅಣಬೂರು, ತಾಯಿಟೋನಿ ಸೇರಿದಂತೆ ಇನ್ನ ಕೆಲವು ಗ್ರಾಮಗಳು ನೆರವಿನ ಭರವಸೆ ನೀಡಿವೆ ಎಂದು ತಹಶೀಲ್ದಾರ್‌ ಹುಲ್ಲುಮನಿ ತಿಮ್ಮಣ್ಣ ತಿಳಿಸಿದ್ದಾರೆ.

ಸಂಗ್ರಹವಾದ ವಸ್ತುಗಳು: 200 ಕ್ವಿಂಟಲ್ ಅಕ್ಕಿ, 5 ಕ್ವಿಂಟಲ್ ಬೇಳೆ, 2 ಸಾವಿರ ಸೀರೆಗಳು, 1500 ಜೊತೆ ಚಿಕ್ಕ ಮಕ್ಕಳ ಬಟ್ಟೆಗಳು, 500 ಬೆಡ್‌ ಶೀಟ್, 1 ಸಾವಿರ ಟಾವಲ್ ಗಳು, 4 ಲಕ್ಷ ರೂ. ನಗದು ಈವರೆಗೆ ಸಂಗ್ರಹವಾಗಿದೆ. ಇವುಗಳನ್ನು ಒಂದಡೆ ಶೇಖರಿಸಿ ಕುಟುಂಬಕ್ಕೊಂದರಂತೆ ಪ್ಯಾಕೆಟ್ ಮಾಡಿ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ ಎನ್ನುತ್ತಾರೆ ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಜ್ಜಣ್ಣ,

ಕುಟುಂಬಕ್ಕೊಂದು ಪ್ಯಾಕೆಟ್: 50 ಕೆಜಿ ಅಕ್ಕಿ. 5 ಕೆಜಿ ಬೇಳೆ. 4 ಲೀ. ಅಡುಗೆ ಎಣ್ಣೆ, ಸೋಪು, ಬ್ರಷ್‌, ಪೇಸ್ಟ್‌, 2 ಪಾತ್ರೆ, ಬಕೆಟ್, ಚೊಂಬು, ಸೌಟು, ತಟ್ಟೆಗಳು, ಮಕ್ಕಳಿಗೆ ನೋಟ್ ಬುಕ್‌ ಸೇರಿದಂತೆ ಇತರೆ ವಸ್ತುಗಳನ್ನು ಸೇರಿಸಿ ಒಂದು ಪ್ಯಾಕೆಟ್ ಮಾಡಲಾಗುತ್ತಿದೆ.

ಖುದ್ದು ನೆರೆ ಸಂತ್ರಸ್ತರಿಗೆ ತಲುಪಿಸುವ ವ್ಯವಸ್ಥೆ: ಆ. 13 ರಿಂದ ನೆರವು ಸಂಗ್ರಹಕ್ಕೆ ತಹಶೀಲ್ದಾರ್‌ ಚಾಲನೆ ನೀಡಿದ್ದು ಆ. 22 ವರೆಗೆ ಸಂಗ್ರಹ ನಡೆಯಲಿದೆ. ಆ. 24 ಕ್ಕೆ ನೆರೆ ಪೀಡಿತ ಪ್ರದೇಶಕ್ಕೆ ತೆರಳಿ ವಿತರಿಸಲಾಗುವುದು.

 

•ರವಿಕುಮಾರ ಜೆಓ ತಾಳಿಕೆರೆ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.