ಕಾಮಗಾರಿ ಕಳಪೆಯಾಗದಂತೆ ನೋಡಿಕೊಳ್ಳಿ


Team Udayavani, Nov 22, 2020, 6:14 PM IST

dg-tdy-2

ದಾವಣಗೆರೆ: ಜಗಳೂರು ವಿಧಾನಸಭೆ ಕ್ಷೇತ್ರದ 57 ಕೆರೆ ತುಂಬಿಸುವ ದೀಟೂರುಏತ ನೀರಾವರಿ ಯೋಜನೆಯ ಕಾಮಗಾರಿ ಉತ್ತಮ ಗುಣಮಟ್ಟದಲ್ಲಿ ಆಗುವಂತೆ ಸ್ಥಳೀಯ ರೈತರು, ಯುವಕರು, ತಾಂತ್ರಿಕ ಪರಿಣಿತರು ನೋಡಿಕೊಳ್ಳಬೇಕು ಎಂದು ಭದ್ರಾ ಮೇಲ್ದಂಡೆ ಯೋಜನೆ ತಜ್ಞರ ಸಮಿತಿ ಸದಸ್ಯ ಕೆ.ಬಿ. ಕಲ್ಲೇರುದ್ರೇಶಪ್ಪ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಕಷ್ಟು ಹೋರಾಟದ ಫಲವಾಗಿ650ಕೋಟಿ ರೂ. ದೀಟೂರು ಏತನೀರಾವರಿಯೋಜನೆ ಕ್ಷೇತ್ರಕ್ಕೆ ಮಂಜೂರಾಗಿದೆ.ಯೋಜನೆಯ ಕಾಮಗಾರಿಯಲ್ಲಿ ಈಗಾಗಲೇಹಲವು ದೋಷಗಳು ಕಂಡು ಬಂದಿದ್ದು,ಸರಿಪಡಿಸಲು ಇಲಾಖೆಯ ಇಂಜಿನಿಯರ್‌ ಗೆ ಸೂಚಿಸಲಾಗಿದೆ. ಸ್ಥಳೀಯರೂ ಸಹಕಾಮಗಾರಿ ಉತ್ತಮ ಗುಣಮಟ್ಟದಲ್ಲಿನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿ ನಿರ್ವಹಿಸಬೇಕು.

ಒಂದು ವೇಳೆ ಗುಣಮಟ್ಟದ ಕೆಲಸನಡೆಯದೇ ಇದ್ದರೆ ಯೋಜನೆ ವಿಫಲಗೊಂಡು ಅದಕ್ಕೆ ನಾವೇ ಕಾರಣೀಕರ್ತರಾಗಬೇಕಾಗುತ್ತದೆ. ಆದ್ದರಿಂದ ಕಾಮಗಾರಿಯಲ್ಲಿ ಬಳಸುವ ಪೈಪ್‌ಲೈನ್‌ ಸೂಕ್ಷ್ಮತೆಗಳನ್ನುಗಮನಿಸಿ, ಪರಾಮರ್ಶಿಸುವ ಹೊಣೆಗಾರಿಕೆಯನ್ನು ಸ್ಥಳೀಯ ನಾಗರಿಕರು ಹೊತ್ತು ಕಾಮಗಾರಿ ಕಳಪೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಈ ಯೋಜನೆಯಡಿ ದೀಟೂರು ಗ್ರಾಮದ ತುಂಗಭದ್ರಾ ನದಿ ದಡದಲ್ಲಿ ಜಾಕ್‌ ವೆಲ್‌ ನಿರ್ಮಾಣ ಮಾಡಲಾಗುತ್ತಿದ್ದು, ಇಲ್ಲಿ 2400 ಎಚ್‌.ಪಿ. ಸಾಮರ್ಥ್ಯದ ಎಂಟು ಮೋಟಾರ್‌ ಅಳವಡಿಸಲಾಗುತ್ತಿದೆ. ಇದರಿಂದ 1.39 ಟಿ.ಎಂ.ಸಿ ನೀರನ್ನು ಇಲ್ಲಿಂದ 30 ಕಿ.ಮೀ. ದೂರದ ಅಣಜಿ ಸಮೀಪದ ಚಟ್ನಳ್ಳಿ ಗುಡ್ಡದವರೆಗೆ ಹರಿಸಲಾಗುತ್ತದೆ. ನದಿಯಿಂದ 600 ಅಡಿ ಎತ್ತರದಲ್ಲಿ ಗುಡ್ಡವಿದ್ದುಅಲ್ಲಿಂದ ಯೋಜನೆ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸಲಾಗುತ್ತದೆ. ಈ ಕಾಮಗಾರಿಯಲ್ಲಿ ಕೇವಲ 25-40ವರ್ಷ ಆಯಸ್ಸು ಇರುವ ಎಂ.ಎಸ್‌. ಪೈಪ್‌ಹಾಕಲು ಅವಕಾಶ ನೀಡದೆ 100-150 ವರ್ಷ ಆಯಸ್ಸು ಇರುವ ಎಚ್‌.ಡಿ. ಪೈಪ್‌ ಹಾಕುವಂತೆ ನೋಡಿ ಕೊಳ್ಳಬೇಕು.ಗುತ್ತಿಗೆದಾರರಿಗೆ ಈಗಿರುವ ಐದು ವರ್ಷದ ನಿರ್ವಹಣೆಯನ್ನು 10 ವರ್ಷಗಳಿಗೆ ವಿಸ್ತರಿಸಲು ಒತ್ತಾಯಿಸಬೇಕಾಗಿದೆ ಎಂದು ತಿಳಿಸಿದರು.

ದೀಟೂರು ಏತ ನೀರಾವರಿ ಯೋಜನೆ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುವಂತೆನೋಡಿಕೊಳ್ಳಬೇಕು. ಯೋಜನೆಯಕಾಲಾವಧಿ ಪ್ರಕಾರ ಈ ಡಿಸೆಂಬರ್‌ ವೇಳೆಗೆಕೆರೆಗಳಿಗೆ ನೀರು ತುಂಬಿಸಬೇಕಿತ್ತು. ಆದರೆ,ಈವರೆಗೆ ಶೇ. ಕೇವಲ 35ರಷ್ಟು ಮಾತ್ರಕೆಲಸ ಆಗಿದೆ. ಪ್ರಸ್ತುತ ಭದ್ರಾ ಜಲಾಶಯದ ನೀರು ನಿಲ್ಲಿಸಲಾಗಿದ್ದು, ಈ ಸಂದರ್ಭದಲ್ಲಿ ಕಾಮಗಾರಿ ವೇಗವಾಗಿ ನಡೆಯುವಂತೆ ನೋಡಿಕೊಂಡು ಮುಂದೆ ಮೇ ತಿಂಗಳ ವೇಳೆಗೆ ಮತ್ತೆ ಭದ್ರಾ ಜಲಾಶಯದ ನೀರು ನಿಲ್ಲಿಸಿದಮೇಲೆ ಮತ್ತೆ ಕಾಮಗಾರಿ ತ್ವರಿತಗೊಳಿಸುವಂತೆ ನೋಡಿಕೊಳ್ಳಬೇಕು. ಹೀಗಾದರೆ ಮುಂದಿನಜುಲೈ ವೇಳೆಗಾದರೂ ಕೆರೆಗಳಿಗೆ ನೀರು ಹರಿಸಬಹುದಾಗಿದೆ. ಈ ಎಲ್ಲದರ ಬಗ್ಗೆಯೂನಾಗರಿಕರು ಗಮನಹರಿಸಿ ಯೋಜನೆಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು ಎಂದು ಕೋರಿದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.