ಸಂಖ್ಯಾಶಾಸ್ತ್ರಕ್ಕೆ ಮಹಾಲನೋಬಿಸ್‌ ಕೊಡುಗೆ ಅಪಾರ

ಜನರಲ್ಲಿ ಅರಿವು ಮೂಡಿಸುವುದು ಸಾಂಖ್ಖಿಕ ದಿನಾಚರಣೆ ಮುಖ್ಯ ಉದ್ದೇಶ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

Team Udayavani, Jun 30, 2020, 11:14 AM IST

ಸಂಖ್ಯಾಶಾಸ್ತ್ರಕ್ಕೆ ಮಹಾಲನೋಬಿಸ್‌ ಕೊಡುಗೆ ಅಪಾರ

ದಾವಣಗೆರೆ: ಅಪರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂಖ್ಯಾಶಾಸ್ತ್ರಜ್ಞ ಪ್ರೊ| ಪಿ.ಸಿ. ಮಹಾಲನೋಬಿಸ್‌ ಜನ್ಮದಿನವನ್ನು ಆಚರಿಸಲಾಯಿತು. 

ದಾವಣಗೆರೆ: ದೇಶ, ಸಮಾಜದ ಸಮಗ್ರ ಅಭಿವೃದ್ಧಿಗೆ ಅಡಿಪಾಯವಾದ ಅಂಕಿ ಅಂಶಗಳಿಗೆ ಸಂಬಂಧಿಸಿದಂತೆ ಮಹತ್ವವಾದ ಕೊಡುಗೆ ನೀಡಿರುವ ಸಂಖ್ಯಾಶಾಸ್ತ್ರಜ್ಞ ಪ್ರೊ|
ಪಿ.ಸಿ. ಮಹಾಲನೋಬಿಸ್‌ ಸರ್ವರಿಗೂ ಆದರ್ಶಪ್ರಾಯರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಹೇಳಿದರು.

ಸೋಮವಾರ ಅಪರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಆರ್ಥಿಕ ಮತ್ತು ಸಾಂಖ್ಖಿಕ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರೊ| ಪಿ.ಸಿ. ಮಹಾಲನೋಬಿಸ್‌
ಜನ್ಮದಿನ ಹಾಗೂ 14ನೇ ಸಾಂಖೀಕ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂಖ್ಯಾಶಾಸ್ತ್ರಕ್ಕೆ ಮಹಾಲನೋಬಿಸ್‌ ನೀಡಿರುವ ಮಹತ್ವದ ಕೊಡುಗೆಯನ್ನು ಪರಿಗಣಿಸಿ
ಅವರ ಜನ್ಮ ದಿನ ಜೂ. 29 ರಂದು ಸಾಂಖೀಕ ದಿನಾಚರಣೆಯನ್ನಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಆಚರಿಸಲಾಗುತ್ತಿದೆ ಎಂದರು.

ಜನರಲ್ಲಿ ಅರಿವು ಮೂಡಿಸುವುದು ಸಾಂಖ್ಖಿಕ ದಿನಾಚರಣೆಯ ಮುಖ್ಯ ಉದ್ದೇಶ. ಈ ಬಾರಿ ಸುಸ್ಥಿರ ಅಭಿವೃದ್ಧಿ ಗುರಿ-03 ರ ವಿಷಯ ಎಲ್ಲರಿಗೂ ಎಲ್ಲಾ ವಯೋವೃದ್ಧರಲ್ಲಿ ಆರೋಗ್ಯಕರ ಜೀವನವನ್ನು ಖಾತ್ರಿ ಪಡಿಸಿ ಯೋಗಕ್ಷೇಮವನ್ನು ಉತ್ತೇಜಿಸುತ್ತದೆ. ಸುಸ್ಥಿರ ಅಭಿವೃದ್ಧಿ ಗುರಿ-05ರ ವಿಷಯ ಲಿಂಗ ಸಮಾನತೆ ಸಾಧಿ ಸಿ ಮತ್ತು ಮಹಿಳೆಯರು ಹಾಗೂ ಹೆಣ್ಣುಮಕ್ಕಳನ್ನು ಸಶಕ್ತರನ್ನಾಗಿಸುವ ಕುರಿತು ಜನರಲ್ಲಿ ಅರಿವು ಮೂಡಿಸುವುದಾಗಿದೆ. ಕೇಂದ್ರ ಸರ್ಕಾರ ನಿಗದಿಪಡಿಸಿರುವಂತೆ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಮಾತನಾಡಿ, ಯಾವುದೇ ರಂಗದಲ್ಲಿ ಅಭಿವೃದ್ಧಿ ಕಾಣಬೇಕಿದ್ದರೆ ಅಂಕಿ- ಅಂಶಗಳ ಅವಶ್ಯಕತೆ ಇರುತ್ತದೆ. ವೈಯಕ್ತಿಕ ಅಥವಾ ಯಾವುದೇ
ರಂಗದಲ್ಲಿ ಅಭಿವೃದ್ಧಿಗೆ ನಿಖರವಾದ ಅಂಕಿ-ಅಂಶಗಳ ಪಾತ್ರ ಎಂಥದ್ದು ಎಂಬುದನ್ನು ತೋರಿಸಿಕೊಟ್ಟವರು ಮಹಾಲನೋಬಿಸ್‌ ಎಂದು ಸ್ಮರಿಸಿದರು.

ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಪಿ. ಮುದಜ್ಜಿ ಮಾತನಾಡಿ, ಅಂಕಿ-ಅಂಶಗಳು ಯಾವುದೇ ಯೋಜನೆಗೆ ಅಡಿಪಾಯ. ಅಡಿಪಾಯ ಸರಿ ಇದ್ದರೆ ಮಾತ್ರ ಕಟ್ಟಡ ಸುಭದ್ರವಾಗಿರಲು ಸಾಧ್ಯ. ಅದೇ ರೀತಿ ನಿಖರವಾದ ಅಂಕಿ-ಅಂಶಗಳಿಂದ ಯಾವುದೇ ಯೋಜನೆಯ ಪರಿಣಾಮಕಾರಿ ಅನುಷ್ಠಾನ, ಅಭಿವೃದ್ಧಿ ಮತ್ತು ಯಶಸ್ಸು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಸಹಾಯಕ ಸಾಂಖ್ಖಿಕ ಅಧಿಕಾರಿ ವಿಜಯ್‌ ಬಡಿಗೇರ್‌ ಮಾತನಾಡಿ, ಮುಂದಿನ ಪೀಳಿಗೆಗೆ ಯಾವುದೇ ರೀತಿಯಲ್ಲಿ ರಾಜೀಯಾಗದಂತೆ ಉತ್ತಮ ಆರೋಗ್ಯವನ್ನು ನೀಡುವುದು ಈ
ಯೋಜನೆಯ ಮುಖ್ಯ ಧ್ಯೇಯ ಎಂದರು. ಮತ್ತೋರ್ವ ಸಹಾಯಕ ಸಾಂಖ್ಖಿಕ ಅಧಿಕಾರಿ ಸಿದ್ದೇಶ್‌ ಮಾತನಾಡಿ, 2011 ರಲ್ಲಿ ನಡೆದ ಕಡೆಯ ಜನಗಣತಿ 15ನೇ ಜನಗಣತಿಯಾಗಿದೆ.
2021ರಲ್ಲಿ 16 ನೇ ಜನಗಣತಿ ಆಗಬೇಕಿದೆ. ಜನಗಣತಿ ಮೂಲಕ ಲಿಂಗಾನುಪಾತವನ್ನು ನೋಡಿ ಸುಸ್ಥಿರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಎಸ್‌. ರಾಘವೇಂದ್ರಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಎಚ್‌. ವಿಜಯ್‌ಕುಮಾರ್‌, ಜಿಲ್ಲಾ ಕಾರ್ಮಿಕ ಅಧಿಕಾರಿ
ಇಬ್ರಾಹಿಂ ಸಾಬ್‌, ಶಾರದಾ ಜಿ. ದೊಡ್ಡಗೌಡರ್‌, ಮಲ್ಲಾ ನಾಯಕ್‌, ಡಿ. ಏಕನಾಥ್‌, ಸಾಮಾಜಿಕ ಭದ್ರತೆ ಶಾಖೆಯ ಸಹಾಯಕ ನಿರ್ದೇಶಕಿ ನೀಲಮ್ಮ ಇತರರು ಇದ್ದರು.

ಕೋವಿಡ್‌-19 ಪರಿಸ್ಥಿತಿಯನ್ನು ದಿಟ್ಟವಾಗಿ ಮತ್ತು ಆತ್ಮವಿಶ್ವಾಸದಿಂದ ಎದುರಿಸಲು ಸಹಾಯ ಮಾಡುತ್ತಿರುವುದು ಅಂಕಿ-ಅಂಶಗಳೇ ಎಂಬುದು ಗಮನಾರ್ಹ. ಒಬ್ಬ ಕಾರ್ಮಿಕನಿಂದ ಹಿಡಿದು ಜಿಲ್ಲೆಯಲ್ಲಿ ಅಗತ್ಯವಾದ ಎಲ್ಲ ರೀತಿಯ ಅಂಕಿ ಅಂಶಗಳನ್ನು ಸಂಗ್ರಹಿಸಿರುವುದರಿಂದಲೇ ಕೋವಿಡ್‌ ವಿರುದ್ಧ ಸಮರ ಸಾರಲು ಸಾಧ್ಯವಾಗಿದೆ. ಪೂಜಾರ ವೀರಮಲ್ಲಪ್ಪ, ಅಪರ ಜಿಲ್ಲಾಧಿಕಾರಿ

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.