![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಶ್ರೀ ಗುರುಕೊಟ್ಟೂರೇಶ್ವರ ಜಾತ್ರೆ: 18ರಿಂದ ಪಾದಯಾತ್ರೆ ಆರಂಭ
Team Udayavani, Feb 14, 2017, 1:16 PM IST
![dvg7.jpg](https://www.udayavani.com/wp-content/uploads/2017/02/14/dvg7.jpg)
ದಾವಣಗೆರೆ: ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕು ಕೊಟ್ಟೂರು ಗ್ರಾಮದ ಶ್ರೀ ಗುರುಬಸವರಾಜೇಂದ್ರ ಸ್ವಾಮಿ ರಥೋತ್ಸವದಲ್ಲಿ ಪಾಲ್ಗೊಳ್ಳಲು ಫೆ. 18ರಿಂದ ಪಾದಯಾತ್ರೆ ಆರಂಭಗೊಳ್ಳಲಿದೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕೊಟ್ಟೂರು ಶ್ರೀ ಗುರುಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್ನ ಅಧ್ಯಕ್ಷ ಕಣಕುಪ್ಪಿ ಮುರುಗೇಶಪ್ಪ, 18ರ ಸಂಜೆ 6 ಗಂಟೆಗೆ ದೊಡ್ಡಪೇಟೆ ವಿರಕ್ತ ಮಠದಿಂದ 38ನೇ ವರ್ಷದ ಪಾದಯಾತ್ರೆಗೆ ಬೀಳ್ಕೊಡಲಾಗುವುದು.
ಹೆಬ್ಟಾಳಿನ ಶ್ರೀಮಹಾಂತರುದ್ರ ಸ್ವಾಮೀಜಿ, ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ, ಇತರೆ ಮಠಾಧೀಶರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕರಾದ ಶಾಮನೂರು ಶಿವಶಂಕರಪ್ಪ, ಎಚ್.ಎಸ್. ಶಿವಶಂಕರ್, ಎಚ್.ಪಿ. ರಾಜೇಶ್, ಸಂಸದ ಜಿ.ಎಂ. ಸಿದ್ದೇಶ್ವರ್, ಕೈಗಾರಿಕೋದ್ಯಮಿ ಅಥಣಿ ಎಸ್. ವೀರಣ್ಣ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ದಾವಣಗೆರೆಯಿಂದ ಮಾಗಾನಹಳ್ಳಿ ಕೋಡಿ ಕ್ಯಾಂಪ್ನ ಶ್ರೀ ಗುರುಕೊಟ್ಟೂರೇಶ್ವರ ನಗರ, ಜಂಬುಲಿಂಗನಹಳ್ಳಿ, ಕಂಚಿಕೆರೆ, ಕ್ಯಾರಕಟ್ಟೆ ಕಾವಲಹಳ್ಳಿ ತಿರುವು, ತೌಡೂರು, ಅರಸಿಕೆರೆ ಮಾರ್ಗವಾಗಿ ಪಾದಯಾತ್ರೆ ತೆರಳಿದೆ. 19ರ ಸಂಜೆ 6 ಗಂಟೆಗೆ ಅರಸಿಕೆರೆಯ ಕೋಲಶಾಂತೇಶ್ವರ ವಿರಕ್ತ ಮಠದಲ್ಲಿ ಔಷದೋಪಚಾರ ನಡೆಯಲಿದೆ.
ಶ್ರೀ ಶಾಂತಲಿಂಗೇಶ್ವರ ದೇಶಿಕೇಂದ್ರ ಸ್ವಾಮೀಜಿ, ಆವರಗೊಳ್ಳ ಪುರವರ್ಗ ಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಕೋಣಂದೂರು ಪತಿ ಪಂಡಿತಾರಾಧ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಅವರು ತಿಳಿಸಿದರು. ಅರಸಿಕೆರೆಯಿಂದ ಕಡಬಗೆರೆ, ಸಾಸ್ವಿಹಳ್ಳಿ, ಮತ್ತಿಹಳ್ಳಿ, ಕನ್ನಕಟ್ಟೆ, ಅಯ್ಯನಹಳ್ಳಿ ಮೂಲಕ ಕೊಟ್ಟೂರೇಶ್ವರ ಗಚ್ಚಿನ ಮಠಕ್ಕೆ ಯಾತ್ರೆ 20ರಂದು ತಲುಪಲಿದೆ.
ಮಾರ್ಗ ಮಧ್ಯೆ ಎಲ್ಲ ಕಡೆಗಳಲ್ಲಿ ಊಟ, ತಿಂಡಿ, ಉಪಾಹಾರ, ನೀರು, ತಂಪು ಪಾನೀಯ, ಔಷಧ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಒಟ್ಟು 25 ಸಾವಿರ ಜನರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಲಂಡನ್ ನ ಇಬ್ಬರು ಸಾಫ್ಟ್ವೇರ್ ಇಂಜಿನಿಯರ್ ಗಳು ಸಹ ಯಾತ್ರೆಯಲ್ಲಿ ತೆರಳಲಿದ್ದಾರೆ.
18ರ ಸಂಜೆಯಿಂದಲೇ ಯಾತ್ರೆ ಆರಂಭವಾಗುತ್ತದೆ. ಮೊದಲ ದಿನ ಮಾಗಾನಹಳ್ಳಿ ಬಳಿಯ ನಮ್ಮ ಸಮಿತಿಯ ದೇವಸ್ಥಾನ, ಸಮುದಾಯ ಭವನದಲ್ಲಿ ಯಾತ್ರಾರ್ಥಿಗಳು ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ ಅವರು ತಿಳಿಸಿದರು. ಟ್ರಸ್ಟ್ನ ಸಹ ಕಾರ್ಯದರ್ಶಿ ಬಿ. ಚಿದಾನಂದ, ಖಜಾಂಚಿ ಮಲ್ಲಬಾಗಿ ಗುರುಬಸವರಾಜ, ಸಿ.ಆರ್. ಜಯರಾಜ್, ದೇವರಮನಿ ಶಿವಕುಮಾರ, ಎಚ್. ಆರ್. ಗಂಗಾಧರ, ಮತ್ತಿಹಳ್ಳಿ ಕೊಟ್ರೇಶ್ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ](https://www.udayavani.com/wp-content/uploads/2024/07/13-14-150x90.jpg)
Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ
![13-davangere](https://www.udayavani.com/wp-content/uploads/2024/07/13-davangere-150x90.jpg)
Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು
![drowned](https://www.udayavani.com/wp-content/uploads/2024/07/drowned-1-150x93.jpg)
Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ
![Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ](https://www.udayavani.com/wp-content/uploads/2024/07/RE-1-150x104.jpg)
Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ
![BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ](https://www.udayavani.com/wp-content/uploads/2024/07/davanagere-150x83.jpg)
BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.