ನನ್ನ ಹೋರಾಟ ರಾಜ್ಯದಲ್ಲೂಮುಂದುವರಿಯಲಿದೆ: ಚೇತನ್‌


Team Udayavani, Apr 30, 2018, 10:04 AM IST

chethan-kumar-10424-14-11-2016-04-58-48.jpg

ದಾವಣಗೆರೆ: ನಾನು 23 ವರ್ಷದವರೆಗೆ ಅಮೆರಿಕದಲ್ಲಿ ನೆಲೆಸಿದವನು. ಕಾಯಕ ತತ್ವ ಹಾಗೂ ಶೋಷಿತರ ಪರ ದನಿ ಎತ್ತುವುದಕ್ಕೆ ಅಲ್ಲೂ ಅವಕಾಶ ಇಲ್ಲ. ನಾನು ಈ ಕಾರ್ಯ ಮಾಡಿದ್ದಕ್ಕೆ ನನ್ನನ್ನು ಅಮೆರಿಕ ವಿರೋಧಿ ಎಂದು ಪಟ್ಟ ಕಟ್ಟಿ ಓಡಿಸಿದರು ಎಂದು ಚಲನಚಿತ್ರ ನಟ, ಆ ದಿನಗಳು ಖ್ಯಾತಿಯ ಚೇತನ್‌ ಹೇಳಿದರು.

ಭಾನುವಾರ ವರದಿಗಾರರ ಕೂಟದಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ನಾಡು ಕರ್ನಾಟಕಕ್ಕೆ ಬಂದು ಮತ್ತೆ ಈ ಹೋರಾಟಕ್ಕೆ ಅಣಿಯಾಗಿದ್ದೇನೆ. ಇಲ್ಲಿಯ ಜನ ನನ್ನನ್ನು ಒಪ್ಪುತ್ತಾರೆ. ನನ್ನ ವಿಷಯಗಳಿಗೆ ಮನ್ನಣೆ ನೀಡುತ್ತಾರೆ ಎಂಬ ಕಾರಣಕ್ಕೆ ಇಲ್ಲೂ ಸಹ ಅದೇ ಹೋರಾಟ ಆರಂಭಿಸಿದ್ದೇನೆ. ಈಗಾಗಲೇ ಕೆಲ ವಿಷಯಗಳಲ್ಲಿ ನಾವು ಜಯ ಸಾಧಿಸಿದ್ದೇವೆ ಎಂದರು.

ಬಿಜೆಪಿಗರು ನನ್ನನ್ನು ನಕ್ಸಲೈಟ್‌ ತರಹ ನೋಡುತ್ತಿದ್ದಾರೆ. ಕೆಲ ಹೋರಾಟಗಳಲ್ಲಿ ಭಾಗಿಯಾಗಿದ್ದಕ್ಕೆ ನಕ್ಸ್‌ಲೈಟ್‌ ಪಟ್ಟ ಕಟ್ಟಿದ್ದಾರೆ. ಆದರೆ ನಾನು ಹಿಂದೇಟು ಹಾಕಲ್ಲ. ಮುಂದೆ ರಾಜಕೀಯ ಪ್ರವೇಶ ಕುರಿತು ಸಹ ಚಿಂತಿಸುತ್ತಿದ್ದೇನೆ ಎಂದರು.

ಲಿಂಗಾಯತಕ್ಕೆ ಸ್ವತಂತ್ರ ಧರ್ಮ ಸ್ಥಾನಮಾನ ನೀಡುವುದು ಅನಿವಾರ್ಯ. ಈ ಹಿಂದೆಯೇ ಅಂದರೆ 1871ರಲ್ಲಿ ಇಂಗ್ಲಿಷರ ಆಳ್ವಿಕೆ ಕಾಲದಲ್ಲಿ ಲಿಂಗಾಯತಕ್ಕೆ ಸ್ವತಂತ್ರ ಧರ್ಮ ಸ್ಥಾನಮಾನ ಇತ್ತು. ಇದನ್ನೇ ಆಧರಿಸಿ, ಈ ಹಿಂದೆ ವೀರಶೈವ ಲಿಂಗಾಯತ ಹೆಸರಲ್ಲಿ ಸ್ವತಂತ್ರ ಧರ್ಮ ಸ್ಥಾನಮಾನ ಪಡೆಯುವಯತ್ನ ನಡೆಯಿತು. ಆದರೆ, ಶೈವ ಎಂಬ ಪದ ಬಂದ ಹಿನ್ನೆಲೆಯಲ್ಲಿ ಸ್ವತಂತ್ರ ಧರ್ಮ ಸ್ಥಾನಮಾನ ಸಿಗಲಿಲ್ಲ. ಈ ಬಾರಿ ಬಸವಣ್ಣನವರ ಶರಣ ತತ್ವ ಆಧಾರದಡಿ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮ ಸ್ಥಾನಮಾನ ದೊರಕಿಸುವ ಯತ್ನ ನಡೆದಿದೆ. ಇದಕ್ಕೆ ಕೇಂದ್ರ ಸರ್ಕಾರ ಬೆಂಬಲಿಸಬೇಕು. ನಾಗಮೋಹನ್‌ ದಾಸ್‌ ವರದಿ ಅಂಗೀಕರಿಸಿ, ಸ್ವತಂತ್ರ ಧರ್ಮ ಸ್ಥಾನಮಾನ ನೀಡಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ನಾವು ದೇವದಾಸಿ ಪದ್ಧತಿ ವಿರುದ್ಧ ಹೋರಾಟ ನಡೆಸಲು ಅಣಿಯಾಗಿದ್ದೇವೆ. ಸರ್ಕಾರ ಈಗಾಗಲೇ ಈ ಪದ್ಧತಿ ರದ್ದು ಮಾಡಿದ್ದರೂ ಸಹ ಆಚರಣೆಯಲ್ಲಿದೆ. ಇದರ ವಿರುದ್ಧ ದೊಡ್ಡಮಟ್ಟದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೇವೆ. ಇದೇ ಕಾರಣಕ್ಕೆ ನಾನು ಶನಿವಾರ ಮುತ್ತುಕಟ್ಟು ಆಚರಣೆ ಮಾಡಲಾಗುವ ಸ್ಥಳ ಉಚ್ಚಂಗಿದುರ್ಗಕ್ಕೆ ಹೋಗಿ ಬಂದೆ ಎಂದು ತಿಳಿಸಿದರು.

ವರದಿಗಾರರ ಕೂಟದ ಪ್ರಧಾನ ಕಾರ್ಯದರ್ಶಿ ನಾಗರಾಜ ಬಡದಾಳ್‌, ಖಜಾಂಚಿ ಎ.ಎಲ್‌. ತಾರಾನಾಥ, ಹಿರಿಯ ಪತ್ರಕರ್ತರಾದ ಬಕ್ಕೇಶ ನಾಗನೂರು, ಸುಭಾಷ್‌ ಬಣಗಾರ್‌ ಸೇರಿದಂತೆ ವಿವಿಧ ಪತ್ರಿಕೆ, ಟಿವಿ ಮಾಧ್ಯಮದ ಪ್ರತಿನಿಧಿಗಳು ಸಂವಾದದಲ್ಲಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.