ಮತಗಟ್ಟೆಗಳಲ್ಲಿ ‘ಮದ್ಯ ಪರೀಕ್ಷೆ’ ಕಡ್ಡಾಯಗೊಳಿಸಿ!

ಚುನಾವಣಾ ಆಯೋಗಕ್ಕೆ ನಾಗರಿಕರ ವಿಶಿಷ್ಟ ಸಲಹೆ

Team Udayavani, May 15, 2022, 2:47 PM IST

drinks

ದಾವಣಗೆರೆ: ಭಾರತದ ಸಂವಿಧಾನ ನಾಗರಿಕರಿಗೆ ನೀಡಿದ ಅಮೂಲ್ಯವಾದ ಮತದಾನದ ಹಕ್ಕು ಹೆಂಡದ ಹಾವಳಿಯಿಂದ ಯೋಗ್ಯ ರೀತಿಯಲ್ಲಿ ಚಲಾವಣೆಯಾಗುತ್ತಿಲ್ಲ. ಇದಕ್ಕೆ ಪರಿಹಾರವಾಗಿ ಚುನಾವಣಾ ಆಯೋಗ, ಎಲ್ಲ ಮತಗಟ್ಟೆಗಳಲ್ಲಿ ಉಸಿರು ಪರೀಕ್ಷಾ ಯಂತ್ರ (Breath analyzer tester) ಅಳವಡಿಸಬೇಕು ಹಾಗೂ ಮದ್ಯ ಸೇವಿಸಿ ಬಂದವರಿಗೆ ಮತದಾನ ಹಕ್ಕು ನಿಷೇಧಿಸಬೇಕು ಎಂಬ ಸಲಹೆ ಸಾರ್ವಜನಿಕರಿಂದ ವ್ಯಕ್ತವಾಗಿದೆ.

ಪ್ರತಿಯೊಬ್ಬ ನಾಗರಿಕ ಸಾಕಷ್ಟು ಆಲೋಚಿಸಿ, ಪರಾಮರ್ಶಿಸಿ ತನ್ನ ಹಕ್ಕು ಚಲಾಯಿಸಬೇಕು. ಮತ ಚಲಾಯಿಸುವಾಗ ಮತದಾರ ಯಾವುದೇ ನಶೆಯಲ್ಲಿರದೇ ಸ್ವಚ್ಛ ಮನಸ್ಸಿನಿಂದ ಆಲೋಚಿಸಿ ಮತ ಚಲಾಯಿಸಬೇಕು. ಜತೆಗೆ ಮತದಾನ ಸಂದರ್ಭದಲ್ಲಿ ಮದ್ಯದ ಆಮಿಷಕ್ಕೆ ಯಾರೂ ಒಳಗಾಗಬಾರದು ಎಂದು ಚುನಾವಣಾ ಆಯೋಗ ಮತದಾನದ ಮುನ್ನ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ ಮಾಡುತ್ತದೆ. ಆದರೂ ಹಲವೆಡೆ ಹಂಚಿಕೆಯಾದ ಉಚಿತ ಮದ್ಯ ಕುಡಿದು, ನಶೆಯಲ್ಲೇ ಮತ ಚಲಾಯಿಸುವುದು ಮಾಮೂಲು ಆಗಿರುವುದು ಕಟು ಸತ್ಯ.

ಮದ್ಯ ಕುಡಿದು ಮತಗಟ್ಟೆಗೆ ಬಂದು ಮತ ಚಲಾಯಿಸುವುದನ್ನು ತಡೆಯಲು ಎಲ್ಲ ಮತಗಟ್ಟೆಗಳಲ್ಲಿ ಉಸಿರು ತಪಾಸಣೆ ಮಾಡುವ (ಕುಡಿದು ವಾಹನ ಚಾಲನೆ ಮಾಡುವರನ್ನು ಪತ್ತೆ ಹಚ್ಚಲು ಪೊಲೀಸರು ಉಸಿರು ಪರೀಕ್ಷೆ ಮಾಡುವಂತೆ) ವ್ಯವಸ್ಥೆಯಾಗಬೇಕು. ತನ್ಮೂಲಕ ಮತದಾನದಲ್ಲಿ ಒಂದಿಷ್ಟು ಸುಧಾರಣೆ ತರಬಹುದು ಎಂಬುದು ಈ ಸಲಹೆಯ ಹಿಂದಿನ ಉದ್ದೇಶವಾಗಿದೆ.

