‘ಮರಳಿ ಮನಸಾಗಿದೆ’ ಚಿತ್ರದ ಚಿತ್ರೀಕರಣ ಆರಂಭ

ಕಾಲೇಜು ವಿದ್ಯಾರ್ಥಿಗಳ ನಡುವಿನ ಪ್ರೇಮ-ಕೌಟುಂಬಿಕ ಭಾವನೆಯ ಚಿತ್ರವಿದು: ನವೀನ್‌ಕುಮಾರ್‌

Team Udayavani, May 6, 2022, 2:43 PM IST

marali-manasigide

ದಾವಣಗೆರೆ: ನವಿರಾದ ಪ್ರೇಮ, ಸಂಗೀತ ಪಯಣ, ಮನುಷ್ಯರ ಭಾವನೆಗಳ ಸುತ್ತ ನಡೆಯುವ ಕಥಾ ಹಂದರದ ‘ಮರಳಿ ಮನಸಾಗಿದೆ’ ಚಿತ್ರ ಮುಂದಿನ ಮಾರ್ಚ್ ನಲ್ಲಿ ತೆರೆಗೆ ಬರಲಿದೆ ಎಂದು ಚಿತ್ರದ ನಿರ್ಮಾಪಕ ಆರ್‌.ಓ. ನವೀನ್‌ಕುಮಾರ್‌ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮರಳಿ ಮನಸಾಗಿದೆ’ ಚಿತ್ರದ ಕಥೆಗೆ ಪೂರಕವಾಗಿ ಋತುಮಾನ ಆಧಾರಿತವಾಗಿ ಚಿತ್ರವನ್ನು ಆರು ಷೆಡ್ನೂಲ್‌ನಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ನವೆಂಬರ್‌ ಅಂತ್ಯಕ್ಕೆ ಚಿತ್ರೀಕರಣ ಪೂರ್ಣಗೊಳಿಸಿ ಮಾರ್ಚ್ ನಲ್ಲಿ ಬಿಡುಗಡೆ ಮಾಡುವ ಯೋಜನೆ ಇದೆ ಎಂದರು.

ಕಾಲೇಜು ವಿದ್ಯಾರ್ಥಿಗಳ ನಡುವಿನ ಪ್ರೇಮ ಭಾವನೆ, ಕೌಟುಂಬಿಕ ಸೆಂಟಿಮೆಂಟ್‌ ಮುಂತಾದ ಅಂಶಗಳ ಒಳಗೊಂಡಿರುವ ಶೇ. 100 ಲವ್‌ ಸ್ಟೋರಿಯ ಪಕ್ಕಾ ಕಮರ್ಷಿಯಲ್‌ ಚಿತ್ರ ‘ಮರಳಿ ಮನಸಾಗಿದೆ’ ಚಿತ್ರದ ಚಿತ್ರೀಕರಣವನ್ನು ದಾವಣಗೆರೆ ತಾಲೂಕಿನ ಆವರಗೊಳ್ಳದಲ್ಲಿ ಪ್ರಾರಂಭಿಸಲಾಗಿದೆ. ದಾವಣಗೆರೆಯವನೇ ಆಗಿದ್ದರಿಂದ ದಾವಣಗೆರೆಯಲ್ಲಿ ಎರಡು ಹಾಡುಗಳ ಶೂಟಿಂಗ್‌ ಮಾಡಲಾಗುವುದು. ಒಂದು ಹಾಡಿನ ಚಿತ್ರೀಕರಣ ಬಹುತೇಕ ಮುಗಿದಿದೆ. ಎರಡು ಹಾಡುಗಳು ಅದ್ಭುತವಾಗಿವೆ. ದಾವಣಗೆರೆ ಗಾಜಿನಮನೆ, ನಿಜಲಿಂಗಪ್ಪ ಬಡಾವಣೆಯ ಕ್ಲಾಕ್‌ ಟವರ್‌, ಶಾಮನೂರು ಮುಂತಾದ ಕಡೆ ಹಾಡಿನ ಚಿತ್ರೀಕರಣ ನಡೆದಿದೆ. ನಾಯಕ ನಟನಾಗಿ ಮನೋಜ್‌, ನಾಯಕಿಯಾಗಿ ನಿರೀಕ್ಷಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಹಿರಿಯ ನಟರಾದ ಶ್ರೀಧರ್‌, ಮಂಜುಳಾ ಗುರುರಾಜ್‌ ಇತರರು ಚಿತ್ರದಲ್ಲಿದ್ದಾರೆ ಎಂದು ಹೇಳಿದರು.

