ಖಾತೆ ಇಲ್ಲದಿದ್ದರೆ ಮಾಸಾಶನ ಸ್ಥಗಿತ; ಡಿಸೆಂಬರ್ ಒಳಗೆ ಬ್ಯಾಂಕ್ ಖಾತೆಗೆ ಅವಕಾಶ
ಜನವರಿಯಿಂದ ಸಂಪೂರ್ಣ ರದ್ದು
Team Udayavani, Oct 1, 2022, 7:10 AM IST
ದಾವಣಗೆರೆ: ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿ ಪಡೆಯುತ್ತಿರುವವರಿಗೆ ಈ ತಿಂಗಳಿನಿಂದ ಬ್ಯಾಂಕ್ ಖಾತೆ ಜೋಡಣೆ ಮಾಡಿಕೊಂಡವರಿಗಷ್ಟೇ ಮಾಸಾಶನ ಸಿಗಲಿದೆ.
ಈ ಹಿಂದಿನಂತೆ ಮನಿಯಾರ್ಡರ್ ಮೂಲಕ ಮಾಸಾಶನ ನೀಡುವ ಕ್ರಮ ಕೊನೆಗೊಂಡಿದೆ. ಆಧಾರ್ ಸಂಖ್ಯೆ ಜೋಡಣೆ ಹೊಂದಿದ ಬ್ಯಾಂಕ್ ಖಾತೆ ಅಥವಾ ಅಂಚೆ ಖಾತೆ ಇಲ್ಲದ ಫಲಾನುಭವಿಗಳಿಗೆ ಮಾಸಾಶನ ತಡೆಹಿಡಿಯಲು ಸಾಮಾಜಿಕ ಭದ್ರತೆ ಹಾಗೂ ಪಿಂಚಣಿಗಳ ನಿರ್ದೇಶನಾಲಯ ನಿರ್ಧರಿಸಿದೆ.
ಪರಿಣಾಮವಾಗಿ ಬ್ಯಾಂಕ್ ಖಾತೆ ಇಲ್ಲದವರಿಗೆ ಅಕ್ಟೋಬರ್ ತಿಂಗಳಿನಿಂದಲೇ ಮಾಸಾಶನ ನಿಲ್ಲಲಿದೆ (ಅಕ್ಟೋಬರ್ ತಿಂಗಳಲ್ಲಿ ಸಿಗಬೇಕಿದ್ದ ಸೆಪ್ಟಂಬರ್ ತಿಂಗಳಿನ ಮಾಸಾಶನ ಸಿಗದು). ಇದರಿಂದಾಗಿ ಮನಿಯಾರ್ಡರ್ ಮೂಲಕ ಮಾಸಾಶನ ಪಡೆಯುತ್ತಿದ್ದ ರಾಜ್ಯದ ಅಂದಾಜು ಒಂದು ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ತೊಂದರೆಯಾಗಲಿದೆ.
ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳು ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಖಾತೆ ತೆರೆದು, ಅದನ್ನು ಸಾಮಾಜಿಕ ಭದ್ರತಾ ಮಾಸಾಶನ ಯೋಜನೆಗೆ ಜೋಡಿಸಬೇಕು ಎಂದು 2018ರಿಂದಲೇ ನಿರಂತರ ಸೂಚನೆ ನೀಡುತ್ತಲೇ ಬರಲಾಗಿತ್ತು. ಇತ್ತೀಚೆಗೆ ಬ್ಯಾಂಕ್ ಖಾತೆ ಮಾಡಿಸಿಕೊಳ್ಳಲು ಆ.31ರ ಗಡುವು ನೀಡಲಾಗಿತ್ತು. ಅದನ್ನು ಸೆ.15ರ ವರೆಗೂ ವಿಸ್ತರಿಸಲಾಗಿತ್ತು. ಇನ್ನೂ ಖಾತೆ ಮಾಡಿಸಿಕೊಳ್ಳದವರ ಮಾಸಾಶನವನ್ನು ತಡೆಹಿಡಿಯಲು ಪಿಂಚಣಿ ನಿರ್ದೇಶನಾಲಯ ತೀರ್ಮಾನಿಸಿದೆ.
