ನನ್ನ ಪರಿವಾರ-ಬಿಜೆಪಿ ಪರಿವಾರ ಅಭಿಯಾನ ಇಂದಿನಿಂದ
Team Udayavani, Feb 17, 2019, 7:18 AM IST
ದಾವಣಗೆರೆ: ಭಾರತೀಯ ಜನತಾ ಪಕ್ಷ ರಾಷ್ಟ್ರವ್ಯಾಪಿ ಹಮ್ಮಿಕೊಂಡಿರುವ ನನ್ನ ಪರಿವಾರ ಬಿಜೆಪಿ ಪರಿವಾರ ಎಂಬ ಘೋಷವಾಕ್ಯದಡಿ ಮುಖಂಡರ ಮನೆಯ ಮೇಲೆ ಪಕ್ಷದ ಬಾವುಟ ಹಾರಿಸುವ ಅಭಿಯಾನ ಜಿಲ್ಲೆಯಾದ್ಯಂತ ಫೆ. 17ರಿಂದ ಆರಂಭಗೊಳ್ಳಲಿದೆ.
ಶನಿವಾರ, ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪಕ್ಷದ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಭಾನುವಾರ ಬೆಳಗ್ಗೆ 8-30ಕ್ಕೆ ತಮ್ಮ ನಿವಾಸದ ಮೇಲೆ ಬಾವುಟ ಹಾರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಈ ಅಭಿಯಾನ ಮಾ. 2ರವರೆಗೆ ನಡೆಯಲಿದೆ ಎಂದರು.
ಪಕ್ಷದ ಶಾಸಕರು, ಮಾಜಿ ಶಾಸಕರು, ಮಂಡಲ ಹಾಗೂ ಮಹಾಶಕ್ತಿ ಕೇಂದ್ರ, ಬೂತ್ ಮಟ್ಟದ ಅಧ್ಯಕ್ಷರ ನಿವಾಸದ ಮೇಲೆ ಬಾವುಟ ಹಾರಿಸಲಾಗುವುದು. ಜಿಲ್ಲೆಯಲ್ಲಿ 1956 ಬೂತ್ಮಟ್ಟದ ಹಾಗೂ 348 ಮಂಡಲ ಮಹಾಶಕ್ತಿ ಕೇಂದ್ರಗಳಿವೆ. ಒಟ್ಟಾರೆ 3000 ಮುಖಂಡರ ನಿವಾಸಗಳ ಮೇಲೆ ಪಕ್ಷದ ಬಾವುಟ ಹಾರಾಡಲಿದೆ ಎಂದು ಹೇಳಿದರು.
ಅದೇ ರೀತಿ ಫೆ. 26ರಿಂದ ಕಮಲ್ ಉಜ್ವಲ್ ಜ್ಯೋತಿ ಕಾರ್ಯಕ್ರಮ ಎಲ್ಲಾ ಮಂಡಲಗಳಲ್ಲಿ ಆರಂಭವಾಗಲಿದೆ. ಇನ್ನು ಕಮಲ್ ಸಂದೇಶ್ ಬೈಕ್ ರ್ಯಾಲಿ ಲೋಕಸಭಾ ಚುನಾವಣೆಯ ಮತದಾನದವರೆಗೂ ನಡೆಯಲಿದೆ. ಪ್ರತಿ ಮಂಡಲದಲ್ಲಿ ಮೂರು ಬೈಕ್ಗಳಲ್ಲಿ ಮತದಾನದವರೆಗೂ
ಕೇಂದ್ರದ ನರೇಂದ್ರ ಮೋದಿ ಸರ್ಕಾರ ಈವರೆಗೆ ಜಾರಿಗೊಳಿಸಿದ ಯೋಜನೆಗಳು ಫಲಾನುಭವಿಗಳಿಗೆ ತಲುಪದಿದ್ದಲ್ಲಿ ಅವುಗಳನ್ನು ತಲುಪಿಸಲು ಪ್ರತಿ ಬೂತ್ನ ಅಧ್ಯಕ್ಷರು ಕಾರ್ಯೋನ್ಮುಖರಾಗಲಿದ್ದಾರೆ ಎಂದು ಹೇಳಿದರು.
ಈವರೆಗೂ ಉಜ್ವಲ ಯೋಜನೆಯಡಿ 95 ಸಾವಿರ ಫಲಾನುಭವಿಗಳಿಗೆ ಗ್ಯಾಸ್ ಸಿಲೆಂಡರ್ ವಿತರಿಸಲಾಗಿದೆ. ಮುದ್ರಾ ಯೋಜನೆಯಡಿ 62 ಸಾವಿರ ಮಂದಿಗೆ ಸಾಲ ಸೌಲಭ್ಯ ಹಾಗೂ ಮಾತೃ ವಂದನಾ ಯೋಜನೆಯಡಿ 24 ಸಾವಿರ ಫಲಾನುಭವಿಗಳಿಗೆ ಅನುಕೂಲ ಕಲ್ಪಿಸಲಾಗಿದೆ
ಎಂದು ಮಾಹಿತಿ ನೀಡಿದರು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೂಚನೆಯಂತೆ ಈಗಾಗಲೇ ಕಳೆದ 11ರಿಂದ ಸಮರ್ಪಣಾ ದಿವಸ್ ಆರಂಭವಾಗಿದ್ದು, ಆನ್ಲೈನ್ ಮೂಲಕ 5ರಿಂದ 1000 ರೂ. ವರೆಗೆ ದೇಣಿಗೆ ಪಾವತಿಸಬಹುದು ಎಂದು ಅವರು ಹೇಳಿದರು.
ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್. ಎನ್.ಶಿವಕುಮಾರ್, ಎನ್.ರಾಜಶೇಖರ್, ಖಜಾಂಚಿ ಹೇಮಂತಕುಮಾರ್, ದಕ್ಷಿಣ ಮಂಡಲದ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರರ್, ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