ಎನ್.ಕೊಟ್ರೇಶ್ ಜೆಡಿಎಸ್ ಹುರಿಯಾಳು
Team Udayavani, Apr 24, 2018, 4:33 PM IST
ಹರಪನಹಳ್ಳಿ: ಕಳೆದ ಹತ್ತು ವರ್ಷದಿಂದ ಹರಪನಹಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದ ನನಗೆ ಪಕ್ಷದವರು ಮೋಸ ಮಾಡಿದರು. ಹಾಗಾಗಿ ರೈತಪರವಾದ ಜಾತ್ಯತೀತ ಜನತಾದಳಕ್ಕೆ ನಾನು ಸೇರ್ಪಡೆಗೊಂಡಿದ್ದೇನೆ ಎಂದು ಸ್ಥಳೀಯ ಮುಖಂಡ ಅರಸೀಕೆರೆ ಎನ್.ಕೊಟ್ರೇಶ್ ತಿಳಿಸಿದರು.
ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಷ್ಠಾವಂತ ಕಾರ್ಯಕರ್ತನಾಗಿ ಬಿಜೆಪಿಗೆ ತನುಮನ ಅರ್ಪಿಸಿದ್ದೆ. ತಾಲೂಕಿನ ಜನರ ಆಶಯದಂತೆ ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂದು ಬಿಜೆಪಿ ವರಿಷ್ಠರಲ್ಲಿ ಮನವಿ ಮಾಡಿದ್ದೆವು. ಕೊನೆ ಕ್ಷಣದವರಿಗೂ ನೀವೇ ಕ್ಷೇತ್ರದ ಅಭ್ಯರ್ಥಿ ಎಂದು ಹೇಳುತ್ತಾ ಪಕ್ಷ ಸಂಘಟನೆಗೆ ನೀವು ಒತ್ತು ನೀಡಿ ಎಂದು ನಾನು ಹಾಗೂ ನನ್ನ ನಂಬಿದ ಕಾರ್ಯಕರ್ತರಿಗೆ ದ್ರೋಹ ಬಗೆದರು ಎಂದರು.
ಏ. 24ರಂದು ಪಟ್ಟಣದ ಕೋಟೆ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ತೆರಳಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದೇನೆ. ಹರಿಹರ ಶಾಸಕ ಎಚ್.ಎಸ್. ಶಿವಶಂಕರ, ಜೆಡಿಎಸ್ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.
ಜೆಡಿಎಸ್ ಮುಖಂಡ ಪಾಟೀಲ ಬೆಟ್ಟನಗೌಡ ಮಾತನಾಡಿ, ಜೆಡಿಎಸ್ ಪಕ್ಷದ ದೃಷ್ಟಿಯಿಂದ ತಾಲೂಕಿಗೆ ಇಂದು ಸುದಿನ. ತಾಲೂಕಿಗೆ ಒಳ್ಳೆಯ ಆಡಳಿತ ಹಾಗೂ ಸ್ಥಳೀಯರಿಗೆ ಆದ್ಯತೆ ನೀಡುವ ಉದ್ದೇಶ ಪಕ್ಷದ್ದಾಗಿದೆ. ಜೆಡಿಎಸ್ ಅಭ್ಯರ್ಥಿ ಆಗಿರುವ ರೈತ ನಾಯಕ ಎನ್.ಕೊಟ್ರೇಶ್ ಅವರನ್ನು ಗೆಲ್ಲಿಸುವ ಜವಾಬ್ದಾರಿ ಪಕ್ಷದ ಮುಖಂಡರು, ಕಾರ್ಯಕರ್ತರ ಮೇಲಿದೆ ಎಂದರು.
ಜಿಪಂ ಸದಸ್ಯ ಡಾ| ಮಂಜುನಾಥ್ ಉತ್ತಂಗಿ, ಮುಖಂಡರಾದ ಸಾಸ್ವಿಹಳ್ಳಿ ಚನ್ನಬಸವನಗೌಡ, ನಿಚ್ಚವನಹಳ್ಳಿ ಪರಶುರಾಮಪ್ಪ, ಶಿಕಾರಿ ಬಾಲಪ್ಪ, ಶಿರಹಟ್ಟಿ ದಂಡ್ಯೆಪ್ಪ, ವೆಂಕಟೇಶರೆಡ್ಡಿ, ಮೈದೂರು ರಾಮಪ್ಪ, ವಕೀಲ ಜಗದಪ್ಪ, ಕಂಚಿಕೆರೆ ಕೆಂಚಪ್ಪ, ನೇಮ್ಯನಾಯ್ಕ, ಅರಸೀಕೆರೆ ಅಜೇಯ, ತೆಲಗಿ ಮಂಜುನಾಥ, ಡಂಕಿ ಇಮ್ರಾನ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