ಆಯೋಗಕ್ಕೆ ಪತ್ರ

ದಾವಣಗೆರೆಯ ಸಾಮಾಜಿಕ ಕಾರ್ಯಕರ್ತ ಚಂದ್ರಶೇಖರ ಚನ್ನಗಿರಿ ಅವರು ಈ ವಿಚಾರವಾಗಿ ರಾಜ್ಯ ಚುನಾವಣಾ ಆಯೋಗದ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ. ಚುನಾವಣಾ ಆಯೋಗವು ಮತದಾನದ ಹಿಂದಿನ 48 ಗಂಟೆ ಅವಧಿ ಎಲ್ಲ ತರಹದ ಮದ್ಯದ ಅಂಗಡಿ, ಬಾರ್‌ ಮತ್ತು ರೆಸ್ಟೋರೆಂಟ್‌, ಕ್ಲಬ್‌ಗಳಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣ ನಿಷೇಧಿಸಿದರೂ ಅಕ್ರಮವಾಗಿ ಮದ್ಯ ಶೇಖರಿಸಿ ಮತದಾರರಿಗೆ ಸರಬರಾಜು ಮಾಡುವ ಪ್ರಕ್ರಿಯೆ ನಡೆಯುತ್ತಲೇ ಇರುವುದು ಗುಟ್ಟಾಗಿ ಉಳಿದಿಲ್ಲ.

ಆದ್ದರಿಂದ ಆಯೋಗ ಮತದಾನ ಮಾಡುವ ಸಂದರ್ಭದಲ್ಲಿ ವ್ಯಕ್ತಿ ಮದ್ಯಪಾನ ಮಾಡಿರಬಾರದು ಎಂಬ ನಿಯಮ ಜಾರಿಗೆ ತರಬೇಕು. ಎಲ್ಲ ಮತಗಟ್ಟೆಗಳಲ್ಲಿ ಮತದಾರರ ಉಸಿರು ಪರೀಕ್ಷೆ ಮಾಡುವ ವ್ಯವಸ್ಥೆ ಮಾಡಬೇಕು. ಮದ್ಯ ಸೇವಿಸಿ ಬಂದವರಿಗೆ ಮತದಾನದ ಹಕ್ಕು ನಿರ್ಬಂಧಿಸಬೇಕು. ಇದರಿಂದ ಮತದಾನ ವಿವೇಚನೆಯಿಂದ ಮಾಡಲು ಸಾಧ್ಯವಾಗುತ್ತದೆ. ಕುಡಿದು ಗಲಾಟೆ ಮಾಡುವುದು ನಿಯಂತ್ರಣಕ್ಕೆ ಬರುತ್ತದೆ. ಮತದಾನ ಯೋಗ್ಯರೀತಿಯಲ್ಲಿ ನಡೆದು ಯೋಗ್ಯ ವ್ಯಕ್ತಿ ಆಯ್ಕೆಗೆ ಸಹಕಾರಿಯಾಗಬಹುದು ಎಂದು ಸಲಹೆ ನೀಡಿದ್ದಾರೆ. ಸಾರ್ವಜನಿಕರು ನೀಡುತ್ತಿರುವ ಈ ಸಲಹೆಯನ್ನು ಚುನಾವಣಾ ಆಯೋಗ ಕಾನೂನು ವ್ಯಾಪ್ತಿಯಲ್ಲಿ ಪರಿಶೀಲಿಸಿ, ಸ್ವೀಕರಿಸುತ್ತದೆಯೋ ನಿರಾಕರಿಸುತ್ತದೆಯೋ ಕಾದು ನೋಡಬೇಕಿದೆ.

ಮತದಾನ ಹಕ್ಕು ಮಹತ್ವದ್ದಾಗಿದ್ದು ಇದನ್ನು ಚಲಾಯಿಸುವಾಗ ವ್ಯಕ್ತಿ ಯಾವುದೇ ನಶೆಯಲ್ಲಿರಬಾರದು. ಪ್ರತಿ ಮತಗಟ್ಟೆ ದ್ವಾರದಲ್ಲಿ ಉಸಿರು ತಪಾಸಣೆ ಯಂತ್ರ ಅಳವಡಿಸುವ ಬಗ್ಗೆ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಅವರಿಗೆ ಪತ್ರ ಬರೆದಿದ್ದೇನೆ. ಆಯೋಗ ಏನು ತೀರ್ಮಾನ ಕೈಗೊಳ್ಳುತ್ತದೆ ಎಂಬುದು ಕುತೂಹಲ ಕೆರಳಿಸಿದೆ. -ಚಂದ್ರಶೇಖರ್‌ ಚನ್ನಗಿರಿ, ಸಾಮಾಜಿಕ ಕಾರ್ಯಕರ್ತ

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.