ಕಾಲುವೆ ಕೊನೆ ಭಾಗಕ್ಕೆ ನೀರು ಹರಿಸಿ

ಕೆನಾಲ್‌ಗೆ ಅಳವಡಿಸಿರುವ ಪಂಪಸೆಟ್‌ಗಳ ತೆರವಿಗೆ ಆಗ್ರಹ

Team Udayavani, Feb 26, 2020, 11:22 AM IST

26-February-03

ಮಲೇಬೆನ್ನೂರು: ಹರಿಹರ ತಾಲೂಕು ಕೊನೆಭಾಗದ ಜಮೀನುಗಳಿಗೆ ನೀರು ತಲುಪಿಸುವಂತೆ ರೈತರು ಪಟ್ಟಣದ ನೀರಾವರಿ ನಿಗಮದ ಇಂಜಿನಿಯರ್‌ಗಳಲ್ಲಿ ಒತ್ತಾಯಿಸಿದರು.

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಎಚ್‌. ಓಂಕಾರಪ್ಪ ಮಾತನಾಡಿ, ಮೇಲ್ಭಾಗದಲ್ಲಿ ಕಾಲುವೆಗಳಿಗೆ ಅಳವಡಿಸಿರುವ ಅನಧಿಕೃತ ಪಂಪ್‌ಸೆಟ್‌ ಗಳನ್ನು ತೆರವುಗೊಳಿಸಿ ಕೊನೆಭಾಗದ ರೈತರ ಜಮೀನುಗಳಿಗೆ ನೀರು ತಲುಪಿಸುವಂತೆ ರಾಜ್ಯ ಹೈಕೋರ್ಟ್‌ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದರೂ, ಅದೇಶ ಕಾರ್ಯರೂಪಕ್ಕೆ ಬಾರದೆ ರೈತರ ಸ್ಥಿತಿ ಅತಂತ್ರವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹೈಕೋರ್ಟ್‌ ಆದೇಶ ಬಂದಾಗ ಎರಡು ದಿನ ಅಧಿಕಾರಿಗಳು ಮೇಲ್ಭಾಗದಲ್ಲಿನ ಅನಧಿಕೃತ ಪಂಪಸೆಟ್‌ ತೆಗೆಸುವ ನಾಟಕವಾಡಿ ಸುಮ್ಮನಾಗಿದ್ದಾರೆ. ಈಗ ನಾವು ನೀರುಕೊಡಿ ಎಂದು ಕೇಳಲು ಬಂದಾಗ ನಿದ್ದೆಯಿಂದ ಎದ್ದಂತೆ ಓಡಾಡುತ್ತಿದ್ದಾರೆ. ಅನಧಿಕೃತ ಪಂಪಸೆಟ್‌ ತೆರವುಗೊಳಿಸುವಂತೆ ನಾವು ಹೈಕೋರ್ಟ್‌ಗೆ ಹೋಗಿ ಹಣ ಖರ್ಚು ಮಾಡಿಕೊಂಡು ಬಂದಿದ್ದು ವ್ಯರ್ಥವಾಗುತ್ತಿದೆ. ಅಧಿಕಾರಿಗಳು ಹೈಕೋರ್ಟ್‌ನ ಆದೇಶ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.

ಹೈಕೋರ್ಟ್‌ನ ಆದೇಶದಂತೆ ಮೇಲ್ಭಾಗದಲ್ಲಿ ಚಾನಲ್‌ಗೆ ಅಳವಡಿಸಿರುವ ಅನಧಿಕೃತ ಪಂಪಸೆಟ್‌ ತೆರವು ಮಾಡುವಂತೆ ಜಿಲ್ಲಾ ಧಿಕಾರಿಗಳು ವಿದ್ಯುತ್‌ ಇಲಾಖೆ, ಪೊಲೀಸರು ಮತ್ತು ನೀರಾವರಿ ಇಲಾಖೆ ಈ ಮೂರೂ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಆದೇಶ ನೀಡಿದ್ದರೂ ಕಾರ್ಯಾಚರಣೆ ಮಾತ್ರ ಸೊನ್ನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೆ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಿ ಸಂಬಂಧಪಟ್ಟ ಇಲಾಖೆಗಳು ಕಾರ್ಯಪ್ರವೃತ್ತರಾಗುವಂತೆ ಮತ್ತೂಮ್ಮೆ ಆದೇಶಿಸಿ, ದೇಶದ ಬೆನ್ನೆಲುಬು ಎಂದು ಕರೆಸಿಕೊಳ್ಳುವ ರೈತರನ್ನು ಬದುಕಿಸಿಕೊಡಬೇಕು. ಇಲ್ಲವಾದಲ್ಲಿ ಹಂತ ಹಂತವಾಗಿ ನಮ್ಮ ಹೋರಾಟದ ರೂಪುರೇಷೆಗಳನ್ನು ಪರಿವರ್ತಿಸಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇಇ ರಾಜಶೇಖರ್‌ ಆಬಣ್ಣ ಇವರು ನಾನು ರಜೆಯ ಮೇಲೆ ಹೋಗಿದ್ದೆ ಎಂದು ಹೇಳಿದರೆ ಇನ್ನುಳಿದ ಇಬ್ಬರು ಎಕ್ಸಿಕ್ಯೂಟೀವ್‌ ಇಂಜಿನಿಯರ್‌ಗಳು ನಮಗೆ ಹುಶಾರಿರಲಿಲ್ಲ ಎಂದು ನುಡಿದರು.

ಆಕ್ರೋಶಭರಿತ ರೈತರು ನಾಲೆಯ ಯಾವ ಕಡೆ ನೀರು ಪೋಲಾಗುತ್ತಿದೆ ಎಂದು ನೋಡಿಕೊಂಡು ಬರಲು ತಮ್ಮೊಡನೆ ಇಂಜಿನಿಯರ್‌ಗಳನ್ನು ಕರೆದುಕೊಂಡು ಹೋದರು. ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಜಿ. ಪ್ರಭುಗೌಡ, ಎಂ.ಬಿ. ಪಾಟೀಲ್‌, ಪಾಲಾಕ್ಷಪ್ಪ, ವಸಂತಪ್ಪ, ಆರ್‌.ಟಿ. ಶೇಖರಪ್ಪ, ದೇವರಾಜಪ್ಪ, ರಾಜಪ್ಪ, ಕುಬೇರಗೌಡ, ಗದ್ದಿಗೆಪ್ಪ, ಭೀಮನಗೌಡ್ರು, ಮೇಸ್ಟ್ರೆ ರಾಜಪ್ಪ, ಎ.ಕೆ. ಬಸವರಾಜಪ್ಪ, ಎ.ಕೆ. ಮಂಜಪ್ಪ ಹಾಗೂ ಸಿರಿಗೆರೆ, ವಾಸನ, ಪಾಳ್ಯ, ಕೆ.ಎನ್‌.ಹಳ್ಳಿ ಗ್ರಾಮಗದ ರೈತರು ಇದ್ದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.