ಯುವತಿಗೆ ಅಶ್ಲೀಲ ಮೆಸೇಜ್; ಯುವಕನಿಗೆ ಥಳಿಸಿ ಊರಲ್ಲಿ ಅರೆಬೆತ್ತಲೆ ಮೆರವಣಿಗೆ!
Team Udayavani, May 15, 2022, 9:29 AM IST
ದಾವಣಗೆರೆ: ಯುವತಿಗೆ ಅಶ್ಲೀಲ ಸಂದೇಶ ಕಳಿಸಿದ್ದರ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿದ್ದ ಯುವಕನಿಗೆ ಯುವತಿಯ ಕಡೆಯವರು ಥಳಿಸಿ, ಅರೆಬೆತ್ತಲೆ ಮೆರವಣಿಗೆ ಮಾಡಿದ ಘಟನೆ ದಾವಣಗೆರೆ ತಾಲೂಕಿನ ಅತ್ತಿಗೆರೆ ಗ್ರಾಮದಲ್ಲಿ ನಡೆದಿದೆ.
ಅತ್ತಿಗೆರೆ ಗ್ರಾಮದ ಯುವಕ ಗಣೇಶ್ ಎಂಬಾತ ಅದೇ ಊರಿನ ಯುವತಿಯೊಬ್ಬಳಿಗೆ ಇನ್ ಸ್ಟಾಗ್ರಾಂನಲ್ಲಿ ‘ಹಾಯ್’ ಮೆಸೇಜ್ ಹಾಕಿದ್ದ. ನಂತರ ಯುವತಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಅದನ್ನು ಫೇಸ್ಬುಕ್ನಲ್ಲಿ ಸಹ ಹಾಕಿದ್ದ. ಈ ವಿಚಾರ ತಿಳಿದ ಯುವತಿ ಕುಟುಂಬಸ್ಥರು ಯುವಕನಿಗೆ ಪ್ರಶ್ನಿಸಿದ್ದಾರೆ.
ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಲ್ಲದೇ ಅಶ್ಲೀಲವಾಗಿ ಸಂದೇಶ ಕಳಿಸುವ ಮೂಲಕ ಯುವತಿಗೆ ಕಾಟ ಕೊಡುತ್ತಿದ್ದ. ವಾಟ್ಸಪ್ನಲ್ಲಿ ಮೆಸೇಜ್ ಮಾಡುವುದು, ಫೇಸ್ಬುಕ್ನಲ್ಲಿ ಯುವತಿಯ ಫೋಟೋ ಹಾಕಿ, ಕವನ ಬರೆಯುವುದನ್ನು ಮಾಡುತ್ತಿದ್ದ ಯುವಕನ ಚೇಷ್ಟೆಗಳ ಬಗ್ಗೆ ತಿಳಿದ ಯುವತಿ ಕುಟುಂಬಸ್ಥರು ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಇದನ್ನೂ ಓದಿ:ತ್ರಿಪುರದಲ್ಲಿ ಸಿಎಂ ಬದಲಾವಣೆ; ಬಿಜೆಪಿ ಶಾಸಕರಲ್ಲೇ ಅಸಮಾಧಾನ; ಜಗಳದ ವಿಡಿಯೋ ವೈರಲ್
ಥಳಿಸುತ್ತಿದ್ದ ವೇಳೆ ಮೊದಲ ಮಹಡಿಯಿಂದ ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ‘’ನಮ್ಮ ಮನೆಯ ಯುವತಿ ಅಷ್ಟೇ ಅಲ್ಲ, ಯಾರ ಮನೆಯ ಹೆಣ್ಣು ಮಕ್ಕಳಿಗೂ ನಿನ್ನಂತಹವರಿಂದ ಕಾಟ ಆಗಬಾರದು ‘’ಎಂದು ಗ್ರಾಮದ ದೇವಸ್ಥಾನದ ಬಳಿ ಗಣೇಶನನ್ನು ಕಟ್ಟಿ ಹಾಕಿ, ಗ್ರಾಮಸ್ಥರು ಧರ್ಮದೇಟು ನೀಡಿದ್ದಾರೆ. ನಂತರ ಆತನನ್ನು ಅರೆಬೆತ್ತಲೆ ಮಾಡಿ, ಗ್ರಾಮದಲ್ಲಿ ಸುತ್ತಾಡಿಸಿದ್ದಾರೆ. ಯುವಕನ ಕಾಟದಿಂದ ಬೇಸತ್ತಿದ್ದ ಯುವತಿ ಕುಟುಂಬಸ್ಥರು, ಗ್ರಾಮಸ್ಥರು ಕಾಟ ಕೊಡುತ್ತಿದ್ದ ಯುವಕನಿಗೆ ಬುದ್ಧಿ ಹೇಳಿದ್ದಾರೆ.
ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