ಕಾಲ ಮಿಂಚಿಲ್ಲ
ಮಾಸಾಶನ ಕೈಗೆ ಸಿಗದೆ ಇದ್ದರೂ ಮಾಸಾಶನ ಖಾತೆ ದಿಢೀರ್ ರದ್ದಾಗುವುದಿಲ್ಲ. ಈ ತಿಂಗಳಿಂದ ಮಾಸಾಶನ ಖಾತೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗುವುದು. ಡಿಸೆಂಬರ್ ಒಳಗೆ ಬ್ಯಾಂಕ್ ಅಥವಾ ಅಂಚೆ ಖಾತೆ ಮಾಡಿಸಿ, ತಹಶೀಲ್ದಾರ್ ಕಚೇರಿ ಮೂಲಕ ಮಾಸಾಶನ ಖಾತೆಗೆ ಜೋಡಣೆ ಮಾಡಿದರೆ ಬಾಕಿ ಇರುವ ಮಾಸಾಶನವನ್ನೂ ಸೇರಿಸಿ ಖಾತೆಗೆ ಜಮೆ ಮಾಡಲಾಗುವುದು. ಒಂದು ವೇಳೆ ಡಿಸೆಂಬರ್ ವೇಳೆಗೂ ಬ್ಯಾಂಕ್ ಖಾತೆ ಮಾಡಿಸಿಕೊಳ್ಳದೆ ಇದ್ದರೆ ಜನವರಿ 2023ರಿಂದ ಮಾಸಾಶನ ಖಾತೆಯೇ ರದ್ದಾಗಲಿದೆ. ಮುಂದೆ ಮಾಸಾಶನ ಪಡೆಯಲು ಫಲಾನುಭವಿಗಳು ಬ್ಯಾಂಕ್ ಖಾತೆಯೊಂದಿಗೆ ಹೊಸದಾಗಿಯೇ ಅರ್ಜಿ ಸಲ್ಲಿಸಬೇಕಾಗುತ್ತದೆ ಎನ್ನುತ್ತಾರೆ ಸಾಮಾಜಿಕ ಭದ್ರತಾ ಯೋಜನೆಯ ಅಧಿಕಾರಿಗಳು.
ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಖಾತೆ ಮಾಡಿಸಿಕೊಳ್ಳಲು ನೀಡಲಾಗಿದ್ದ ಕೊನೆಯ ಗಡುವು ಸೆ.15ಕ್ಕೆ ಮುಗಿದಿದೆ. ಹೀಗಾಗಿ ಫಲಾನುಭವಿಗಳಿಗೆ ಅಕ್ಟೋಬರ್ ತಿಂಗಳಲ್ಲಿ ಮಾಸಾಶನ ಸಿಗುವುದಿಲ್ಲ. ಮನಿಯಾರ್ಡರ್ ಮೂಲಕ ಮಾಸಾಶನ ಪಡೆಯುವವರು ಡಿಸೆಂಬರ್ ಒಳಗೆ ಬ್ಯಾಂಕ್ ಖಾತೆ ಮಾಡಿಸಿಕೊಂಡರೆ ಮಾಸಾಶನ ಮುಂದುವರಿಯುತ್ತದೆ. ಇಲ್ಲದಿದ್ದರೆ ಮಾಸಾಶನ ಖಾತೆಯೇ ರದ್ದಾಗುತ್ತದೆ.
– ಪುಷ್ಪಾ ಕೆ., ಸಹಾಯಕ ನಿರ್ದೇಶಕರು, ಸಾಮಾಜಿಕ ಭದ್ರತಾ ಯೋಜನೆ, ದಾವಣಗೆರೆ
– ಎಚ್.ಕೆ. ನಟರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು