ದಾವಣಗೆರೆ: ಮಕ್ಕಳಿಬ್ಬರಿಗೆ ಟಿಕ್ಸೋಟೇಪ್ ಸುತ್ತಿ ಕೊಲೆಗೈದ ತಂದೆ!; ಬಂಧನ
Team Udayavani, Jun 1, 2023, 5:45 PM IST
ದಾವಣಗೆರೆ: ತನ್ನಿಬ್ಬರು ಅವಳಿ ಮಕ್ಕಳಿಗೆ ಟಿಕ್ಸೋ ಟೇಪ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದ ತಂದೆಯನ್ನು ದಾವಣಗೆರೆಯ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಬೆಳಗಾವಿ ಜಿಲ್ಲೆ ಗೋಕಾಕ್ ನ ಅಮರ್ (36) ತನ್ನ ಅವಳಿ ಮಕ್ಕಳಾದ ಅದ್ವೈತ್ ಮತ್ತು ಅನ್ವಿತ್ (4.4 ವರ್ಷ) ಅವರನ್ನು ಕೊಲೆಗೈದಿರುವ ಆರೋಪಿ. ಯಾವ ಕಾರಣಕ್ಕೆ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂಬುದು ತನಿಖೆಯಿಂದ ಹೊರ ಬರಬೇಕಿದೆ.
ಹರಿಹರ ಸಮೀಪದ ಕಾರ್ಗಿಲ್ ಕಂಪನಿಯಲ್ಲಿ ಕೆಮಿಕಲ್ ಇಂಜಿನಿಯರ್ ಆಗಿರುವ ಅಮರ್, ದಾವಣಗೆರೆಯ ಆಂಜನೇಯ ಬಡಾವಣೆಯಲ್ಲಿ ವಾಸಿಸುತ್ತಿದ್ದ. ಮೇ.31 ರಂದು ಅವಳಿ ಮಕ್ಕಳಾದ ಅದ್ವೈತ್ ಮತ್ತು ಅನ್ವಿತ್ ಇಬ್ಬರನ್ನು ಕಾರಿನಲ್ಲಿ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಗೇಟ್ ಗೆ ಕರೆದೊಯ್ದು ಸರ್ವೀಸ್ ರಸ್ತೆಯಲ್ಲಿ ಇಬ್ಬರೂ ಮಕ್ಕಳಿಗೆ ಟಿಕ್ಸೋ ಟೇಪ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದ.
ಇದನ್ನೂ ಓದಿ:ತವರಿನ ಲಾಭವಿಲ್ಲ, ಟಾಸ್ ಗೆದ್ದು ಫೀಲ್ಡಿಂಗ್ ಮಾಡಬೇಕಿಲ್ಲ…: ಇದು 2023ರ IPL ವಿಶೇಷತೆ
ಅಮರ್ ಪತ್ನಿ ಜಯಲಕ್ಷ್ಮಿ ತನ್ನ ತವರು ಊರಾದ ವಿಜಯಪುರದಲ್ಲಿದ್ದರು. ಅಮರ್ ನ ತಾಯಿ ಸಾವಿತ್ರಮ್ಮ ಮನೆಯಲ್ಲಿದ್ದರು. ವಿದ್ಯಾನಗರ ಠಾಣೆ ಪೊಲೀಸರು ಆರೋಪಿಯನ್ನ ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ ಅವಳಿ ಮಕ್ಕಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ಹೆಚ್ಚಿನ ವಿಚಾರಣೆ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