ಕಾಗಿನಲೆ ಸ್ವಾಮೀಜಿ ಆರ್ಶಿವಾದ ಪಡೆದ ಕೇಂದ್ರ ಸಚಿವ ನಾರಾಯಣಸ್ವಾಮಿ: ಎಸ್ ಟಿ ಮೀಸಲಾತಿ ಚರ್ಚೆ
Team Udayavani, Aug 19, 2021, 2:57 PM IST
ದಾವಣಗೆರೆ: ಕುರುಬ ಸಮಾಜವನ್ನು ಎಸ್.ಟಿ ಮೀಸಲು ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಹಕರಿಸುವಂತೆ ಕಾಗಿನಲೆ ನಿರಂಜನಾನಂದ ಸ್ವಾಮೀಜಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿಗೆ ಮನವಿ ಮಾಡಿದ್ದಾರೆ.
ಕೇಂದ್ರ ಸಚಿವರಾದ ನಂತರ ಎ ನಾರಾಯಣ ಸ್ವಾಮಿ ಎರಡು ದಿನಗಳ ಕಾಲ ಜನಾರ್ಶಿವಾದ ಯಾತ್ರೆಯನ್ನು ದಾವಣಗೆರೆ ಹಾವೇರಿಯಲ್ಲಿ ಜಿಲ್ಲೆಗಳಲ್ಲಿ ಹಮ್ಮಿಕೊಂಡಿದ್ದರು. ಇಂದು ಹಾವೇರಿ ಜಿಲ್ಲೆಗೆ ಹೋಗುವಾಗ ದಾರಿ ಮಧ್ಯೆ ಹರಿಹರ ತಾಲೂಕಿನ ಬೆಳ್ಳೂಡಿ ಕನಕ ಶಾಖಾ ಮಠಕ್ಕೆ ಭೇಟಿ ನೀಡಿ ಕಾಗಿನಲೆ ಪೀಠದ ನಿರಂಜನಾನಂದಪುರಿ ಮಹಾಸ್ವಾಮಿಗಳ ಆರ್ಶಿವಾದ ಪಡೆದರು.
ಈ ಸಂಧರ್ಭದಲ್ಲಿ ಸ್ವಾಮೀಜಿ ಈ ಹಿಂದೆ ರಾಜ್ಯದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದಾಗ ನಾರಾಯಣ ಸ್ವಾಮಿ ಮಠಗಳು ಮತ್ತು ಸಾರ್ವಜನಿಕರಿಗೆ ಸಾಕಷ್ಟು ಕೆಲಸ ಮಾಡಿದ್ದಾರೆ. ಅದೇ ರೀತಿ ಕೇಂದ್ರ ಸರ್ಕಾರದ ಮಂತ್ರಿಗಳಾಗಿ ಒಳ್ಳೆ ಕೆಲಸ ಮಾಡಿ ಹೆಸರು ಗಳಿಸಿ ಎಂದು ಸ್ವಾಮೀಜಿ ಶುಭ ಹಾರೈಸಿದರು.
ಇದನ್ನೂ ಓದಿ:2859 ಆರೋಗ್ಯ ಉಪಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು 478 ಕೋಟಿ ರೂ: ಸಂಪುಟ ಸಭೆ ಅನುಮೋದನೆ
ಇದೇ ವೇಳೆ ಸ್ವಾಮೀಜಿ ಕುರುಬ ಸಮಾಜವನ್ನು ಎಸ್.ಟಿ ಮೀಸಲಾತಿ ಪಟ್ಟಿ ಸೇರಿಸುವ ಸಲುವಾಗಿ ನಿಮ್ಮ ಬಳಿ ನಾವು ಬರುತ್ತೇವೆ. ಆಗ ನೀವು ಕೇಂದ್ರ ಸರ್ಕಾರದ ಮಟ್ಟದಲ್ಲಿ ನಮಗೆ ಸಹಕರಿಸಬೇಕೆಂದು ಮನವಿ ಮಾಡಿದರು. ಇದಕ್ಕೆ ಕೇಂದ್ರ ನಾರಾಯಣಸ್ವಾಮಿ ಕೂಡ ಸಹಮತ ವ್ಯಕ್ತಪಡಿಸಿದರು. ಇದೇ ಅನೇಕ ವಿಷಯಗಳ ಕುರಿತು ಕೇಂದ್ರ ಸಚಿವರು ಸ್ವಾಮೀಜಿಯವರೊಂದಿಗೆ ಚರ್ಚೆ ನಡೆಸಿದರು.
ಈ ಸಂಧರ್ಭದಲ್ಲಿ ಸಂಸದ ಜಿ ಎಂ ಸಿದ್ದೇಶ್. ಜಿಲ್ಲಾ ಬಿಜೆಪಿ ಅಧ್ಯಕ್ಷ ಹನಗವಾಡಿ ವೀರೇಶ್, ಮಾಜಿ ವಿಧಾನ ಪರಿಷತ್ ಸದಸ್ಯ ಡಾ. ಶಿವಯೋಗಿ ಸ್ವಾಮಿ, ಬಿಜೆಪಿ ಮುಖಂಡರಾದ ಬಿ ಎಂ ಸತೀಶ್, ಹೆಚ್ ಎನ್ ಶಿವಕುಮಾರ, ಹೇಮಾಂತ್ ಕುಮಾರ್, ಎಲ್ ಕೆ ಕಲ್ಲೇಶ್, ಜಗದೀಶ್, ಅಡಾಣಿ ಸಿದ್ದಪ್ಪ, ಹದಡಿ ಬಸವರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು