ಎಸ್ಸೆಸ್ಸೆಂ ವಿರುದ್ಧ ಮಾತಾಡಲು ಮೇಯರ್ಗೆ ನೈತಿಕತೆ ಇಲ್ಲ
Team Udayavani, May 17, 2022, 2:34 PM IST
ದಾವಣಗೆರೆ: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಬಗ್ಗೆ ಮಾತನಾಡಲು ಮಹಾನಗರ ಪಾಲಿಕೆ ಮೇಯರ್ ಅವರಿಗೆ ನೈತಿಕತೆ ಇಲ್ಲ ಎಂದು ನಗರಪಾಲಿಕೆ ವಿಪಕ್ಷ ನಾಯಕ ಜಿ.ಎಸ್. ಮಂಜುನಾಥ್ ಗಡಿಗುಡಾಳ್ ಹೇಳಿದ್ದಾರೆ.
ಮಹಾನಗರ ಪಾಲಿಕೆಯಲ್ಲಿ ಮೇಯರ್ ಯಾರು ಆಗಿದ್ದಾರೆ ಅಂತಾನೇ ಗೊತ್ತಾಗುತ್ತಿಲ್ಲ. ಜಯಮ್ಮ ಗೋಪಿನಾಯ್ಕ ಅವರಂತೂ ಏನೇ ಕೇಳಿದರೂ ಬೇರೆಯವರ ಬಳಿ ಮಾತನಾಡಿ ಅಂತಾರೆ. ಅಂತಹವರು ದೊಡ್ಡವರ ಬಗ್ಗೆ ಮಾತನಾಡಿದರೆ ದೊಡ್ಡವರಾಗಿ ಬಿಡುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಎಂಸಿಸಿ ಬಿ ಬ್ಲಾಕ್ನ ಅನುದಾನ ಕೇಳಲು ಕರೆ ಮಾಡಿದರೆ ಮೇಯರ್ ಪತಿ ಗೋಪಿನಾಯ್ಕ ಸ್ವೀಕರಿಸುತ್ತಾರೆ. ಅವರಿಗೆ ಕೇಳಿದರೆ ಮಾಜಿ ಮೇಯರ್ ಎಸ್.ಟಿ. ವೀರೇಶ್ ಅವರ ಬಳಿ ಕೇಳಿ ಹೇಳುತ್ತೇನೆ ಎನ್ನುತ್ತಾರೆ. ಹಾಗಿದ್ದರೆ ಮೇಯರ್ ಆಗಿರುವುದು ಯಾರು ಎಂಬುದೇ ನಮಗೆ ಗೊತ್ತಾಗುತ್ತಿಲ್ಲ ಎಂದಿದ್ದಾರೆ.
ಮೇಯರ್ ಅವರು ಮೊದಲು ತಮ್ಮ ಜವಾಬ್ದಾರಿ ಅರಿತು ಮಾತನಾಡಲಿ. ಮಲ್ಲಿಕಾರ್ಜುನ್ ಅವರು ರಾಜಕಾರಣಕ್ಕೆ ಬಂದು ಎಷ್ಟು ವರ್ಷವಾಯ್ತು. ಜಯಮ್ಮ ಅವರು ಮೇಯರ್ ಆಗಿದ್ದು ಈಗಷ್ಟೇ. ಮಲ್ಲಿಕಾರ್ಜುನ್ ಅವರ ಅವಧಿಯಲ್ಲಿ ಯಾವೆಲ್ಲ ಅಭಿವೃದ್ಧಿ ಕೆಲಸ ಆಗಿವೆ ಎಂಬುದನ್ನು ಮೊದಲು ತಿಳಿದುಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.
ಎಸ್.ಟಿ. ವೀರೇಶ್ ಮೇಯರ್ ಆಗಿದ್ದಾಗ 34 ಸಾವಿರ ಗಿಡಗಳನ್ನು ನೆಟ್ಟಿದ್ದೇವೆ ಎಂದಿದ್ದರು. ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿದಾಗ ಸ್ಥಾಯಿ ಸಮಿತಿ ಸದಸ್ಯರ ಜೊತೆ ಪರಿಶೀಲನೆಗೆ ಹೋಗೋಣ ಎಂದು ಮೇಯರ್ ಜಯಮ್ಮ ಹೇಳಿದ್ದರೂ ಇದುವರೆಗೆ ಆಗಿಲ್ಲ. ನಾಲ್ಕು ಬಾರಿ ಗಮನಕ್ಕೆ ತಂದರೂ ಮುಂದೂಡುತ್ತಲೇ ಇದ್ದಾರೆ. ಇದನ್ನು ನೋಡಿದರೆ ಭ್ರಷ್ಟಾಚಾರ ನಡೆದಿದೆ ಎಂಬುದು ಗೊತ್ತಾಗುತ್ತದೆ. ಮಲ್ಲಣ್ಣನವರ ಬಗ್ಗೆ ಮಾತನಾಡಿದರೆ ಮುಂದೆ ಶಾಸಕರಾಗಬಹುದು ಎಂಬ ಭ್ರಮೆಯಲ್ಲಿ ಎಸ್.ಟಿ. ವೀರೇಶ್ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಪಿ.ಬಿ. ರಸ್ತೆ, ಎಲೆಬೇತೂರು ರಸ್ತೆ, ರಿಂಗ್ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಮಲ್ಲಿಕಾರ್ಜುನ್ ಅವರ ಸಂಬಂಧಿಕರು ಮಾತ್ರ ಓಡಾಡುತ್ತಾರಾ, ಬೇರೆ ಜನರು ಓಡಾಡುತ್ತಿಲ್ಲವೆ, ಕುಂದುವಾಡ ಕೆರೆಯ ನೀರನ್ನು ಮಲ್ಲಣ್ಣನವರ ಸಂಬಂಧಿಕರು ಮಾತ್ರ ಕುಡಿಯುತ್ತಾರಾ ಎಂದು ಪ್ರಶ್ನಿಸಿದ್ದಾರೆ.
ಮಹಾನಗರ ಪಾಲಿಕೆಯ 28, 37 ನೇ ವಾರ್ಡ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ. ಆಮಿಷಕ್ಕೆ ಒಳಗಾಗಿ ಪಕ್ಷ ಬಿಟ್ಟು ಹೋದವರಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ. ಪಾಲಿಕೆಯಲ್ಲಿ ಆಪರೇಷನ್ ಕಮಲ ಮಾಡುವ ಮೂಲಕ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿರುವ ಬಿಜೆಪಿಗೆ ಮಾತನಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
Rural Life: ಗ್ರಾಮೀಣ ಬದುಕಿನ ಮೆಲುಕು