ಗಾಂಜಾ-ಮಾದಕ ದ್ರವ್ಯ ಮಾರಾಟ: ವೈದ್ಯಕೀಯ ವಿದ್ಯಾರ್ಥಿ ಬಂಧನ


Team Udayavani, Jan 11, 2019, 6:52 AM IST

dvg-3.jpg

ದಾವಣಗೆರೆ: ಗಾಂಜಾ ಮತ್ತು ಮಾದಕ ದ್ರವ್ಯ ಮಾರಾಟ ಆರೋಪದಡಿ ವೈದ್ಯಕೀಯ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಕೇರಳದ ತಿರುವನಂತಪುರ ಜಿಲ್ಲೆ ವರ್ತಲ ಪಟ್ಟಣದ ಪುನ್ನಮೂಚ್ ರಸ್ತೆ ನಿವಾಸಿ, ದಾವಣಗೆರೆಯ ಜೆ.ಜೆ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಎಂಬಿಬಿಎಸ್‌ ಅಂತಿಮ ವರ್ಷದ ವಿದ್ಯಾರ್ಥಿ ಸಾಜನ್‌ ರಾಜ (28) ಬಂಧಿತ ಆರೋಪಿ.

ಸಾಜನ್‌ ರಾಜ ವೈದ್ಯಕೀಯ ಕೋರ್ಸ್‌ ಓದುತ್ತಿರುವ ಇತರೆ ವಿದ್ಯಾರ್ಥಿಗಳಿಗೆ ಗಾಂಜಾ ಸೊಪ್ಪಿನ ಜೊತೆಗೆ ಮಾದಕ ದ್ರವ್ಯ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಮಾಹಿತಿ ಹಿನ್ನೆಲೆಯಲ್ಲಿ ಸಿಇಎನ್‌ ಪೊಲೀಸ್‌ ಇನ್ಸ್‌ಪೆಕ್ಟರ್‌ ಟಿ.ವಿ. ದೇವರಾಜ್‌ ನೇತೃತ್ವದ ಪ್ರಕಾಶ್‌ರಾವ್‌, ರವಿ, ಮಂಜುನಾಥ್‌, ಲೋಹಿತ್‌, ರಮೇಶ್‌, ವೀರಭದ್ರಪ್ಪ, ನಾಗರಾಜ್‌, ಮಾರುತಿ, ಈಶ್ವರಪ್ಪ, ಸಚಿನ್‌ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ, ಆತನನ್ನು ಬಂಧಿಸಿ, 45 ಸಾವಿರ ರೂಪಾಯಿ ಮೌಲ್ಯದ 1.1 ಕೆಜಿ ಗಾಂಜಾ ಸೊಪ್ಪು, 0.10 ಗ್ರಾಂ ತೂಕದ LSD(Lysergicacid Diethylamide), 1.79 ತೂಕದ MDMA transparent 7 ಟ್ಯಾಬ್ಲೆಟ್, 1.56 ಗ್ರಾಂ ತೂಕದ ಎಂಡಿಎಂಎ ಹಾಗೂ ಮಾದಕ ದ್ರವ್ಯ ಸೇವನೆಗೆ ಬಳಸುತ್ತಿದ್ದ ಪರಿಕರ ವಶಪಡಿಸಿಕೊಂಡಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಆರ್‌. ಚೇತನ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಳೆದ ಹಲವಾರು ದಿನಗಳಿಂದ ಆಜಾದ್‌ ನಗರ, ಸಿದ್ದವೀರಪ್ಪ ಬಡಾವಣೆ, ಹರಿಹರ ಇತರೆಡೆ ಗಾಂಜಾ ಸೊಪ್ಪಿನ ಜಾಲ ಪತ್ತೆ ಹಚ್ಚುತ್ತಿರುವ ತಂಡ ಇದೇ ಮೊದಲ ಬಾರಿಗೆ ಎಲ್‌ಎಸ್‌ಡಿಯಂತಹ ಮಾದಕ ದ್ರವ್ಯ ಮಾರಾಟದ ಪತ್ತೆ ಹಚ್ಚಿದೆ. 0.1 ಗ್ರಾಂ ಎಲ್‌ಎಸ್‌ಡಿ ವಶಪಡಿಸಿಕೊಂಡಿದೆ. 0.002 ಗ್ರಾಂನಷ್ಟು ಎಲ್‌ಎಸ್‌ಡಿ ಭಾರೀ ಪರಿಣಾಮ ಉಂಟು ಮಾಡುವಂತಹ ಮಾದಕ ದ್ರವ್ಯ ಎಂದು ಎಸ್‌ಪಿ ತಿಳಿಸಿದರು. ಬಂಧಿತ ಸಾಜನ್‌ ರಾಜ 2010ರಲ್ಲಿ ವೈದ್ಯಕೀಯ ಕೋರ್ಸ್‌ ಸೇರಿದ್ದು, ಈಗ ಅಂತಿಮ ವರ್ಷದಲ್ಲಿದ್ದೇನೆ ಎಂದು ಹೇಳುತ್ತಿದ್ದಾನೆ. ಅದೇನು ನಿಜವಾ ಅಥವಾ ಸುಳ್ಳಾ. ಈ ಜಾಲದಲ್ಲಿ ಅವನೊಬ್ಬನೇ ಇದ್ದನಾ ಅಥವಾ ಬೇರೆಯವರೂ ಇದ್ದಾರಾ ಎಂಬ ಬಗ್ಗೆ ತನಿಖೆ ನಡೆಸಲಾಗುವುದು. ಮಾದಕ ದ್ರವ್ಯ ಬಳಸಿದರೆ 1 ವರ್ಷ, ಮಾರಾಟ ಮಾಡುವುದಕ್ಕೆ 10 ವರ್ಷದ ಶಿಕ್ಷೆ ಇದೆ. ಸಾಜನ್‌ ರಾಜ ವಿರುದ್ಧ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಎನ್‌ಡಿಪಿಎಸ್‌ ಆ್ಯಕ್ಟ್ 1985 ಯು/ಎಸ್‌ 20(ಬಿ) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

