![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಮೇಡಂ ಮೇರಿ ಕ್ಯೂರಿ ಮಾನವತಾವಾದಿ
Team Udayavani, Jul 8, 2018, 4:55 PM IST
![dvg-1.jpg](https://www.udayavani.com/wp-content/uploads/2018/07/8/dvg-1.jpg)
ದಾವಣಗೆರೆ: ಇಡೀ ಜಗತ್ತೇ ಗೌರವಿಸುವ ಮೇಡಂ ಕ್ಯೂರಿ ಶ್ರೇಷ್ಠ ವಿಜ್ಞಾನಿ, ಮಹಾನ್ ಮಾನವತಾವಾದಿ, ಸಮಾಜಮುಖೀ ಎಂದು ಬಳ್ಳಾರಿಯ ಉಪನ್ಯಾಸಕಿ ಡಾ| ಸುಚೇತ ಪೈ ಬಣ್ಣಿಸಿದ್ದಾರೆ.
ಶನಿವಾರ ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ಸೇಂಟ್ಪಾಲ್ಸ್ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಮೇಡಂ ಮೇರಿ ಕ್ಯೂರಿಯವರ 84ನೇ ಸ್ಮರಣೆ
ದಿನಾಚರಣೆಯಲ್ಲಿ ಮಾತನಾಡಿದ ಅವರು, ತಮ್ಮ ಪತಿ ಕ್ಯೂರಿಯೊಂದಿಗೆ ಅನೇಕ ಸಂಶೋಧನೆ ನಡೆಸಿ, ಇಡೀ ಮಾನವಕುಲಕ್ಕೆ ಮೇರಿ ಮಹತ್ತರ ಕಾಣಿಕೆ ಸಲ್ಲಿಸಿದ್ದಾರೆ ಎಂದು ಸ್ಮರಿಸಿದರು.
ಮೂಲತಃ ವಿಜ್ಞಾನಿಯಾಗಿದ್ದರೂ ಮೇಡಂ ಮೇರಿ ಕ್ಯೂರಿ ಪ್ರಯೋಗಾಲಯಕ್ಕೆ ಮಾತ್ರವೇ ಸೀಮಿತವಾಗದೆ ಸಮಾಜದ ಏಳಿಗೆಗೆ ಶ್ರಮಿಸಿದರು. ಸುಧೀರ್ಘ ಸಂಶೋಧನೆಯ ಫಲವಾಗಿ ಕಂಡು ಹಿಡಿದಂತಹ ರೇಡಿಯಂನ ಹಕ್ಕುದಾರಿಕೆಯನ್ನ ಅವರು ಪಡೆದುಕೊಳ್ಳಲೇ ಇಲ್ಲ. ಅದು ಪ್ರಕೃತಿಯಿಂದ ದೊರೆತಿರುವುದು. ಹಾಗಾಗಿ ಅದನ್ನು ಮನಕುಲಕ್ಕೆ ಉಪಯೋಗಿಸಿ ಎಂಬುದಾಗಿ ಹೇಳಿದಂತಹ ಮಹಾನ್ ಮಾನವತಾವಾದಿ, ಸಮಾಜಮುಖೀ ಚಿಂತಕಿ ಎಂದು ತಿಳಿಸಿದರು.
ಎಐಎಂಎಸ್ಎಸ್ ಜಿಲ್ಲಾ ಸಂಚಾಲಕಿ ಜ್ಯೋತಿ ಕುಕ್ಕುವಾಡ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲೂ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ, ಶೋಷಣೆ, ಕಿರುಕುಳ ನಡೆಯುತ್ತಲೆ ಇವೆ. ಚಿಕ್ಕ ಮಕ್ಕಳು, ವಿದ್ಯಾರ್ಥಿನಿಯರು, ಯುವತಿಯರು, ವಯೋವೃದ್ಧೆಯರ ಮೇಲೂ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಸರ್ಕಾರ ಅಗತ್ಯ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಮೇಡಂ ಮೇರಿ ಕ್ಯೂರಿಯವರಂತಹ ಮಹಾನ್ ಚೇತನಗಳ ಸ್ಫೂರ್ತಿಯುತ ಜೀವನ, ಬದ್ಧತೆ, ಸಾಮಾಜಿಕ ಕಳಕಳಿಯಂತಹ ಗುಣಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಸಮಾಜದ ಏಳಿಗೆ ಸಾಧ್ಯ. ಇಡೀ ಕೆಟ್ಟ ವ್ಯವಸ್ಥೆಯ ವಿರುದ್ಧ ಮಹಿಳೆಯರು ಸಂಘಟಿತ ಹೋರಾಟ ನಡೆಸಬೇಕಿದೆ ಎಂದರು.
ಸೇಂಟ್ಪಾಲ್ಸ್ ಪಿಯು ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕಿ ಕವಿತಾ ಅಧ್ಯಕ್ಷತೆ ವಹಿಸಿದ್ದರು. ಸಂಘಟನೆಯ ಭಾರತಿ, ಕಾಲೇಜು ಆಡಳಿತಾಧಿಕಾರಿ ಸಿಸ್ಟರ್ ಅಲೆನಾ, ಪ್ರಾಚಾರ್ಯ ಮೇಘನಾಥ್ ಇತರರು ಇದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ](https://www.udayavani.com/wp-content/uploads/2024/07/13-14-150x90.jpg)
Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ
![13-davangere](https://www.udayavani.com/wp-content/uploads/2024/07/13-davangere-150x90.jpg)
Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು
![drowned](https://www.udayavani.com/wp-content/uploads/2024/07/drowned-1-150x93.jpg)
Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ
![Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ](https://www.udayavani.com/wp-content/uploads/2024/07/RE-1-150x104.jpg)
Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ
![BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ](https://www.udayavani.com/wp-content/uploads/2024/07/davanagere-150x83.jpg)
BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.