ಯತ್ನಾಳ್ ರನ್ನು ಸಹಿಸಿಕೊಂಡಾಯ್ತು, ಇನ್ನು ನಿರ್ಧಾರ ಮಾಡಬೇಕಿದೆ: ಕಿಡಿಕಾರಿದ ನಿರಾಣಿ
Team Udayavani, Jan 14, 2023, 3:43 PM IST
ದಾವಣಗೆರೆ: ‘ಪಿಂಪ್ ಸಚಿವ’ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಚಿವ ಮುರುಗೇಶ ನಿರಾಣಿ ನೊಂದುಕೊಂಡ ಘಟನೆ ನಡೆಯಿತು. ಯತ್ನಾಳ್ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ನಿರಾಣಿ ಭಾವುಕರಾದರು.
ಬಿಜೆಪಿ ಸಂಸ್ಕೃತಿ ಹೊಂದಿರುವ ಪಕ್ಷ, ನಮ್ಮ ಸಮುದಾಯವೂ ಸಂಸ್ಕೃತಿ ಹೊಂದಿದೆ. ಶಾಸಕ ಯತ್ನಾಳ ಅಸಂವಿಧಾನಿಕ ಮಾತುಗಳನ್ನು ಆಡುತ್ತಾರೆ
ಸಿದ್ದೇಶ್ವರ ಸ್ವಾಮೀಜಿ ಅವರ ಸನ್ನಿಧಿಯಲ್ಲಿ ಬೆಳೆದವರು ನಾವು. ಅವರನ್ನು 0.5 ರಷ್ಟು ನಾವು ಅನುಕರಣೆ ಮಾಡಿದರೂ ಸಾಕು ಎಂದರು.
ಇದನ್ನೂ ಓದಿ:ಬಿಜೆಪಿ ನಾಯಕಿಯ ದೂರು; ಉರ್ಫಿ ಜಾವೇದ್ ಹೇಳಿಕೆ ದಾಖಲಿಸಿಕೊಂಡ ಪೊಲೀಸರು
ದೀಪ ಹಾರುವಾಗ ಗಾಳಿ ಜೋರಾಗಿ ಇರತ್ತಂತೆ, ಯತ್ನಾಳ ಪರಿಸ್ಥಿತಿ ಕೂಡ ಹಾಗೆಯಾಗಿದೆ. ಯತ್ನಾಳ್ ಗೆ ಪಕ್ಷದಲ್ಲಿ ಇರುವುದು ಇಷ್ಟವಿಲ್ಲದೇ ಇದ್ದರೆ ಬಿಟ್ಟು ಹೋಗಲಿ. ಯತ್ನಾಳ್ ಎಲ್ಲರ ಬಗ್ಗೆ ಹಗರುವಾಗಿ ಮಾತನಾಡುತ್ತಲೇ ಇದ್ದಾರೆ. ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಬೊಮ್ಮಾಯಿ, ಶೆಟ್ಟರ್, ಸೋಮಣ್ಣ ಹೀಗೆ ಎಲ್ಲರ ಮೇಲೂ ಮಾತಾಡಿದ್ದಾರೆ. ನಂತರ ನ್ಯಾಯಾಲಯಕ್ಕೆ ಹೋಗಿ ಕೈಕಾಲು ಹಿಡಿದು ಬಂದಿದ್ದಾರೆ. ಜಯ ಮೃತ್ಯುಂಜಯ ಸ್ವಾಮೀಜಿ, ಯತ್ನಾಳ್ ಅವರ ವಿರುದ್ಧ ಹೋರಾಟ ಮಾಡೋದು ಬಿಟ್ಟು ನಮ್ಮ ವಿರುದ್ಧ ಮಾಡುತ್ತಿದ್ದಾರೆ ಎಂದು ನಿರಾಣಿ ಬೇಸರ ವ್ಯಕ್ತಪಡಿಸಿದ್ದಾರೆ.
ನಾನಾಗಿಯೇ ಯತ್ನಾಳ್ ವಿರುದ್ದ ವಾಗ್ದಾಳಿ ಮಾಡಿಲ್ಲ. ಅವರು ನೀಡಿದ ಹೇಳಿಕೆ ಉತ್ತರ ಕೊಟ್ಟಿದ್ದೇನೆ. ಅವರನ್ನು ಸಹಿಸಿಕೊಂಡಿದ್ದಾಗಿದೆ. ಈಗ ನಿರ್ಧಾರ ತೆಗೆದುಕೊಳ್ಳುತ್ತಿದ್ದೇವೆ ಎಂದರು.
ಜೆಡಿಎಸ್ ಗೆ ಹೋಗಿ ಮುಸ್ಲಿಂ ಟೋಪಿ ಹಾಕಿದ್ದು ಎಲ್ಲರಿಗೂ ಗೊತ್ತಿಗೆ. ಡೋಂಗಿ ರಾಜಕಾರಣ ಮಾಡುತ್ತಿದ್ದಾರೆ, ನಾವೂ ಘಟಪ್ರಭ ಮಲಪ್ರಭಾ ನೀರು ಕುಡಿದೇ ಬೆಳದಿದ್ದೇವೆ. ನಮಗೂ ಮಾತನಾಡುವುದಕ್ಕೆ ಬರುತ್ತದೆ, ಸುಮ್ಮನೆ ಇದ್ದೇವೆಂದರೆ ದೌರ್ಬಲ್ಯ ಅಲ್ಲ. ಯತ್ನಾಳ್ ಏನೂ ಸತ್ಯ ಹರಿಶ್ಚಂದ್ರ ಅಲ್ಲ. ದೊಡ್ಡ ಸಮಾಜದಲ್ಲಿ ಹುಟ್ಟಿದ್ದೀರಿ ಗೌರವದಿಂದ ಮಾತಾಡಿ ಎಂದು ಮುರುಗೇಶ್ ನಿರಾಣಿ ಗುಡುಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