ಕೋಟ್ಯಂತರ ಆಯುಷ್ಮಾನ್‌ ಕಾರ್ಡ್‌ ವ್ಯರ್ಥ!


Team Udayavani, Jul 25, 2023, 8:05 AM IST

ಕೋಟ್ಯಂತರ ಆಯುಷ್ಮಾನ್‌ ಕಾರ್ಡ್‌ ವ್ಯರ್ಥ!

ದಾವಣಗೆರೆ: ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ರಾಜ್ಯದಲ್ಲಿ ನೋಂದಣಿಯಾದ ಹಳೆಯ (ಒಂದು ವರ್ಷ ಹಿಂದಿನ) ಕೋಟ್ಯಂತರ ಆರೋಗ್ಯ ವಿಮೆ ಕಾರ್ಡ್‌ಗಳು ನಿರುಪಯುಕ್ತವಾಗಿವೆ!

ನೀವು ಮಾಡಿಸಿಕೊಂಡ ಆಯುಷ್ಮಾನ್‌- ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯ ಆರೋಗ್ಯ ವಿಮೆ ಕಾರ್ಡ್‌ನಲ್ಲಿ ಹೆಲ್ತ್‌ ಐಡಿ ನಂಬರ್‌ ಎಂದರೆ, ಪಿಎಂ-ಜೆಎವೈ ಐಡಿ ಇಲ್ಲದಿದ್ದರೆ ಅದು ಈಗ ವ್ಯರ್ಥವಾಗಿದೆ. ಆದ್ದರಿಂದ ನೀವು ಆನ್‌ಲೈನ್‌ ಸೇವಾ ಕೇಂದ್ರ ಇಲ್ಲವೇ ಸ್ವತಃ ಅರ್ಜಿ ಹಾಕಿ ಉಚಿತವಾಗಿ ಹೆಲ್ತ್‌ ಐಡಿ (ಪಿಎಂ-ಜೆಎವೈ ಐಡಿ) ನಂಬರ್‌ ಇರುವ ಹೊಸ ಆಯುಷ್ಮಾನ್‌ ಭಾರತ್‌- ಪ್ರಧಾನಮಂತ್ರಿ ಜನಾರೋಗ್ಯ ಕರ್ನಾಟಕ ಕಾರ್ಡ್‌ ಪಡೆದುಕೊಳ್ಳಬೇಕು.

ಕಳೆದ ವರ್ಷ ಕೇಂದ್ರ ಸರಕಾರವು ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಆರೋಗ್ಯ ವಿಮೆ ಕಾರ್ಡ್‌ ಗಳಲ್ಲಿ ಮಾರ್ಪಾಡು ತಂದಿದ್ದು, ಇದರಲ್ಲಿ ಹೆಲ್ತ್‌ ಐಡಿ (ಪಿಎಂ-ಜೆಎವೈ ಐಡಿ) ನಂಬರ್‌ ಸೇರಿಸಿದೆ. ಆದ್ದರಿಂದ ಈಗ ಆರೋಗ್ಯ ವಿಮೆ ಪಡೆಯುವವರು ಹೆಲ್ತ್‌ ಐಡಿ ಇರುವ ಹೊಸ ಆಯುಷ್ಮಾನ್‌ ಭಾರತ್‌ ಪ್ರಧಾನಮಂತ್ರಿ ಜನಾರೋಗ್ಯ ಕರ್ನಾಟಕ ಕಾರ್ಡ್‌ (ಎಬಿ-ಪಿಎಂಜೆಎವೈ-ಎಆರ್‌ಕೆ ಕಾರ್ಡ್‌) ಪಡೆದುಕೊಳ್ಳಬೇಕಾಗಿದೆ.

ಆಯುಷ್ಮಾನ್‌ ಕಾರ್ಡ್‌ಗಳನ್ನು ಮೊದಲು 35 ರೂ. ಕೊಟ್ಟು ಜನರು ಮಾಡಿಸಿಕೊಂಡಿದ್ದರು. ಈಗ ಎಬಿ- ಪಿಎಂಜೆಎವೈ-ಎಆರ್‌ಕೆ ಕಾರ್ಡ್‌ಗಳನ್ನು ಸಾರ್ವಜನಿಕರು ಉಚಿತವಾಗಿ ಪಡೆಯಬಹುದು. 1 ವರ್ಷದಲ್ಲಿ ರಾಜ್ಯದಲ್ಲಿ 45 ಲಕ್ಷಕ್ಕೂ ಅಧಿಕ ಹೊಸ ಎಬಿ-ಪಿಎಂಜೆಎವೈ-ಎಆರ್‌ಕೆ ಕಾರ್ಡ್‌ ನೋಂದಣಿಯಾಗಿವೆ.

ಕಾರ್ಡ್‌ ಕಡ್ಡಾಯವಲ್ಲ
ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆ ಯಡಿ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ (ಬಿಪಿಎಲ್‌ನವರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ) ಹಾಗೂ ರಿಯಾಯಿತಿ (ಎಪಿಎಲ್‌ನವರಿಗೆ ಶೇ.30ರಷ್ಟು ರಿಯಾಯಿತಿ) ಆರೋಗ್ಯ ಸೇವೆ ಪಡೆಯಲು ಆರೋಗ್ಯ ಕಾರ್ಡ್‌ ಕಡ್ಡಾಯವಲ್ಲ ಎಂದು ಸರಕಾರ ಹೇಳಿದೆ. ಆದರೆ ಕಾರ್ಡ್‌ ಬದಲಿಗೆ ಆಧಾರ್‌ ಕಾರ್ಡ್‌, ಪಡಿತರ ಚೀಟಿ ಕೊಟ್ಟು ಸರಕಾರಿ ವೈದ್ಯರಿಂದ ಶಿಫಾರಸು ಪತ್ರ ಪಡೆದು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕು. ಆರೋಗ್ಯ ಕಾರ್ಡ್‌ ಮಾಡಿಟ್ಟುಕೊಂಡರೆ ತುರ್ತು ಆರೋಗ್ಯ ಸೇವೆ ಪಡೆಯಬೇಕಾದ ಸಂದರ್ಭದಲ್ಲಿ ದಾಖಲೆ ಪತ್ರಗಳಿಗಾಗಿ ತಡಕಾಡುವುದು ತಪ್ಪುತ್ತದೆ.

ಕಳೆದ ವರ್ಷದಿಂದ ಫಲಾನುಭವಿಯ ಆರೋಗ್ಯ ಮಾಹಿತಿ ದಾಖಲಿಸಲು ಸಹಕಾರಿಯಾಗುವಂತೆ ಹೆಲ್ತ್‌ ಐಡಿ ಇರುವ ಹೊಸ ಕಾರ್ಡ್‌ಗಳನ್ನು ನೀಡಲಾಗುತ್ತಿದೆ. ಹೆಲ್ತ್‌ ಐಡಿ ಇಲ್ಲದ ಹಳೆಯ ಕಾರ್ಡ್‌ಗಳು ಈಗ ನಿರುಪಯುಕ್ತವಾಗಿವೆ. ಆದ್ದರಿಂದ ಸಾರ್ವಜನಿಕರು ಆನ್‌ಲೈನ್‌ ಸೇವಾ ಕೇಂದ್ರ ಇಲ್ಲವೇ ಸ್ವತಃ ಅರ್ಜಿ ಹಾಕಿ ಉಚಿತವಾಗಿ ಹೊಸ ಎಬಿ-ಪಿಎಂಜೆವೈ-ಎಆರ್‌ಕೆ ಕಾರ್ಡ್‌ ಪಡೆಯಹುದಾಗಿದೆ.
– ಡಾ| ಮುರುಳೀಧರ, ಜಿಲ್ಲಾ ಉಸ್ತುವಾರಿ ಅಧಿಕಾರಿ, ಎಬಿ-ಪಿಎಂಜೆಎವೈ-ಎಆರ್‌ಕೆ, ದಾವಣಗೆರೆ

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.