ಚಿತ್ರದ ನಿರ್ದೇಶಕ ನಾಗರಾಜ್‌ ಶಂಕರ್‌ ಮಾತನಾಡಿ, ‘ಮರಳಿ ಮನಸಾಗಿದೆ’ ಚಿತ್ರ ಪ್ರೀತಿ ಹಾಗೂ ಸಂಗೀತಮಯವಾದ ಚಿತ್ರ. 9 ಹಾಡುಗಳಿದ್ದು, ವಿನು ಮನಸು ಸಂಗೀತ ನಿರ್ದೇಶಕರು. ಇಂದಿನ ಯುವ ಪೀಳಿಗೆಗೆ ಅಪೇಕ್ಷೆಗೆ ಅನುಗುಣವಾಗಿ ದಾವಣಗೆರೆ, ಕಾರವಾರ, ಮಂಗಳೂರು, ಕಳಸ ಮುಂತಾದ ಭಾಗದಲ್ಲಿ ಚಿತ್ರೀಕರಣ ಮಾಡಲಾಗುವುದು. ಸೀಸನ್‌ಗೆ ತಕ್ಕಂತೆ ಚಿತ್ರದ ಕಥೆ ಸಾಗುವ ಹಿನ್ನೆಲೆಯಲ್ಲಿ ಬೇರೆ ಬೇರೆ ಸ್ಥಳದಲ್ಲಿ ಚಿತ್ರೀಕರಣ ನಡೆಸಲಾಗುವುದು. ‘ಮರಳಿ ಮನಸಾಗಿದೆ’ ತಮ್ಮ ನಿರ್ದೇಶನದ ಮೊದಲ ಚಿತ್ರ. ಹೊಸಬರೇ ಇದ್ದರೂ ಚಿತ್ರ ಅದ್ಭುತವಾಗಿ ಮೂಡಿ ಬರುತ್ತಿದೆ ಎಂದು ತಿಳಿಸಿದರು.

ಚಿತ್ರದ ನಾಯಕ ಮನೋಜ್‌ ಮಾತನಾಡಿ, ‘ಮರಳಿ ಮನಸಾಗಿದೆ’ ಚಿತ್ರಕ್ಕಿಂತ ಮುನ್ನ ತುಳು, ತಮಿಳು, ಕನ್ನಡದ ಗಾಜನೂರು ಚಿತ್ರಗಳಲ್ಲಿ ನಟಿಸಿದ್ದೇನೆ. ನಾಯಕನಾಗಿ ಮೊದಲ ಚಿತ್ರ. ಕಾಲೇಜು ವಿದ್ಯಾರ್ಥಿ ಪಾತ್ರ ನನ್ನದು. ಜೀವನದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ, ಭಾವನೆಗಳು ಯಾವ ರೀತಿ ಬದಲಾಗುತ್ತಾ ಸಾಗುತ್ತದೆ ಎಂಬ ಒಳ್ಳೆಯ ಕಥೆ ಹೊಂದಿದೆ. ಒಳ್ಳೆಯ ಭಾವನೆಯೊಂದಿಗೆ ಚಿತ್ರಮಂದಿರದಿಂದ ಹೊರಬರುವಂತಹ ಸುಂದರ ಸಾಮಾಜಿಕ ಸಂದೇಶದ ಚಿತ್ರ ಎಂದು ಹೇಳಿದರು.

ಚಿತ್ರದ ನಾಯಕಿ ನಿರೀಕ್ಷಾ ಶೆಟ್ಟಿ ಮಾತನಾಡಿ, ತುಳುವಿನಲ್ಲಿ ನಾಲ್ಕು, ಕನ್ನಡದಲ್ಲಿ ಎರಡು ಚಿತ್ರಗಳಲ್ಲಿ ಕೆಲಸ ಮಾಡಿರುವೆ. ‘ಮರಳಿ ಮನಸಾಗಿದೆ’ ನಾಯಕಿಯಾಗಿ ಕನ್ನಡದ ಮೊದಲ ಚಿತ್ರ. ಎಲ್ಲರೂ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು. ಛಾಯಾಗ್ರಾಹಕ ಜೈ ಆನಂದ್‌, ಪ್ರಜ್ಞಾ, ರಾಜೇಶ್‌, ಮಹೇಶ್‌, ಸಂಜಯ್‌ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.