ಗಾಂಜಾ ಸೊಪ್ಪಿನ ಜೊತೆಗೆ ಮಾದಕ ದ್ರವ್ಯ ಮಾರಾಟ ಮಾಡಲಾಗುತ್ತಿದೆ ಎಂದು ಸಿಕ್ಕ ಮಾಹಿತಿ ಆಧಾರದಲ್ಲಿ ಚುರುಕಿನ ತನಿಖೆ ಕೈಗೊಂಡಾಗ ಸಾಜನ್‌ ರಾಜ ಸಿಕ್ಕಿ ಬಿದ್ದಿದ್ದಾನೆ. ದಾವಣಗೆರೆಯ ಕೆಲವು ಕಾಲೇಜು, ಹಾಸ್ಟೆಲ್‌ಗ‌ಳು, ಪಾರ್ಕ್‌ ಭಾಗದಲ್ಲಿ ಗಾಂಜಾ ಸೊಪ್ಪು ಇತರೆ ಮಾದಕ ಪದಾರ್ಥಗಳ ಮಾರಾಟ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಅಂತಹ ಪ್ರದೇಶದಲ್ಲಿ ಕಾಲೇಜು, ಹಾಸ್ಟೆಲ್‌ಗ‌ಳ ಹಳೆಯ ವಿದ್ಯಾರ್ಥಿಗಳ ಚಲನವಲನದ ಬಗ್ಗೆ ತೀವ್ರ ನಿಗಾ ಇಡಲಾಗಿದೆ ಎಂದು ತಿಳಿಸಿದರು.

ಡಿಸಿಆರ್‌ಬಿ ಡಿವೈಎಸ್ಪಿ ಗೋಪಾಲಕೃಷ್ಣಗೌಡ, ಸಿಇಎನ್‌ ಪೊಲೀಸ್‌ ಇನ್ಸ್‌ಪೆಕ್ಟರ್‌ ಟಿ.ವಿ. ದೇವರಾಜ್‌ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಬಿಲ್ಡಪ್‌ ಬಾಯ್‌…
ಗಾಂಜಾ ಮತ್ತು ಮಾದಕ ದ್ರವ್ಯ ಮಾರಾಟ ಮಾಡಿ ಸಿಕ್ಕಿ ಬಿದ್ದಿರುವ ಸಾಜನ್‌ ರಾಜ ತನ್ನಲ್ಲಿರುವ ಗಾಂಜಾ, ಮಾದಕ ದ್ರವ್ಯಗಳ ಬಗ್ಗೆ ಫೋಟೋ ತೆಗೆಯುತ್ತಿದ್ದಲ್ಲದೆ ಕೆಲವರ ಮುಂದೆ ಬಿಲ್ಡಪ್‌ ಕೊಡುತ್ತಿದ್ದ. ಸಿದ್ದವೀರಪ್ಪ ಬಡಾವಣೆಯ ಮನೆಯೊಂದರಲ್ಲಿ ಬಾಡಿಗೆ ಇದ್ದ ಆತ, ಇಂಟರ್ನ್ಶಿಪ್‌ ಮುಗಿಸಿ, ಕೇರಳದಲ್ಲಿ ಸೆಟ್ಲ ಆಗಲು ಯೋಚನೆ ಮಾಡಿದ್ದ. ಅವನೇ ಗಾಂಜಾ ಮತ್ತಿತರ ಮಾದಕ ದ್ರವ್ಯ ಸೇವನೆ ಮಾಡುತ್ತಿದ್ದ. ಇತರರಿಗೆ ಕೇಳಿದಾಗ ಹಣ ಪಡೆದು ಕೊಡುತ್ತಿದ್ದ. ಹಣ ಕೈ ಸೇರುವುದು ಹೆಚ್ಚಾಗುತ್ತಿದ್ದಂತೆ ಪಾರ್ಟ್‌ಟೈಮ್‌ ಬಿಸಿನೆಸ್‌ ಮಾಡಿಕೊಂಡಿದ್ದ. ಮನೆಯ ಶೋ ಕೇಸ್‌ನಲ್ಲಿ ಬಹಳ ಅಂದ ಚೆಂದವಾಗಿ ಗಾಂಜಾ, ಮಾದಕ ದ್ರವ್ಯದ ಪ್ಯಾಕೆಟ್ ಇಡುತ್ತಿದ್ದ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.