ನಿಷ್ಪಕ್ಷಪಾತ, ಪ್ರಾಮಾಣಿಕತೆ, ಪಾರದರ್ಶಕತೆ ಇರಲಿ


Team Udayavani, Dec 8, 2018, 4:17 PM IST

dvg-2.jpg

ದಾವಣಗೆರೆ: ಪಾರದರ್ಶಿಕತೆ, ಪ್ರಾಮಾಣಿಕತೆ, ನಿಷ್ಪಕ್ಷಪಾತ, ಸಮಯ ಪರಿಪಾಲನೆಯ ಮೂಲಕ ನ್ಯಾಯಾಂಗ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಬೇಕು ಎಂದು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎಸ್‌. ನಾಗಶ್ರೀ ನೂತನ ನ್ಯಾಯಾಧೀಶರಿಗೆ ಕಿವಿಮಾತು ಹೇಳಿದ್ದಾರೆ.

ಅಧೀನ ನ್ಯಾಯಾಲಯಗಳ ಸಿವಿಲ್‌ ನ್ಯಾಯಾಧಿಧೀಶರಾಗಿ ಆಯ್ಕೆಯಾಗಿರುವ ದಾವಣಗೆರೆ ಜಿಲ್ಲಾ ವಕೀಲರ ಸಂಘದ ಸದಸ್ಯರಾದ ನಿಖೀತಾ ಎಸ್‌. ಅಕ್ಕಿ, ವಿ.ಎಸ್‌. ವಿನುತಾ, ಶಿಲ್ಪಶ್ರೀ ಮತ್ತು ಚನ್ನಬಸಪ್ಪ ಆರ್‌. ಕೂಡಿ ಅವರಿಗೆ ಶುಕ್ರವಾರ ವಕೀಲರ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಭಿನಂದನಾ
ಸಮಾರಂಭದಲ್ಲಿ ಮಾತನಾಡಿದ ಅವರು, ನ್ಯಾಯಾಧೀಶ ಹುದ್ದೆಗೆ ಆಯ್ಕೆಯಾಗಿರುವ ನಾಲ್ವರು ಸಹ ಪಾರದರ್ಶಿಕತೆ, ಪ್ರಾಮಾಣಿಕತೆ, ನಿಷ್ಪಕ್ಷಪಾತ, ಸಮಯ ಪರಿಪಾಲನೆ ಅನುಸರಿಸಬೇಕು ಎಂದರು.

ಸತತ ಪರಿಶ್ರಮ, ಸಾಧನೆ ಮತ್ತು ಗುರಿಯೊಂದಿಗೆ ನ್ಯಾಯಾಧೀಶರಾಗಿ ಆಯ್ಕೆಯಾಗುವರೆಗೆ ಒಂದು ಪ್ರಯತ್ನದ ಮುಕ್ತಾಯ ಆಗುತ್ತದೆ. ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಇನ್ನೊಂದು ಹಂತದ ಪ್ರಯಾಣ ಪ್ರಾರಂಭವಾಗುತ್ತದೆ. ಪಾರದರ್ಶಿಕತೆ, ಪ್ರಾಮಾಣಿಕತೆ, ನಿಸ್ಪಕ್ಷಪಾತ, ಸಮಯ ಪರಿಪಾಲನೆಯ ಜೊತೆಗೆ ನ್ಯಾಯಾಲಯದಲ್ಲಿ ಕಕ್ಷಿದಾರರು, ವಕೀಲರೊಂದಿಗೆ ಬಳಸುವ ಭಾಷೆ, ವರ್ತನೆ, ನಡವಳಿಕೆಯನ್ನ ಪ್ರತಿಯೊಬ್ಬರೂ ಗಮನಿಸುತ್ತಿರುತ್ತಾರೆ. ಅದಕ್ಕೆ ತಕ್ಕಂತೆ ನಡೆದುಕೊಳ್ಳುವುದು ಅತೀ ಮುಖ್ಯ ಎಂದು ತಿಳಿಸಿದರು.

