ಧರ್ಮ ರಕ್ಷಣೆಗೆ ಮಠಾಧಿಧೀಶರು ಒಂದಾಗಲಿ


Team Udayavani, Nov 12, 2018, 5:08 PM IST

dvg-3.jpg

ಹರಪನಹಳ್ಳಿ: ವಿಜ್ಞಾನ, ರಾಜಕೀಯದ ಲಾಭಕ್ಕಾಗಿ ಧರ್ಮ ನಾಶದ ವ್ಯವಸ್ಥಿತ ಸಂಚು ನಡೆಯುತ್ತಿದೆ. ಆದ್ದರಿಂದ ಧರ್ಮದ ರಕ್ಷಣೆಗೆ ಮಠಾಧಿಧೀಶರು ಒಂದಾಗಬೇಕು ಎಂದು ಬಾಳೆಹೊನ್ನೂರು ರಂಭಾಪುರಿ ಪೀಠಾಧ್ಯಕ್ಷ ಡಾ| ಪ್ರಸನ್ನ ರೇಣುಕಾ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು.

ತಾಲೂಕಿನ ಸಿಂಗ್ರಿಹಳ್ಳಿ ಗ್ರಾಮದಲ್ಲಿ ಭಾನುವಾರ ಶಿವ ಗಣಪತಿ ದೇವಾಲಯದ ಉದ್ಘಾಟನೆ, ಸಾಮೂಹಿಕ ವಿವಾಹ ಮತ್ತು ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯವಹಿಸಿ ಅವರು ಆಶೀರ್ವಚನ ನೀಡಿದರು.

ವೈಚಾರಿಕತೆ ಹಾಗೂ ಧಾರ್ಮಿಕ ಸುಧಾರಣೆಯ ಹೆಸರಿನಲ್ಲಿ ಪಾಶ್ಚಾತ್ಯ ಸಂಸ್ಕೃತಿಯನ್ನು ಹೇರಲಾಗುತ್ತಿದೆ. ಇಂಥವರ ಬಗ್ಗೆ
ಉದಾಸೀನ ಮಾಡಿದರೆ ಧರ್ಮ ಅವನತಿಯತ್ತ ಸಾಗುತ್ತದೆ. ವೀರಶೈವ ಧರ್ಮಕ್ಕೆ ಜಾತ್ಯತೀತವಾಗಿ ಎಲ್ಲಾ ಸಮುದಾಯಕ್ಕೆ ಮಾರ್ಗದರ್ಶನ, ಸಂಸ್ಕಾರ ನೀಡಿರುವ ಹೆಗ್ಗಳಿಕೆಯಿದೆ.  ಭಕ್ತರು ನಿಷ್ಠೆ, ಸಹಿಷ್ಣತೆ, ರಾಷ್ಟ್ರಾಭಿಮಾನ ಮೈಗೂಡಿಸಿಕೊಂಡು ನಡೆದುಕೊಳ್ಳುವುದು ಅವಶ್ಯಕವಾಗಿದೆ. ಧರ್ಮವು ಕೇವಲ ವೇದಿಕೆ ಸಮಾರಂಭಕ್ಕೆ ಸೀಮಿತವಾಗಿಲ್ಲ, ಧಾರ್ಮಿಕ ನುಡಿಯನ್ನು ಭಕ್ತರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಉಜ್ಜಯಿನಿ ಪೀಠಾಧ್ಯಕ್ಷ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಹಿಂದೆ ನ್ಯಾಯಾಲಯಗಳು ಇಲ್ಲದ ಸಮಯದಲ್ಲಿ ದೇವಾಲಯಗಳೇ ನ್ಯಾಯಾಲಯಗಳಾಗಿದ್ದವು. ಅಪರಾಧಗಳನ್ನು ಕಡಿಮೆ ಮಾಡುವಂತಹ ಸಾಮರ್ಥ್ಯ ದೇವಸ್ಥಾನಗಳಿಗಿದೆ.

