ಮೇಳದಲ್ಲಿ 130 ತಳಿಗಳ ಮಾವು


Team Udayavani, Jun 6, 2018, 6:01 PM IST

dav-1.jpg

ದಾವಣಗೆರೆ: ಆಮ್ಲೆಟ್‌…, ಪಶ್ಚಿಮ ಬಂಗಾಳ….,  ಮ್ರಪಾಲ…, ಬಾಟಲಿ…, ಬಾಂಬೆಗ್ರೀನ್…, ಮೋಹತ್‌ನಗರ…, ಕರಿಇಷಾದ್‌…,ಲಾಂಗ್ರಾ…, ಪಾರ್ನಾಡ್‌ …,ಗಿಡಗಾ…, ಅಟ್ಕನ್‌…, ಓಲೂರು…. ಚಲಾತ್‌ ಚೆನ್ನಿ…,ಕಲುಮಿ…, ಚೌಸಾ…, ನೀಲುದೀªನ್‌…, ಮಂಜಿರಾ…, ಕಿಂಗ್‌ ಸ್ಟಾರ್‌…, ಕೊಬ್ಬರಿ…, ಇವು ಹಣ್ಣುಗಳ ರಾಜ ಎಂದೇ
ಕರೆಯಲ್ಪಡುವ ಮಾವಿನ ವಿವಿಧ ತಳಿಗಳ ಹೆಸರು. ಸಾಮಾನ್ಯವಾಗಿ ಕಸಿ, ರಸಪೂರಿ, ತೋತಾಪುರಿ, ಮಲ್‌ಗೋವಾ, ನೀಲಂ, ಬಾದಾಮಿ, ರತ್ನಗಿರಿ… ಹೆಸರು ಎಲ್ಲರೂ ಕೇಳಿರುವುದು ಸಹಜ. ಹೆಸರು ಕೇಳದ ಮಾವಿನ ತಳಿಗಳ ನೋಡುವ, ಖರೀದಿಸುವ ಅವಕಾಶವನ್ನು ತೋಟಗಾರಿಕೆ ಇಲಾಖೆ ಕಚೇರಿ ಆವರಣದಲ್ಲಿ  ಸಾರ್ವಜನಿಕರಿಗೆ ಕಲ್ಪಿಸಲಾಗಿದೆ. 130 ವಿವಿಧ ತಳಿಗಳ ಮಾವಿನ ಹಣ್ಣುಗಳನ್ನ ಒಂದೇ ಕಡೆ ನೋಡುವುದಾದರೆ ಎಷ್ಟೊಂದು ಚೆನ್ನಾಗಿರುತ್ತೆ ಅಂದುಕೊಂಡವರು ದಾವಣಗೆರೆಯ ಹಳೆ ಪಿಬಿ ರಸ್ತೆಯ ತೋಟಗಾರಿಕಾ ಇಲಾಖೆ ಆವರಣದಲ್ಲಿ ನಡೆಯುತ್ತಿರುವ ಮಾವು ಮೇಳಕ್ಕೆ ಭೇಟಿ ನೀಡಬಹುದು.

ನೈಸರ್ಗಿಕವಾಗಿ ಮಾಗಿಸಿದ ಮಾವುಗಳನ್ನು ಸಾರ್ವಜನಿಕರಿಗೆ ರೈತರಿಂದ ನೇರವಾಗಿ ತಲುಪಿಸುವ ಮತ್ತು ಬೆಳೆಗಾರರಿಗೆ ಸ್ಥಳೀಯವಾಗಿ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ, ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್‌ ಸಹಯೋಗದಲ್ಲಿ ಜೂ. 7ರ ವರೆಗೆ ಮಾವು ಮೇಳ ನಡೆಯಲಿದೆ. 

