ಏಳು ಜನರಿಗೆ ಸಚಿವ ಸ್ಥಾನ ಖಚಿತ. ನಾಳೆ ಅಧಿಕೃತ ಘೋಷಣೆ: ಶ್ರೀರಾಮುಲು
Team Udayavani, Jan 11, 2021, 7:30 PM IST
ದಾವಣಗೆರೆ: ರಾಜ್ಯದಲ್ಲಿ ಒಟ್ಟು ಏಳು ಮಂದಿಗೆ ಸಚಿವ ಸ್ಥಾನ ದೊರಕಲಿದ್ದು , ಈ ಕುರಿತಾಗಿ ನಾಳೆ ಅಧಿಕೃತ ಘೋಷಣೆಯಾಗುತ್ತದೆ ಎಂದು ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.
ಸೋಮವಾರ(ಜನವರಿ 10) ದಾವಣಗೆರೆಯ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿರುವ ಆವರು ಸಮಾವೇಶಕ್ಕೂ ಮುನ್ನ ಮಾತನಾಡಿ, ಮುಖ್ಯಮಂತ್ರಿಯವರು ದೆಹಲಿಗೆ ತೆರಳಿ ಮಾತುಕತೆ ನಡೆಸಿದ್ದಾರೆ. ಒಟ್ಟು ಏಳು ಜನರಿಗೆ ಸಚಿವ ಸ್ಥಾನ ನೀಡುವುದು ಖಚಿತವಾಗಿದ್ದು, ಇದರಲ್ಲಿ ವಲಸಿಗರಿಗೆ ಹಾಗೂ ಪಕ್ಷದ ಹಿರಿಯರಿಗೆ ಅವಕಾಶ ಸಿಗುತ್ತದೆ. ಈ ಕುರಿತಾದ ಅಧಿಕೃತ ಘೋಷಣೆ ನಾಳೆ ಹೊರಬೀಳುವ ಸಾಧ್ಯತೆಗಳಿವೆ ಎಂದಿದ್ದಾರೆ.
ಇನ್ನು ಖಾತೆಗಳ ಬದಲಾವಣೆಯ ಕುರಿತಾಗಿ ಮಾತನಾಡಿರುವ ಶ್ರೀರಾಮುಲು ಸಚಿವ ಸಂಪುಟದಲ್ಲಿ ಯಾವುದೇ ಖಾತೆ ಬದಲಾವಣೆ ಇಲ್ಲ ಮತ್ತು ಉಪಮುಖ್ಯಮಂತ್ರಿ ಸ್ಥಾನ ಕುರಿತು ಯೋಚಿಸಿ ನೋಡೊಣ ಎಂದು ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಸಂಬಳದಲ್ಲಿ ಸ್ವಲ್ಪ ಕಡಿತ! ಏಪ್ರಿಲ್ನಿಂದ ಜಾರಿಗೆ?!
ಮುಖ್ಯಮಂತ್ರಿ ಯಡಿಯೂರಪ್ಪ ಭಾನುವಾರ (ಜನವರಿ 10)ರಂದು ದೆಹಲಿಗರ ತೆರಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಸುಮಾರು ಒಂದು ಗಂಟೆ ಚರ್ಚೆ ನಡೆಸಿದ್ದು, ಸಂಪುಟ ವಿಸ್ತರಣೆ, ಪಕ್ಷ ಸಂಘಟನೆ, ಉಪ ಚುನಾವಣೆಗಳ ಸಿದ್ಧತೆ ಸಂಬಂಧ ಮಾತುಕತೆ ನಡೆಸಿದ್ದರು.
ಭವಿಷ್ಯದಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ನಂತರದ ನಾಯಕತ್ವದ ಕುರಿತಂತೆಯೂ ಚರ್ಚೆ ನಡೆದಿದೆ ಎಂದು ಹೇಳ ಲಾಗಿದೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಅಥವಾ ಯಾವುದೇ ಬದಲಾವಣೆ, ಬೆಳವಣಿಗೆಗಳ ಬಗ್ಗೆ ಎಚ್ಚರಿಕೆ ಹೆಜ್ಜೆ ಇಡಲು ವರಿಷ್ಠರು ಮುಂದಾಗಿದ್ದಾರೆ. ಏನೇ ಇದ್ದರೂ, ಯಡಿಯೂರಪ್ಪ ಅವರನ್ನು ವಿಶ್ವಾಸಕ್ಕೆ ತೆಗೆದು ಕೊಂಡೇ ತೀರ್ಮಾನಿಸಲು ವರಿಷ್ಠರು ಚಿಂತಿಸಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