ದೇವಾಲಯಗಳು ಭಯ, ಭಕ್ತಿ ಮೂಲಕ ಮನುಷ್ಯರ ಮನಪರಿವರ್ತನೆ ಮಾಡುವ ಕೇಂದ್ರಗಳಾಗಿವೆ ಎಂದರು. ಭಾರತ ಮಂದಿರಗಳ ದೇಶವಾಗಿದ್ದು, ಇಲ್ಲಿ  ವಸ್ಥಾನಗಳಿಲ್ಲದ ಒಂದು ಗ್ರಾಮವೂ ಕಾಣಿಸುವುದಿಲ್ಲ. ವಿದೇಶಗರು ತಮ್ಮ ದೇಹವನ್ನು ಪ್ರೀತಿಸುತ್ತಾರೆ. ಆದರೆ ಭಾರತದಲ್ಲಿ ದೇಹಕ್ಕಿಂತ ಹೆಚ್ಚಾಗಿ ದೇವರನ್ನು ಪ್ರೀತಿಸುತ್ತಾರೆ. ತಾವು ದುಡಿದ ಹಣವನ್ನು ದೇವರಿಗೆ ದಾನ ಮಾಡುವ ಸಂಸ್ಕೃತಿ, ಪರಂಪರೆ ಭಾರತದಲ್ಲಿ ಮಾತ್ರ ಕಾಣಬಹುದಾಗಿದೆ ಎಂದು ತಿಳಿಸಿದರು.

ಸಂಸದ ಜಿ.ಎಂ.ಸಿದ್ದೇಶ್ವರ್‌ ಮಾತನಾಡಿ, ಸಾಮೂಹಿಕ ವಿವಾಹದಲ್ಲಿ ನವ ದಂಪತಿಗಳಿಗೆ ಮಠಾಧೀಶರ ಆಶೀರ್ವಾದ ಸಿಗುವುದರಿಂದ ಯೋಗ ಪ್ರಾಪ್ತಿಯಾಗುತ್ತದೆ. ದೇವಸ್ಥಾನ ಉದ್ಘಾಟನೆ ಮೂಲಕ ನವ ಜೀವನಕ್ಕೆ ಕಾಲಿಡುತ್ತಿರುವ ಜೋಡಿಗಳು ನಿಜಕ್ಕೂ ಧನ್ಯರು ಎಂದರು.

ಶ್ರೀಗಳ ಸಾನ್ನಿಧ್ಯದಲ್ಲಿ 7 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ನಂದಿಹಳ್ಳಿ ಮಠದ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ಸಿಂಗ್ರಿಹಳ್ಳಿ ಕೊಟ್ರೇಶ್ವರ ಸ್ವಾಮೀಜಿ, ನೀಲಗುಂದ ಚನ್ನಬಸವ ಸ್ವಾಮೀಜಿ, ಐನಹಳ್ಳಿ ಮಹೇಶ್ವರ ಸ್ವಾಮೀಜಿ, ಲೆಕ್ಕದೇವರ ಮಠ ಬಸವರಾಜಪ್ಪ, ಚಿರಸ್ತಹಳ್ಳಿ ಮಲ್ಲಿಕಾರ್ಜುನ್‌ ಕಲ್ಮಠ, ಗ್ರಾ.ಪಂ ಅಧ್ಯಕ್ಷ ಮಂಜ್ಯನಾಯ್ಕ, ದೇವಸ್ಥಾನ ಸಮಿತಿ ಜಯಪ್ರಕಾಶ್‌ ಬಣಕಾರ್‌, ದೇವೇಂದ್ರಪ್ಪ, ಕೋಟ್ರಯ್ಯಸ್ವಾಮಿ, ಬಸವರಾಜಪ್ಪ, ವೀರಯ್ಯ, ಸೋಮಪ್ಪ, ವಿರಭದ್ರಪ್ಪ, ಬಸಪ್ಪ, ಸಿದ್ದಲಿಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.