ಮಹಿಳಾ ನಿಲಯ ಯುವತಿಗೆ ಕಂಕಣ ಭಾಗ್ಯ  

ಸೌಮ್ಯಳ ವರಿಸಿದ ಕಡೇಕೋಡಿ ಸುಬ್ರಾಯ ಭಟ್ಟ­| ವಿವಾಹಕ್ಕೆ ಸಾಕ್ಷಿಯಾದ ಜಿಲ್ಲಾಧಿಕಾರಿ, ಜಿಪಂ ಸಿಇಒ

Team Udayavani, Mar 18, 2021, 8:40 PM IST

hjftyr

ದಾವಣಗೆರೆ: ನಗರದಲ್ಲಿರುವ ರಾಜ್ಯ ಮಹಿಳಾ ನಿಲಯದ ಆವರಣ ಬುಧವಾರ ಎಂದಿನಂತಿರಲಿಲ್ಲ. ಇಡೀ ಆವರಣ ತಳೀರು ತೋರಣದ ಅಲಂಕಾರದಿಂದ ಕಂಗೊಳಿಸುತ್ತಿತ್ತು. ಅಲ್ಲಲ್ಲಿ ಚಿತ್ತಾಕರ್ಷಕ ರಂಗೋಲಿ ಚಿತ್ತಾರವೂ ಇತ್ತು. ಈ ನಡುವೆ ಮಂಗಳವಾದ್ಯದ ನಿನಾದ, ಅತ್ತಿತ್ತ ಸಡಗರದಿಂದ ಓಡಾಡುವ ಹೆಂಗಳೆಯರ ಕಾಲ್ಗೆಜ್ಜೆಯ ಸದ್ದು ಸಂಭ್ರಮವನ್ನು ಇಮ್ಮಡಿಸಿತ್ತು.

ಮಹಿಳಾ ನಿಲಯದಲ್ಲಿ ಇಷ್ಟೊಂದು ಸಡಗರ-ಸಂಭ್ರಮಕ್ಕೆ ಕಾರಣವಾದದ್ದು ನಿಲಯ ವಾಸಿ ಯುವತಿಯ ಮದುವೆ. ನಿಲಯವಾಸಿ ಸೌಮ್ಯಳನ್ನು (28 ವರ್ಷ) ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡೇಕೋಡಿಯ ಸುಬ್ರಾಯ ಮಂಜುನಾಥ ಭಟ್ಟ (37 ವರ್ಷ) ಬಾಳಸಂಗಾತಿಯನ್ನಾಗಿ ಸ್ವೀಕರಿಸಿದರು. ವಧು ಸೌಮ್ಯಳ ಪಾಲಿಗೆ ಅಧಿಕಾರಿಗಳೇ ಪೋಷಕರಾಗಿ, ಹಿರಿಯರಾಗಿ, ಬಂಧು-ಬಾಂಧವರಾಗಿ ಶಾಸ್ತ್ರೋಕ್ತವಾಗಿ ಧಾರೆ ಎರೆದು ತಮ್ಮದೇ ಮಗಳ ಮದುವೆ ಮಾಡಿದ ಹೆಮ್ಮೆಯ ಭಾವ ಮೆರೆದರು.

ಮಹಿಳಾ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿ, ನೌಕರ ಸಿಬ್ಬಂದಿಯವರು ಮದುವೆಯ ಎಲ್ಲ ಶಾಸ್ತ್ರಗಳನ್ನು ಅಚ್ಚುಕಟ್ಟಾಗಿ ನೆರವೇರಿಸಿ ನಿಲಯವಾಸಿ ಸೌಮ್ಯಳ ಮೇಲೆ ತಮಗಿರುವ ಪ್ರೀತಿ ಪ್ರದರ್ಶಿಸಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಪಂ ಸಿಇಒ ಡಾ| ವಿಜಯಮಹಾಂತೇಶ್‌ ದಾನಮ್ಮನವರ್‌ ವಧುವಿನ ಪೋಷಕ ಸ್ಥಾನದಲ್ಲಿ ನಿಂತು ಮದುವೆ ಶಾಸ್ತ್ರಗಳಿಗೆ ಕೈಜೋಡಿಸಿದರು. ರಾಜ್ಯ ಬಾಲಭವನ ಸೊಸೈಟಿ ಅಧ್ಯಕ್ಷೆ ಚಿಕ್ಕಮ್ಮ ಬಸವರಾಜ್‌, ಜಿಪಂ ಸದಸ್ಯ ತೇಜಸ್ವಿ ಪಟೇಲ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೆ.ಎಚ್‌. ವಿಜಯಕುಮಾರ್‌ ಸೇರಿದಂತೆ ಇತರ ಗಣ್ಯರು ಈ ಅಪರೂಪದ ಮದುವೆಗೆ ಸಾಕ್ಷಿಯಾದರು.

ನಿಲಯದಲ್ಲಿ ಈ ಹಿಂದೆ ಮದುವೆಯಾದವರು ಸಹ ಈ ಮದುವೆ ಸಂಭ್ರಮದಲ್ಲಿ ಭಾಗಿಯಾಗಿ ತಾವು ಸಂತೋಷದಿಂದ ಜೀವನ ನಡೆಸುತ್ತಿರುವುದಾಗಿ ಸಂತಸ ವ್ಯಕ್ತಪಡಿಸಿದರು.

ನಿಲಯದಲ್ಲಿ 40 ವಿವಾಹ: ದಾವಣಗೆರೆಯ ರಾಜ್ಯ ಮಹಿಳಾ ನಿಲಯದಲ್ಲಿ ಈವರೆಗೆ 40 ವಿವಾಹ, 7 ನಾಮಕರಣ ನಡೆದಿವೆ. ನಿಲಯದಲ್ಲಿ ಮದುವೆಯಾಗುವ ಈ ಜೋಡಿಯ ಜೀವನ ಹೇಗಿದೆ ಎಂದು ಇಲಾಖೆ ಐದು ವರ್ಷ ನಿಗಾ ಇಡುತ್ತದೆ. ಮದುವೆ ಸಂದರ್ಭದಲ್ಲಿ ವಧು-ವರರ ಜಂಟಿ ಖಾತೆಯಲ್ಲಿ 15 ಸಾವಿರ ರೂ.ಗಳ ಬಾಂಡ್‌ ನೀಡಲಾಗುತ್ತದೆ. ಮದುವೆ ಖರ್ಚಿಗಾಗಿ ತಲಾ ಐದು ಸಾವಿರ ರೂ. ನೀಡಲಾಗುತ್ತದೆ ಹಾಗೂ ಮದುವೆ ಕಾರ್ಯಕ್ರಮ ಸಂಘಟಿಸಲಾಗುತ್ತದೆ. ಈವರೆಗೆ ನಿಲಯದ ಯುವತಿಯರನ್ನು ಮದುವೆಯಾದವರೆಲ್ಲರೂ ಉತ್ತಮ ಜೀವನ ನಡೆಸುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್‌ ಇದೇ ಸಂದರ್ಭದಲ್ಲಿ ಹೆಮ್ಮೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.