ಮುಂಗಾರು ಕೃಷಿ ಚಟುವಟಿಕೆ ಚುರುಕು


Team Udayavani, Jun 12, 2018, 12:39 PM IST

dvg-1.jpg

ದಾವಣಗೆರೆ: ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಪ್ರಾರಂಭ ಹಂತದಲ್ಲಿ ಆದ ಮಳೆಯಿಂದ ಈವರೆಗೆ ಜಿಲ್ಲೆಯಾದ್ಯಂತ ಶೇ. 13.9ರಷ್ಟು ಬಿತ್ತನೆಯಾಗಿದೆ. ಕಳೆದ ಬಾರಿ ಪೂರ್ವ ಮುಂಗಾರು ಮತ್ತು ಮುಂಗಾರು ಆರಂಭದಲ್ಲಿ ಮಳೆ ಕೊರತೆ ಪರಿಣಾಮ ಬಿತ್ತನೆ ಕುಂಠಿತಗೊಂಡಿತ್ತು. ಈ ವರ್ಷ ಉತ್ತಮ ಮಳೆಯಿಂದಾಗಿ ಬಿತ್ತನೆ ಕಾರ್ಯ ಚುರುಕಾಗಿದೆ.

ದಾವಣಗೆರೆ, ಹರಪನಹಳ್ಳಿ ತಾಲೂಕಿನ ಹಲವಾರು ಪ್ರದೇಶದಲ್ಲಿ ಎಡೆಬಿಡದೆ ಮಳೆಯಾದ ಕಾರಣ ಬಿತ್ತನೆ
ಮಾಡಲಾಗುತ್ತಿಲ್ಲ. ಒಂದರೆಡು ದಿನಗಳ ಕಾಲ ಮಳೆಯು ಬಿಡುವು ಕೊಡುವುದನ್ನು ರೈತರು ಕಾಯುವಂತಾಗಿದೆ. ಹರಪನಹಳ್ಳಿಯ ಕೆಲವು ಭಾಗದಲ್ಲಿ ಅತಿಯಾದ ಮಳೆಯ ಕಾರಣ ಹುಳುಗಳ ಬಾಧೆಯೂ ಕಾಡುತ್ತಿದೆ.

ಒಟ್ಟಾರೆಯಾಗಿ ಈ ಬಾರಿ ಉತ್ತಮ ಮಳೆ ಮಾತ್ರವಲ್ಲ, ಬೆಳೆಯ ನಿರೀಕ್ಷೆ ಇದೆ. 42,268 ಹೆಕ್ಟೇರ್‌ ಬಿತ್ತನೆ: ಜಿಲ್ಲೆಯಾದ್ಯಂತ 3,22,840 ಹೆಕ್ಟೇರ್‌ ಬಿತ್ತನೆ ಪ್ರದೇಶದ ಗುರಿ ಇದೆ. ಸದ್ಯ 42,268 ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ, ಜೋಳ, ಹತ್ತಿ ಇತರೆ ಬೆಳೆಗಳ ಬಿತ್ತನೆ ಆಗಿದೆ. ಹಲವು ಕಡೆ ಬಿತ್ತನೆ ಕಾರ್ಯ ಪ್ರಗತಿಯಲ್ಲಿದೆ. ಮುಂಗಾರು ಹಂಗಾಮಿನಲ್ಲಿ ದಾವಣಗೆರೆ ತಾಲೂಕಿನ 64 ಸಾವಿರ ಹೆಕ್ಟೇರ್‌ ಪ್ರದೇಶದ ಬಿತ್ತನೆ ಗುರಿಯಲ್ಲಿ 10,882 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ಅತಿ ಹೆಚ್ಚು ನೀರಾವರಿ ಪ್ರದೇಶ ಹೊಂದಿರುವ ಹರಿಹರ ತಾಲೂಕಿನಲ್ಲಿ 32 ಸಾವಿರ ಹೆಕ್ಟೇರ್‌ನಲ್ಲಿ ಇನ್ನೂ ಬಿತ್ತನೆ ನಡೆದಿಲ್ಲ. ಆ ತಾಲೂಕಲ್ಲಿ ಭತ್ತ ಹೆಚ್ಚಾಗಿ ಬೆಳೆಯುವ ಹಿನ್ನೆಲೆಯಲ್ಲಿ ಬಿತ್ತನೆ ಕಾರ್ಯ ನಡೆದಿಲ್ಲ, ಮಳೆಯಾಶ್ರಿತ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪ್ರಾರಂಭವಾಗಲಿದೆ.

