ಬೀದಿಗಿಳಿದ್ರು ಎಂಜಿ ರಸ್ತೆ ವರ್ತಕರು


Team Udayavani, Sep 8, 2018, 4:35 PM IST

dvg-1.jpg

ದಾವಣಗೆರೆ: ನಾಗರಿಕರ ಜೀವ, ವರ್ತಕರ ಜೀವನ ನಿರ್ವಹಣೆಗೆ ಸಂಕಷ್ಟ ತಂದೊಡ್ಡಿರುವ ಸ್ಮಾರ್ಟ್‌ ಸಿಟಿ ಯೋಜನೆ ಕಾಮಗಾರಿ ಸಮಸ್ಯೆಯಿಂದ ಕೂಡಲೇ ಮುಕ್ತಿ ನೀಡಬೇಕು ಎಂದು ಒತ್ತಾಯಿಸಿ ಶುಕ್ರವಾರ ಮಂಡಿಪೇಟೆ ನಿವಾಸಿಗಳು, ವ್ಯಾಪಾರಿಗಳ ಬಳಗದ ನೇತೃತ್ವದಲ್ಲಿ ಮಹಾತ್ಮಗಾಂಧಿ (ಎಂಜಿ) ರಸ್ತೆ ಸಾರ್ವಜನಿಕರು, ವ್ಯಾಪಾರಿಗಳು ಬೀದಿಗಿಳಿದಿದ್ದಾರೆ. 

ದಾವಣಗೆರೆಯಲ್ಲಿ ಸ್ಮಾರ್ಟ್‌ಸಿಟಿ ಯೋಜನೆ ಘೋಷಣೆಯಾಗಿ ಮೂರು ವರ್ಷ ಕಳೆದಿವೆ. ಮಹಾತ್ಮ ಗಾಂಧಿ (ಎಂಜಿ) ರಸ್ತೆ ಅಗೆದು ಮೂರು ತಿಂಗಳೇ ಆಗಿವೆ. ಆದರೆ, ಈವೆರಗೆ ಶೇ. 30ರಷ್ಟು ಕೆಲಸ ಸಹ ಆಗಿಲ್ಲ.

ದಿನಕ್ಕೆ 200ಕ್ಕೂ ಹೆಚ್ಚು ಜನರು ಕೆಲಸ ಮಾಡುವ ಜಾಗದಲ್ಲಿ ಇಬ್ಬರು-ಮೂವರು ಕೆಲಸ ಮಾಡುತ್ತಾರೆ. ಅವರಿಗೆ ಕಾಮಗಾರಿ ಬಗ್ಗೆ ಮಾಹಿತಿ ಇಲ್ಲ. ಇನ್ನು ಅಧಿಕಾರಿಗಳನ್ನು ಕೇಳಿದರೆ ಮೇಲಿನ ಅಧಿಕಾರಿಗಳನ್ನು ಕೇಳಬೇಕು ಎನ್ನುತ್ತಾರೆ. ಆ ಅಧಿಕಾರಿಗಳು ಕೈಗೆ ಸಿಕ್ಕುವುದೇ ಇಲ್ಲ. ಕೇಳಿದರೂ ಸಮರ್ಪಕ ಉತ್ತರ  ನೀಡುವುದಿಲ್ಲ. ಇಡೀ ಕಾಮಗಾರಿ ಯಾವಾಗ ಮುಗಿಯಬಹುದು ಎಂಬುದು ಯಾರಿಗೂ ಗೊತ್ತಿಲ್ಲ. ಅಂತಹವರು ಸ್ಮಾರ್ಟ್‌ಸಿಟಿ ಕಾಮಗಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಆಳವಾಗಿ ರಸ್ತೆ ಅಗೆಯಲಾಗಿದ್ದು, ಮಳೆ ಬಂದು ನೀರು ನಿಂತು, ಅನೇಕರು ಗುಂಡಿಯಲ್ಲಿ ಬಿದ್ದು ಕಾಲು-ಕೈ ಮುರಿದುಕೊಂಡಿದ್ದಾರೆ. ಕೇವಲ 10 ಅಡಿ ಆಕಡೆ- ಈ ಕಡೆ ಓಡಾಡುವುದಕ್ಕೂ ಆಗದಷ್ಟು ದುಸ್ಥಿತಿ ಇದೆ. ರಸ್ತೆ ಇಲ್ಲದ ಕಾರಣಕ್ಕೆ ವ್ಯಾಪಾರ- ವಹಿವಾಟು ಸ್ಥಗಿತಗೊಂಡಿದೆ. ಹಾಗಾಗಿ ಬಾಡಿಗೆ ಕಟ್ಟಲು, ಅಂಗಡಿಯಲ್ಲಿ ಕೆಲಸ ಮಾಡುವರಿಗೆ ಸಂಬಳ ನೀಡಲು ಆಗುತ್ತಿಲ್ಲ. ನಮ್ಮ ಗೋಳು ಯಾರೂ ಕೇಳುವವರೇ ಇಲ್ಲ ಎಂದು ವ್ಯಾಪಾಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಎಂ.ಜಿ. ರಸ್ತೆ ಜೊತೆಗೆ ಮಂಡಿಪೇಟೆ, ಚಾಮರಾಜಪೇಟೆ ಭಾಗದಲ್ಲೂ ನಡೆಯುತ್ತಿರುವ ಸ್ಮಾರ್ಟ್‌ಸಿಟಿ ಕೆಲಸ ಆಮೆಗತಿಯಲ್ಲಿದೆ. ರಸ್ತೆ ಕೆಲಸ ನಡೆಯುತ್ತಿರುವ ಕಾರಣಕ್ಕೆ ಜನರು ಇತ್ತ ಕಡೆ ಸುಳಿಯುವುದೇ ಇಲ್ಲ. ಮಂಡಿಪೇಟೆ, ಎಂ.ಜಿ.ರಸ್ತೆ, ಚಾಮರಾಜಪೇಟೆ ರಸ್ತೆ ಒಳಗೊಂಡಂತೆ ಎಲ್ಲ ಕಡೆ ವ್ಯಾಪಾರ ಅಕ್ಷರಶಃ ನಿಂತೇ ಹೋಗಿದೆ. 

ಇದೇ ಸ್ಥಿತಿ ಮುಂದುವರೆದರೆ ಶಾಶ್ವತವಾಗಿಯೇ ವ್ಯಾಪಾರ ಕಳೆದುಕೊಳ್ಳುವ ಆತಂಕ ಕಾಡುತ್ತಿದೆ. ಅನೇಕ ವರ್ಷದಿಂದ ವ್ಯಾಪಾರವನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಸಾವಿರಾರು ಜನರು ಏನು ಮಾಡಬೇಕು ಎಂಬುದೇ ಗೊತ್ತಾಗುತ್ತಿಲ್ಲ. ನಮ್ಮದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸುವಂತಾಗುತ್ತಿದೆ ಎಂದು ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದರು. 

ರಸ್ತೆ ಕಾಮಗಾರಿ ಬೇಗ ಮುಗಿಸದೇ ಇರುವುದನ್ನು ಪ್ರತಿಭಟಿಸಿ ಈಗ ಅಗೆದಿರುವ ಎಂ.ಜಿ. ರಸ್ತೆಯಲ್ಲೇ ಗಣೇಶನನ್ನು ಪ್ರತಿಷ್ಠಾಪಿಸಿ, ಅಧಿಕಾರಿಗಳ ಕೈಗೆ ಆಗದೇ ಹೋದರೂ ದೇವರಾದರೂ ನಮ್ಮ ಸಮಸ್ಯೆ ಬಗೆಹರಿಸುವಂತೆ ಪ್ರಾರ್ಥಿಸಿ ಭಜನೆ ಮಾಡುತ್ತೇವೆ. ಆದಷ್ಟು ಬೇಗ ಕೆಲಸ ಮುಗಿಸಬೇಕು. ಕಡೆಯ ಪಕ್ಷ ಜನರು ಓಡಾಡಲಿಕ್ಕೆ ಸಾಧ್ಯವಾಗುವಂತಾದರೂ ಅನುಕೂಲ ಮಾಡಿಕೊಡಬೇಕು. ಇಲ್ಲದಿದ್ದಲ್ಲಿ, ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸ್ಮಾರ್ಟ್‌ಸಿಟಿ ಯೋಜನೆ ಅಧಿಕಾರಿಗಳು, 2 ದಿನದಲ್ಲಿ ಜನರು ಓಡಾಡಲಿಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದ ನಂತರ ಹೋರಾಟ ಹಿಂಪಡೆಯಲಾಯಿತು. ರಾಜು ಮೌರ್ಯ, ವಿಜಯ್‌ಕುಮಾರ್‌, ಸತ್ಯನಾರಾಯಣ ಶೆಟ್ಟಿ, ಬಿ.ಎಂ. ರಾಜು, ಜಯಣ್ಣ, ಬಿ. ಸುರೇಶ್‌, ಆತ್ಮಾರಾಮ್‌, ಮೋಹನ್‌ಲಾಲ್‌ ಗಣೇಶ್‌ ಇತರರು ಇದ್ದರು.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.