ಎಂತದ್ದೆ ಸಂದರ್ಭವೇ ಆಗಿರಲಿ ಯಾವುದೇ ಕಾರಣಕ್ಕೂ ಪಕ್ಷಪಾತ ತೋರಲೇಬಾರದು. ಸದಾ ನ್ಯಾಯಸಮ್ಮತವಾಗಿಯೇ ಇರಬೇಕು. ತಮ್ಮ ಸಿಬ್ಬಂದಿ ಜೊತೆಯೂ ಚೆನ್ನಾಗಿ ಇರಬೇಕು. ಕಚೇರಿಯಲ್ಲಿ ಒಳ್ಳೆಯ ವಾತಾವರಣ ನಿರ್ಮಿಸಿಕೊಳ್ಳಬೇಕು. ವಕೀಲರ ಜೊತೆಗೆ ಎಂದೆಂದಿಗೂ ವೈಯಕ್ತಿಕ ಮತ್ತು ವೃತ್ತಿ ವೈಷಮ್ಯ ತೋರಲೇಬಾರದು. ಸಮಯ, ಸಂದರ್ಭಕ್ಕೆ ತಕ್ಕಂತೆ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಭಾರತದ ಜನಸಂಖ್ಯೆಗೆ ಹೋಲಿಕೆ ಮಾಡಿದರೆ ಶೇ. 1ರಷ್ಟು ಜನರು ಮಾತ್ರ ನ್ಯಾಯಾಧೀಶರಾಗಿದ್ದಾರೆ. ದೇವರೇ ನಮಗೆ ಅಂತಹ ಅವಕಾಶ ನೀಡಿದ್ದಾನೆ ಎಂದು ಭಾವಿಸಬೇಕು. ಹಾಗಾಗಿ ಯಾರನ್ನೂ ಕೀಳಾಗಿ ಕಾಣಲೇಬಾರದು. ಯಾವುದೇ ಕಳಂಕ, ಕಪ್ಪುಚುಕ್ಕೆ ಬರದಂತೆ ಜವಾಬ್ದಾರಿಯಿಂದ
ನಡೆದುಕೊಳ್ಳಬೇಕು ಎಂದು ತಿಳಿಸಿದರು. ನ್ಯಾಯಾಧೀಶರಿಗೆ ಸಾಮಾಜಿಕ ಜೀವನ, ಗೆಳೆಯರ ವಲಯ ಇರುವುದಿಲ್ಲ ಎನ್ನುವ ಮಾತು ನಿಜ. ಅಂತದ್ದರ ನಡುವೆಯೂ ಖುಷಿ, ಆತ್ಮಸಂತೋಷ, ಆತ್ಮಸ್ಥೈರ್ಯದಿಂದ ಕರ್ತವ್ಯ ನಿರ್ವಹಣೆ ಮಾಡಬೇಕು. ವೃತ್ತಿಗೆ ನೀಡುವಷ್ಟೇ ಮಹತ್ವವನ್ನು ಕುಟುಂಬಕ್ಕೂ ನೀಡಬೇಕು. ಎಂತದ್ದೇ ಸ್ಥಿತಿ ಎದುರಾದರೂ ತಾಳ್ಮೆ, ಸಮಾಧಾನದಿಂದ ಇರಬೇಕು ಎಂದು ತಿಳಿಸಿದರು.

ಹಿರಿಯ ವಕೀಲರಾದ ಜಿ.ಸಿ. ರಾಜಶೇಖರ್‌, ರಾಮಚಂದ್ರ ಕಲಾಲ್‌, ಲೋಕಿಕೆಕೆ ಸಿದ್ದಪ್ಪ, ಎನ್‌.ಎಂ. ಆಂಜನೇಯ ಗುರೂಜಿ, ಟಿ.ಆರ್‌. ಗುರುಬಸವರಾಜ್‌, ರಿಜ್ವಿಖಾನ್‌ ಇತರರು ಮಾತನಾಡಿದದರು. ಅಧೀನ ನ್ಯಾಯಾಲಯಗಳ ಸಿವಿಲ್‌ ನ್ಯಾಯಾಧಿಧೀಶರಾಗಿ ಆಯ್ಕೆಯಾಗಿರುವ ನಿಖೀತಾ ಎಸ್‌. ಅಕ್ಕಿ, ವಿ.ಎಸ್‌. ವಿನುತಾ, ಎನ್‌.ಎಸ್‌. ಶಿಲ್ಪಶ್ರೀ, ಚನ್ನಬಸಪ್ಪ ಆರ್‌. ಕೂಡಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್‌ .ಟಿ. ಮಂಜುನಾಥ್‌ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕೌಟಂಬಿಕ ನ್ಯಾಯಾಲಯದ ನ್ಯಾಯಾಧೀಶ ಬಿ.ಎಲ್‌. ಜಿನರಾಳ್ಕರ್‌, ಪ್ರಧಾನ ಸಿವಿಲ್‌ ನ್ಯಾಯಾಧೀಶ ಸಾಬಪ್ಪ, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆಂಗಬಾಲಯ್ಯ ಇದ್ದರು.
ಗೋಪಾಲ್‌ ಪ್ರಾರ್ಥಿಸಿದರು. ಎಚ್‌. ದಿವಾಕರ್‌ ಸ್ವಾಗತಿಸಿದರು.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.