ವಿವಿಧ ತಳಿಗಳ ಹಣ್ಣು ನೋಡುವುದು ಮಾತ್ರವಲ್ಲ ರುಚಿಕರ ಹಣ್ಣುಗಳ ಖರೀದಿ ಸಹ ಮಾಡಬಹುದು. ಎಲ್ಲಾ ಹಣ್ಣುಗಳ ಮೇಳ…. ಮಾವಿನ ವಿವಿಧ ತಳಿಗಳ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌, ರೈತರೇ ನೇರವಾಗಿ ಸಾರ್ವಜನಿಕರಿಗೆ ಮಾರಾಟ ಮಾಡುವ ಸ್ಥಳೀಯ ಮಾರುಕಟ್ಟೆ ಹಾಗೂ ರೈತರು-ಗ್ರಾಹಕರಿಗೆ ಮಾಹಿತಿ ಕೇಂದ್ರದಂತಿರುವ ಮಾವು ಮೇಳ ಮತ್ತು ಸಸ್ಯ ಸಂತೆ ಆಯೋಜನೆ ಶ್ಲಾಘನೀಯ.

ಸಾರ್ವಜನಿಕರು-ರೈತರು ಇಂತಹ ಮೇಳಗಳ ಸದ್ಬಳಕೆಗೆ ಮನವಿ ಮಾಡಿದರು. ಒಂದೇ ಸೂರಿನಡಿ ರೈತರು,
ಸಾರ್ವಜನಿಕರಿಗೆ ವಿವಿಧ ತಳಿಗಳ ಸಸಿಗಳು, ಹಣ್ಣುಗಳ ಬೆಳೆಯಲು ಬೇಕಾದ ಮಾಹಿತಿ ಮೇಳದಲ್ಲಿ ದೊರೆಯಲಿದೆ.
ಮಾವು ಮೇಳದಂತೆ ಪ್ರತಿ ಹಣ್ಣಿನ ಮೇಳ ಆಯೋಜನೆಗೆ ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು.
ಮುಂದಿನ ದಿನಗಳಲ್ಲಿ ಇಂತಹ ಫಲ-ಪುಷ್ಪ ಪ್ರದರ್ಶನ, ಹಣ್ಣಿನ ಮೇಳಗಳು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಗಾಜಿನ ಮನೆಯಲ್ಲಿ ಆಯೋಜಿಸಲಾಗುವುದು ಎಂದು ತಿಳಿಸಿದರು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಟಿ.ಆರ್‌. ವೇದಮೂರ್ತಿ ಮಾತನಾಡಿ, ಮಾವು ಮೇಳದೊಂದಿಗೆ ಸಸ್ಯ ಸಂತೆ ಆಯೋಜಿಸಲಾಗಿದೆ.

 ಮಳೆಗಾಲ ಬಹುತೇಕ ತೋಟಗಾರಿಕೆ ಬೆಳೆಗಳ ನಾಟಿ  ಮಾಡಲು ಇದು ಸೂಕ್ತ ಸಮಯ. ಹಾಗಾಗಿ ಜಿಲ್ಲೆಯ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿ ಲಭ್ಯವಿರುವ ಉತ್ತಮ ಗುಣಮಟ್ಟದ ಮಾವು, ಸಪೋಟ, ಕರಿಬೇವು, ನುಗ್ಗೆ, ನಿಂಬೆ,
ಗುಲಾಬಿ, ಗೃಹ ಅಲಂಕಾರಿಕ ಸಸಿಗಳನ್ನು ಇಲಾಖಾ ದರದಲ್ಲಿ ಅಂದರೆ ಕನಿಷ್ಠ 10 ರಿಂದ ಗರಿಷ್ಠ 50 ರೂಪಾಯಿವರೆಗೆ
ಮಾರಾಟ ಮಾಡಲಾಗುವುದು.

ರೈತರು-ಸಾರ್ವಜನಿಕರು ಸದುಪಯೋಗ ಪಡೆಯಬೇಕು ಎಂದು ಮನವಿ ಮಾಡಿದರು.  ಮಾವುಮೇಳದಲ್ಲಿ ಕಾಲಾಪಾಡ, ಚೌಸಾ, ಬಾಳಮಾವು, ಮಲಗೋವಾ, ಚಿನೊಟೊ, ನೀಲೆಶಾನ್‌, ಚಲಾತ ಚೆನ್ನಿ, ತಾಲಿಮ್ಯಾಂಗೊ,
ಕೇಸರ, ಸಣ್ಣೇಲೆ, ಗೋವಾ ಮನಕುರ, ಆಪೂಸ್‌, ತೋತಾಪುರಿ, ಮದನಪಲ್ಲಿ, ಬಂಗಸಫರಿ, ಚಾರ್ದಾಳು, ದೂದ್‌ಪೇಡಾ, ಕಿಂಗ್‌ಸ್ಟಾರ್‌, ಬಾಂಬೆ, ಮಾಲ್ಡ, ರಸಪೂರಿ, ಲಾಲ್‌ಪುರಿ ಇತರೆ ತಳಿಗಳ ಪ್ರದರ್ಶನ ಇದೆ.

ಹಣ್ಣು ಮಾಗಿಸುವ ಘಟಕ ಸ್ಥಾಪಿಸಿ

ಮಾವು ಮತ್ತು ಬಾಳೆ ಸೇರಿ ವಿವಿಧ ಹಣ್ಣುಗಳನ್ನಾಗಿಸಲು ಉಪಯೋಗಿಸುವ ಹಾನಿಕಾರಕ ಕಾರ್ಬೈಡ್ ರಾಸಾನಿಯಕದಿಂದ ಮುಕ್ತಗೊಳಿಸಲು ಹಣ್ಣು ಮಾಗಿಸುವ ಘಟಕ (ರೈಪನಿಂಗ್‌ ಚೇಂಬರ್‌) ಸ್ಥಾಪಿಸಲು ಮುಂದೆ ಬರುವ ರೈತರು ಅಥವಾ ಆಸಕ್ತರಿಗೆ ಮಾವು ಮಂಡಳಿ ಮತ್ತು ತೋಟಗಾರಿಕೆ ಇಲಾಖೆ ವತಿಯಿಂದ ಒಟ್ಟು ಶೇ. 60 ಸಹಾಯಧನ (ಸಬ್ಸಿಡಿ) ಒದಗಿಸಲಾಗುವುದು ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಟಿ.ಆರ್‌. ವೇದಮೂರ್ತಿ ತಿಳಿಸಿದರು.

ದಾವಣಗೆರೆಯ ಆರ್‌ಎಂಸಿ ಯಾರ್ಡ್‌ನಲ್ಲಿ ರೈಪನಿಂಗ್‌ ಚೇಂಬರ್‌ ಇದೆ. ಹಾಪ್‌ಕಾಮ್ಸ್‌ನಲ್ಲಿ ಮಾರಾಟ ಮಾಡುವ ಹಣ್ಣುಗಳನ್ನು ಕಾರ್ಬೈಡ್ ಈಥೆಲಿನ್‌ ಗ್ಯಾಸ್‌ ಮೂಲಕ ಮಾಗಿಸಲಾಗುವುದು. ಕಾರ್ಬೈಡ್  ರಾಸಾಯನಿಕ ನಿಷೇಧಿತ ವಸ್ತುವಾದರೂ ಬಳಸಲಾಗುತ್ತಿದೆ. ಕಾರ್ಬೈಡ್ ಬಳಕೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಕಾರಣ ರೈಪನಿಂಗ್‌ ಚೇಂಬರ್‌ ಮೂಲಕ ಹಣ್ಣು ಮಾಗಿಸಿದರೆ ಒಳಿತು. ರೈತರು, ಉದ್ಯಮಿಗಳು ರೈಪನಿಂಗ್‌ ಚೇಂಬರ್‌
ಸ್ಥಾಪಿಸಲು ಮುಂದೆ ಬರಬೇಕು ಎಂದು ಮನವಿ ಮಾಡಿದರು

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.