ಡಿ.14 ರಂದು ರಾಷ್ಟ್ರೀಯ ಲೋಕ್‌ ಅದಾಲತ್‌: ನ್ಯಾ| ಕುಲಕರ್ಣಿ


Team Udayavani, Nov 26, 2019, 11:28 AM IST

dg-tdy-3

ದಾವಣಗೆರೆ: ರಾಷ್ಟ್ರೀಯ ಲೋಕ್‌ ಅದಾಲತ್‌ ಡಿ.14 ರಂದು ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಅಂಬಾದಾಸ್‌ ಕುಲಕರ್ಣಿ ಜಿ ತಿಳಿಸಿದ್ದಾರೆ.

ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ರಾಜೀಯಾಗಬಲ್ಲ ಅಪರಾಧ ಪ್ರಕರಣ, ಚೆಕ್‌ ಬೌನ್ಸ್‌, ಮೋಟಾರ್‌ ವಾಹನ ಅಪಘಾತ ಸಂಬಂಧವಾಗಿ ಪರಿಹಾರ, ಉದ್ಯೋಗದಲ್ಲಿ ಪುನರ್‌ ಸ್ಥಾಪಿಸಲ್ಪಡುವ ಪ್ರಕರಣ, ಕಾರ್ಮಿಕ ವಿವಾದ, ಕೌಟುಂಬಿಕ ನ್ಯಾಯಾಲಯದ ಪ್ರಕರಣ, ಬ್ಯಾಂಕ್‌ ಹಣ ವಸೂಲಾತಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಂಡು ಶೀಘ್ರ ಪರಿಹಾರ ಪಡೆಯಲು ಲೋಕ ಅದಾಲತ್‌ ಉತ್ತಮ ಅವಕಾಶ. ಜಿಲ್ಲೆಯ ನಾಗರಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಕೌಟುಂಬಿಕ ಪ್ರಕರಣ ಸೇರಿದಂತೆ ಯಾವುದೇ ರಾಜೀ ಪ್ರಕರಣಗಳಲ್ಲಿ ಕಕ್ಷಿದಾರನ ವಿರುದ್ಧ ತೀರ್ಪು ನೀಡಲಾಗುವುದಿಲ್ಲ. ಕೊಲೆ, ದರೋಡೆ, ಫೋಕ್ಸೋ, ಅಟ್ರಾಸಿಟಿ ಸೇರಿದಂತೆ ಘೋರ ಕ್ರಿಮಿನಲ್‌ ಪ್ರಕರಣಗಳು ಅದಾಲತ್‌ ವ್ಯಾಪ್ತಿಗೆ ಬರುವುದಿಲ್ಲ. ರಾಜೀ ಸಂಧಾನ ಮೂಲಕ ಅರೆ ಕ್ರಿಮಿನಲ್‌ ಮತ್ತು ಅರೆ ಸಿವಿಲ್‌ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು. ರಾಜೀ ಸಂಧಾನದಿಂದ ಕಕ್ಷಿದಾರರು ಹಾಗೂ ನ್ಯಾಯಾಲಯದ ಸಮಯ, ಹಣ ಉಳಿತಾಯ ಆಗುತ್ತದೆ. ಕಕ್ಷಿದಾರ ನ್ಯಾಯಾಲಯದಲ್ಲಿ ದಾವೆಹೂಡುವಾಗ ಪಾವತಿಸಿದ ಪೂರ್ಣ ಶುಲ್ಕವನ್ನು ರಾಜೀ ಆದ ನಂತರ ಮರು ಪಾವತಿಸಲಾಗುವುದು ಹಾಗೂ ಇಬ್ಬರೂ ದ್ವೇಷ ಮರೆತು ಅನ್ಯೋನ್ಯವಾಗಿ ಇರುವ ಅವಕಾಶ ದೊರೆಯುತ್ತದೆ ಎಂದು ತಿಳಿಸಿದರು.

ಡಿ.14 ರಂದು ಎರಡನೇ ಶನಿವಾರವಾಗಿದ್ದು,ಬೇರೆ ಯಾವುದೇ ಕಲಾಪಗಳು ನಡೆಯದೇ ಸಂಪೂರ್ಣವಾಗಿ ಲೋಕ ಅದಾಲತ್‌ ನಡೆಯಲಿದೆ. ಜಿಲ್ಲಾ ಮಟ್ಟದಲ್ಲಿ ನ್ಯಾಯಾಧೀಶರು ಕಲಾಪ ನಡೆಸುವರು. ತಾಲೂಕು ಮಟ್ಟದಲ್ಲೂ ಅದಾಲತ್‌ ನಡೆಯಲಿದೆ. ನ್ಯಾಯಾಧೀಶರೊಂದಿಗೆ ವಕೀಲರು ಮತ್ತು ಕಕ್ಷಿದಾರರೂ ಕಲಾಪದಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದರು.

ಲೋಕ ಅದಾಲತ್‌ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಕಡಿಮೆ ಇದ್ದು, ಮಾಧ್ಯಮದ ಮೂಲಕ ಹೆಚ್ಚಿನ ಪ್ರಚಾರ ಮತ್ತು ಮಾಹಿತಿ ನೀಡುವ ಮೂಲಕ ಅರಿವನ್ನು ಹೆಚ್ಚಿಸಬೇಕು. ಇದೇ ನ. 30 ರಂದು ತಾವು ನಿವೃತ್ತಿ ಹೊಂದಲಿದ್ದು, ಸಣ್ಣ ಪುಟ್ಟ ಪ್ರಕರಣಗಳ ಕುರಿತು ರಾಜೀ ಸಂಧಾನದ ಮೂಲಕ ವ್ಯಾಜ್ಯ ಪರಿಹರಿಸಿಕೊಳ್ಳುವುದರಿಂದ ನ್ಯಾಯಾಲಯಕ್ಕೆ ಬರುವ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತದೆ ಎಂಬ ಆಶಯ ವ್ಯಕ್ತಪಡಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಭು ಎನ್‌.ಬಡಿಗೇರ್‌, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್‌ .ಟಿ.ಮಂಜುನಾಥ್‌, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್‌.ಎಚ್‌.ಅರುಣ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.