ಬರಪೀಡಿತ ಹಣೆಪಟ್ಟಿ ಹೊಂದಿರುವ ಜಗಳೂರು ತಾಲೂಕಿನಲ್ಲಿ 54 ಸಾವಿರ ಹೆಕ್ಟೇರ್‌ ಪ್ರದೇಶದ ಗುರಿಯಲ್ಲಿ ಈವರೆಗೆ
2,615 ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿದೆ.  79 ಸಾವಿರ ಹೆಕ್ಟೇರ್‌ ಪ್ರದೇಶದ ಗುರಿ ಹೊಂದಿರುವ
ಹರಪನಹಳ್ಳಿ ತಾಲೂಕಿನಲ್ಲಿ 20,250 ಹೆಕ್ಟೇರ್‌ನಲ್ಲಿ ಬಿತ್ತನೆ ಆಗಿದೆ. ಹೊನ್ನಾಳಿ ತಾಲೂಕಿನ 48,985 ಹೆಕ್ಟೇರ್‌ನಲ್ಲಿ 8,061, ಚನ್ನಗಿರಿ 44,855 ಹೆಕ್ಟೇರ್‌ಗೆ 520 ಹೆಕ್ಟೇರ್‌ ನಲ್ಲಿ ಮಾತ್ರ ಬಿತ್ತನೆ ಕಾರ್ಯ ಮುಗಿದಿದೆ. ಒಟ್ಟಾರೆಯಾಗಿ ಈವರೆಗೆ ಶೇ. 13.9 ಪ್ರಮಾಣದಲ್ಲಿ ಬಿತ್ತನೆ ಮುಗಿದಿದೆ.

ಮೆಕ್ಕೆಜೋಳವೇ ಹೆಚ್ಚು: ರಾಜ್ಯದ ಮೆಕ್ಕೆಜೋಳ ಕಣಜ ಎಂದೇ ಗುರುತಿಸಲ್ಪಡುವ ದಾವಣಗೆರೆ ಜಿಲ್ಲೆಯಲ್ಲಿ ಈ ಸಾಲಿನ ಮುಂಗಾರು ಹಂಗಾಮಿನಲ್ಲೂ ರೈತರು ಮೆಕ್ಕೆಜೋಳವನ್ನೇ ಹೆಚ್ಚಾಗಿ ಬಿತ್ತನೆ ಮಾಡಿದ್ದಾರೆ. ಮೆಕ್ಕೆಜೋಳಕ್ಕೆ ಇನ್ನೂ ಕಾಲಾವಕಾಶ ಇದೆ. ಹಾಗಾಗಿ ಮೆಕ್ಕೆಜೋಳದ ಬಿತ್ತನೆ ಪ್ರಮಾಣ ಹೆಚ್ಚಾಗಲಿದೆ. ಅದಕ್ಕೆ ಇಂಬು ನೀಡುವಂತೆ
ಒಳ್ಳೆಯ ಮಳೆಯಾಗುತ್ತಿರುವುದು ನಿರೀಕ್ಷೆಗೆ ಕಾರಣವಾಗಿದೆ.

ದಾವಣಗೆರೆ ತಾಲೂಕಿನಲ್ಲಿ 32,650 ಹೆಕ್ಟೇರ್‌ನಲ್ಲಿ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಮೆಕ್ಕೆಜೋಳದ ಬಿತ್ತನೆ ಗುರಿ ಇದೆ. ಈಗಾಗಲೇ 10,500 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ಹರಿಹರ ತಾಲೂಕಿನಲ್ಲಿ 10,295 ಹೆಕ್ಟೇರ್‌ ಗುರಿ ಇದೆ. ಅಲ್ಲಿ ಬಿತ್ತನೆಯೇ ಆಗಿಲ್ಲ. ಜಗಳೂರು ತಾಲೂಕಿನ 14,250 ಹೆಕ್ಟೇರ್‌ ಪ್ರದೇಶದ ಪೈಕಿ 2,100 ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿದೆ. ಅಂತೆಯೇ ಹರಪನಹಳ್ಳಿಯಲ್ಲಿ 40,500 ಹೆಕ್ಟೇರ್‌ಗೆ 16,600, ಹೊನ್ನಾಳಿಯಲ್ಲಿ 26,320 ಹೆಕ್ಟೇರ್‌ಗೆ 4,443, ಚನ್ನಗಿರಿಯಲ್ಲಿ 25,685 ಹೆಕ್ಟೇರ್‌ಗೆ 200 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 1,49,580 ಹೆಕ್ಟೇರ್‌ನಲ್ಲಿ ಮೆಕ್ಕೆಜೋಳದ ಬಿತ್ತನೆ ಗುರಿ ಇದ್ದು 33,843 ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿದೆ.

ಜೋಳ ಕಡಿಮೆ: ಹಿಂದೊಮ್ಮೆ ಅತಿ ಹೆಚ್ಚಾಗಿ ಬೆಳೆಯಲಾಗುತ್ತಿದ್ದ ಊಟದ ಜೋಳ ಬೆಳೆಯುವುದೇ ಕಡಿಮೆ ಆಗಿದೆ. ಅತಿ ಹೆಚ್ಚಿನ ಪ್ರಾಶ್ಯಸ್ತ ಪಡೆದಿದ್ದ ಜೋಳವನ್ನು ಈಗ ವಾಣಿಜ್ಯ ಕಾರಣಕ್ಕೆ ಅಕ್ಕಡಿ ಬೆಳೆಯಂತೆ ಬೆಳೆಯಲಾಗುತ್ತಿದೆ. ದಾವಣಗೆರೆ ತಾಲೂಕಿನಲ್ಲಿ 650 ಹೆಕ್ಟೇರ್‌ ಗುರಿಗೆ ಈವರೆಗೆ 125, ಜಗಳೂರುನಲ್ಲಿ 2,350 ಹೆಕ್ಟೇರ್‌
ಗೆ 25 ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿದೆ. ಹರಿಹರದಲ್ಲಿ 1 ಸಾವಿರ, ಹರಪನಹಳ್ಳಿಯಲ್ಲಿ 5 ಸಾವಿರ, ಹೊನ್ನಾಳಿಯಲ್ಲಿ 750, ಚನ್ನಗಿರಿಯಲ್ಲಿ 4,100 ಹೆಕ್ಟೇರ್‌ ಗುರಿಯಲ್ಲಿ ಈವರೆಗೆ ಒಂದು ಕಾಳು ಬಿತ್ತನೆಯೇ ಆಗಿಲ್ಲ.

ಬೆಳೆವಾರು ಲೆಕ್ಕಾಚಾರ: ಮೆಕ್ಕೆಜೋಳ, ಜೋಳ, ರಾಗಿ, ಭತ್ತ ಒಳಗೊಂಡಂತೆ 2,45,211 ಹೆಕ್ಟೇರ್‌ ಪ್ರದೇಶದಲ್ಲಿ ಏಕದಳ ಬೆಳೆಗಳ ಗುರಿ ಹೊಂದಲಾಗಿದೆ. ಈವರೆಗೆ ಜಿಲ್ಲೆಯಲ್ಲಿ 35,435 ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿದೆ. ತೊಗರಿ, ಕಡಲೆ, ಹುರುಳಿ ಒಳಗೊಂಡಂತೆ 21,860 ಹೆಕ್ಟೇರ್‌ನಲ್ಲಿ ದ್ವಿದಳ ಧಾನ್ಯ ಬೆಳೆಯುವ ಗುರಿಯಲ್ಲಿ 2,137 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಮುಗಿದಿದೆ. 23,099 ಹೆಕ್ಟೇರ್‌ ಪ್ರದೇಶದಲ್ಲಿ ಎಣ್ಣೆಕಾಳುಗಳ ಬಿತ್ತನೆ ಗುರಿಗೆ 3,149 ಹೆಕ್ಟೇರ್‌ ಹಾಗೂ 32,672 ಹೆಕ್ಟೇರ್‌ ಪ್ರದೇಶದಲ್ಲಿ ಹೊಂದಿದ್ದ ವಾಣಿಜ್ಯ ಬೆಳೆಗಳ ಗುರಿಯಲ್ಲಿ 1,547 ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿದೆ.

ಶೇ. 53 ಮಳೆ ಜಾಸ್ತಿ: ಪೂರ್ವ ಮುಂಗಾರು ಹಾಗೂ ಮುಂಗಾರು ಒಳಗೊಂಡಂತೆ ಜಿಲ್ಲೆಯಲ್ಲಿ ಶೇ. 53 ರಷ್ಟು ಮಳೆ ಪ್ರಮಾಣ ಜಾಸ್ತಿಯಾಗಿದೆ. ಜ. 1 ರಿಂದ ಜೂ. 11ರ ವರೆಗೆ 147 ಮಿಲಿ ಮೀಟರ್‌ಗೆ 233 ಮಿಲಿ ಮೀಟರ್‌ ಮಳೆಯಾಗಿದೆ. ಏಪ್ರಿಲ್‌ನಲ್ಲಿ 36 ಮಿಲಿ ಮೀಟರ್‌ಗೆ 27 ಮಿಲಿ ಮೀಟರ್‌, ಮೇ ತಿಂಗಳಲ್ಲಿ 75 ಮಿಲಿ ಮೀಟರ್‌ಗೆ 127
ಮಿಲಿ ಮೀಟರ್‌, ಜೂನ್‌ ಮಾಹೆಯಲ್ಲಿ 30 ಮಿಲಿ ಮೀಟರ್‌ಗೆ ಈವರೆಗೆ 50 ಮಿಲಿ ಮೀಟರ್‌ ಮಳೆಯಾಗಿದೆ. ಪೂರ್ವ
ಮುಂಗಾರಿನಲ್ಲಿ 117 ಮಿಲಿ ಮೀಟರ್‌ಗೆ 183 ಮಿಲಿ ಮೀಟರ್‌ ಮಳೆಯಾಗಿದೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.