ಕೊಟ್ಟ ಕುದುರೆ ಏರದವನು ವೀರನೂ ಅಲ್ಲ, ಶೂರನೂ ಅಲ್ಲ: ಡಿಕೆಶಿ ಗೆ ರೇಣುಕಾಚಾರ್ಯ ವ್ಯಂಗ್ಯ
Team Udayavani, Jun 11, 2020, 3:18 PM IST
ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿಯ ಒಬ್ಬ ಕಾರ್ಯಕರ್ತನಿಗೆ ಸಮ. ಕೊಟ್ಟ ಕುದುರೆ ಏರದವನು ವೀರನೂ ಅಲ್ಲ, ಶೂರನೂ ಅಲ್ಲ ಎನ್ನುವಂತಹವರು. ಹಾಗಾಗಿ ಅವರ ಬಗ್ಗೆ ಪಕ್ಷ, ಸರ್ಕಾರಕ್ಕೆ ಯಾವ ಹೆದರಿಕೆಯೂ ಇಲ್ಲ. ಭಯವೂ ಇಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಲಾಕ್ ಡೌನ್ ನಿಯಮದ ಕಾರಣ ಅವರ ಪದಗ್ರಹಣ ಸಮಾರಂಭಕ್ಕೆ ಅನುಮತಿ ನೀಡಲಾಗಿಲ್ಲ ಹೊರತು ಅವರು ಅಧ್ಯಕ್ಷರಾಗುತ್ತಾರೆ. ಪಕ್ಷ, ಸರ್ಕಾರಕ್ಕೆ ಏನೋ ಆಗುತ್ತದೆ ಎಂಬ ಹೆದರಿಕೆಯಿಂದ ಅಲ್ಲ ಎಂದು ತಿಳಿಸಿದರು.
ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ಸಾಮಾನ್ಯ ಕಾರ್ಯಕರ್ತ. ಎಂ.ಟಿ.ಬಿ. ನಾಗರಾಜ್, ಎಚ್.ಡಿ. ವಿಶ್ವನಾಥ್ ಟಿಕೆಟ್ ಬಗ್ಗೆ ಮಾತನಾಡೊಲ್ಲ. ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಬಿಜೆಪಿಯಲ್ಲಿ ವಲಸೆ, ಮೂಲ ಎಂಬ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲರೂ ಒಂದೇ ಎಂದು ತಿಳಿಸಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ ಸಾಂವಿಧಾನಿಕ ಹುದ್ದೆ. ಕ್ಯಾಬಿನೆಟ್ ದರ್ಜೆಯ ಕಾರಣದಿಂದ ಸಹಜವಾಗಿ ಎಲ್ಲಾ ಸೌಲಭ್ಯ ನೀಡಲಾಗಿದೆ. ನಾನು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ಹುದ್ದೆ ಪಡೆದಿಲ್ಲ. ನಾನು ಓರ್ವ ಕೋವಿಡ್ ವಾರಿಯರ್ ಆಗಿ ಕೆಲಸ ಮಾಡಿದ್ದೇನೆ. ನಾನು ಎಂದಿಗೂ ಸಚಿವ ಸ್ಥಾನ ಕೇಳಿಯೇ ಇಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