ಮೆಟ್ರೋ ಪಿಲ್ಲರ್ ದುರಂತ: ದಾವಣಗೆರೆಯಲ್ಲಿ ತೇಜಸ್ವಿನಿ- ವಿಹಾನ್ ಅಂತ್ಯಕ್ರಿಯೆ


Team Udayavani, Jan 11, 2023, 3:19 PM IST

ಮೆಟ್ರೋ ಪಿಲ್ಲರ್ ದುರಂತ: ದಾವಣಗೆರೆಯಲ್ಲಿ ತೇಜಸ್ವಿನಿ- ವಿಹಾನ್ ಅಂತ್ಯಕ್ರಿಯೆ

ದಾವಣಗೆರೆ: ಬೆಂಗಳೂರಿನ ಎಚ್ ಬಿಆರ್ ಲೇಔಟ್ ಹೆಣ್ಣೂರು ಕ್ರಾಸ್ ಸಮೀಪ ಮಂಗಳವಾರ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಬಿದ್ದು ಸಾವನ್ನಪಿದ ತೇಜಸ್ವಿನಿ ಮತ್ತು ವಿಹಾನ್ ಅವರ ಅಂತ್ಯಕ್ರಿಯೆಯನ್ನು ತೇಜಸ್ವಿನಿ ಅವರ ತವರೂರು ದಾವಣಗೆರೆಯಲ್ಲಿ ಬುಧವಾರ ನೆರವೇರಿಸಲಾಯಿತು.

ಮಂಗಳವಾರ ಬೆಂಗಳೂರಿನಲ್ಲಿ ನಡೆದ ಘೋರ ದುರಂತದಲ್ಲಿ ಮೃತಪಟ್ಟ ತೇಜಸ್ವಿನಿ ಮೂಲತಃ ದಾವಣಗೆರೆಯವರು. ತೇಜಸ್ವಿನಿ ಅವರ ಕುಟುಂಬ ದಾವಣಗೆರೆಯ ಬಸವೇಶ್ವರ ನಗರದಲ್ಲಿ ವಾಸವಾಗಿದೆ. ಸಾಫ್ಟ್ ವೇರ್ ಎಂಜಿನಿಯರ್ ತೇಜಸ್ವಿನಿ ಗದಗ ಮೂಲದ ಸಿವಿಲ್ ಇಂಜಿನಿಯರ್ ಲೋಹಿತ್ ಕುಮಾರ್ ಅವರನ್ನು ವಿವಾಹ ವಾಗಿದ್ದರು.

ಮಂಗಳವಾರವೇ ತೇಜಸ್ವಿನಿ ಮತ್ತು ವಿಹಾನ್ ಅವರ ಪಾರ್ಥಿವ ಶರೀರಗಳನ್ನು ಬಸವೇಶ್ವರ ನಗರದ ಮನೆಗೆ ತರಲಾಗಿತ್ತು.

ಭಾವಸಾರ ಕ್ಷತ್ರಿಯ ಸಮಾಜದ ಸಂಪ್ರದಾಯದಂತೆ ತೇಜಸ್ವಿನಿ ಅವರ ಅಂತ್ಯಕ್ರಿಯೆ ಹಳೆ ಪಿ.ಬಿ. ರಸ್ತೆಯಲ್ಲಿನ ವೈಕುಂಠಧಾಮದಲ್ಲಿ ನೆರವೇರಿತು. ಗ್ಲಾಸ್ ಹೌಸ್ ಬಳಿಯ ರುದ್ರಭೂಮಿಯಲ್ಲಿ ವಿಹಾನ್ ಅಂತ್ಯಕ್ರಿಯೆ ಕುಟುಂಬಸ್ಥರ ಆಕ್ರಂದನದ ನಡುವೆ ನಡೆಯಿತು. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ದುರಂತದಲ್ಲಿ ಪಾರಾದ ಲೋಹಿತ್ ಕುಮಾರ್ ಹಾಗೂ ವಿಸ್ಮಿತಾ ಸಹ ಕಣ್ಣೀರು ಹಾಕುವ ದೃಶ್ಯ ಎಲ್ಲರ ಮನಕಲುಕುವಂತಿತ್ತು.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ತೇಜಸ್ವಿನಿ ತಂದೆ ಮದನ್ ಗುಜ್ಜರ್ ಹಾಗೂ ತಾಯಿ ರುಕ್ಷ್ಮೀಮಿ ಬಾಯಿ ಬೆಂಗಳೂರಿಗೆ ಹೋಗಿದ್ದರು.

ಇದನ್ನೂ ಓದಿ:ತೀರ್ಥಹಳ್ಳಿ ಕಾಂಗ್ರೆಸ್ ಕಚೇರಿಯಲ್ಲಿ ಇಡಿ ಪರಿಶೀಲನೆ: ಪ್ರತಿಕ್ರಿಯಿಸಿದ ಕಿಮ್ಮನೆ ರತ್ನಾಕರ್

ರಾಜ್ಯ ಸರ್ಕಾರ ನೀಡುವ ಪರಿಹಾರ ಯಾರಿಗೆ ಬೇಕು, ಜೀವ ತಂದುಕೊಡಲು ಆಗುತ್ತಾ, ಯಾರೋ ಮಾಡಿದ ತಪ್ಪಿಗೆ ನಮ್ಮ ಮಗಳು, ಮೊಮ್ಮಗ ಬಲಿಯಾದರು. ಬದುಕಿ ಬಾಳಬೇಕಿದ್ದ ಮೊಮ್ಮಗನನ್ನು ಕಳೆದುಕೊಂಡಿದ್ದೇವೆ. ನಾವೇ ಪರಿಹಾರ ಕೊಡುತ್ತೇವೆ. ಹೋದ ಜೀವ ತಂದುಕೊಡಲು ಆಗುತ್ತಾ, ಕಮೀಷನ್ ಆಸೆಗೆ ಕಳಪೆ ಕಾಮಗಾರಿ ಮಾಡಿರುವುದೇ  ದುರಂತಕ್ಕೆ ಕಾರಣ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು. ನಮಗೆ ನ್ಯಾಯ ಬೇಕು ಎಂದು ತೇಜಸ್ವಿನಿ ಸಹೋದರಿ ಭಾಗ್ಯ, ದೊಡ್ಡಪ್ಪ ಜಿ. ರಾಘವೇಂದ್ರ ರಾವ್ ಒತ್ತಾಯಿಸಿದರು.

ಕೇವಲ ಕಣ್ಣೊರೆಸುವ ತಂತ್ರ ಮಾಡದೇ ತಪ್ಪು ಮಾಡಿದವರಿಗೆ ಶಿಕ್ಷೆ ಮೊದಲು ವಿಧಿಸಲಿ ಎಂದು ಒತ್ತಾಯಿಸಿದರು.

ದೊಡ್ಡಪ್ಪ ನಾರಾಯಣ್ ಮಾತನಾಡಿ, ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದ ಬಳಿಕ ಲೋಹಿತ್ ಕುಮಾರ್ ಘಟನೆ ಸಂಬಂಧ ದೂರು ನೀಡಲು ಗೋವಿಂದಪುರ ಪೊಲೀಸ್ ಠಾಣೆಗೆ ತೆರಳಿದ್ದಾಗ ದೂರು ದಾಖಲಿಸಿ ಕೊಳ್ಳುವುದಕ್ಕೇ ವಿಪರೀತ ವಿಳಂಬ ಮಾಡಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ದುಃಖದಲ್ಲಿದ್ದ ಲೋಹಿತ್ ಅವರನ್ನು ಠಾಣೆಯಲ್ಲಿ ಹೆಚ್ಚು ಹೊತ್ತು ಕೂರಿಸಿದ ಪೊಲೀಸರ ಕ್ರಮ ಸರಿಯಲ್ಲ. ಈ ಬಗ್ಗೆಯೂ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.