ಪ್ರಕೃತಿ ವಿಕೋಪ; ಮುಂಜಾಗ್ರತಾ ಕ್ರಮ ಅಗತ್ಯ
ಸಾರ್ವಜನಿಕರ-ಜಾನುವಾರುಗಳ ಪ್ರಾಣಹಾನಿ ತಡೆಯಿರಿ
Team Udayavani, Apr 30, 2022, 2:01 PM IST
ಹರಿಹರ: ನಗರದ ತುಂಗಭದ್ರಾ ನದಿಯಲ್ಲಿ ಗುರುವಾರ ಜಿಲ್ಲಾಡಳಿತ ಸಹಯೋಗದಲ್ಲಿ ಬೆಂಗಳೂರಿನ ಎನ್ ಡಿಆರ್ಎಫ್ ತಂಡದಿಂದ ಅಗ್ನಿ ಅನಾಹುತದಲ್ಲಿ ಮತ್ತು ಪ್ರವಾಹ ಸಂದರ್ಭಗಳಲ್ಲಿ ಜನ-ಜಾನುವಾರಗಳ ರಕ್ಷಣಾ ಕಾರ್ಯದ ಬಗ್ಗೆ ಅಣಕು ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.
ಸುಮಾರು 50ಕ್ಕೂ ಹೆಚ್ಚು ಜನರ ತಂಡ ಬೋಟ್ ಮತ್ತಿತರ ಪರಿಕರಗಳನ್ನು ಬಳಸಿ ಪ್ರವಾಹದಲ್ಲಿ ಸಿಲುಕಿ ಹಾಕಿಕೊಂಡವರನ್ನು ಹಾಗೂ ಬೆಂಕಿ ಅವಘಡಗಳು ಸಂಭವಿಸಿದಾಗ ಸಂತ್ರಸ್ತರನ್ನು ರಕ್ಷಣೆ ಮಾಡುವ, ಅವರಿಗೆ ತಕ್ಷಣಕ್ಕೆ ಪ್ರಥಮ ಚಿಕಿತ್ಸೆ ನೀಡುವ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿದರು.
ನಂತರ ಮಾತನಾಡಿದ ಎನ್ಡಿಆರ್ಎಫ್ ಅಸಿಸ್ಟೆಂಟ್ ಕಮಾಂಡರ್ ಜೆ.ಸಿಂತಾಲ್ ಕುಮಾರ್ ಕೇಂದ್ರ ಸರ್ಕಾರದ ಆದೇಶದಂತೆ ಸ್ಥಳೀಯ ಆಡಳಿತದ ಸಹಕಾರದೊಂದಿಗೆ ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ರಕ್ಷಣಾ ಕಾರ್ಯದ ಪ್ರಾತ್ಯಕ್ಷತೆ ನಡೆಸಲಾಗುತ್ತಿದೆ ಎಂದರು.
ಹರಿಹರದ ತುಂಗಭದ್ರಾ ನದಿಯಲ್ಲಿ ದಾವಣಗೆರೆ ಜಿಲ್ಲಾಡಳಿತ ಹಾಗೂ ಸುತ್ತಮುತ್ತಲಿನ ತಾಲೂಕು ಆಡಳಿತದ ಸಿಬ್ಬಂದಿಗಳಿಗೆ ಪ್ರವಾಹದ ಹಾಗೂ ಬೆಂಕಿ ಅವಘಡ ಸಂದರ್ಭದಲ್ಲಿ ನಾವು ಸಾರ್ವಜನಿಕರ ಮತ್ತು ಜಾನುವಾರುಗಳ ಪ್ರಾಣ ಹಾನಿಯಾಗದಂತೆ ಯಾವ ರೀತಿಯಲ್ಲಿ ಮುಂಜಾಗ್ರತ ಕ್ರಮಕೈಗೊಳ್ಳಬೇಕು ಎಂಬ ಅರಿವು ಮೂಡಿಸಲಾಗಿದೆ ಎಂದರು.
ತಹಶೀಲ್ದಾರ್ ಕೆ.ಬಿ.ರಾಮಚಂದ್ರಪ್ಪ ಮಾತನಾಡಿ, ಹರಿಹರ ತಾಲೂಕು ಕಳೆದ ಮೂರು ವರ್ಷಗಳಿಂದ ಪ್ರಕೃತಿ ವಿಕೋಪಕ್ಕೆ ತುತ್ತಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸಿಬ್ಬಂದಿ ಹಾಗೂ ಸಾರ್ವಜನಿಕರ ಪಾತ್ರವೇನು ಎಂಬ ಬಗ್ಗೆ ಎನ್ಡಿಆರ್ ಎಫ್ ತಂಡ ಸೂಕ್ತ ತಿಳಿವಳಿಕೆ ನೀಡಿದೆ ಎಂದರು.
ನಗರ ಯೋಜನಾಧಿಕಾರಿ ನಜ್ಮಾ, ಡಿಎಚ್ಒ ಡಾ|ನಾಗರಾಜ್, ಸಿಪಿಐ ಸತೀಶ್ಕುಮಾರ್, ಕುಮಾರ ಪಟ್ಟಣಂ ಮತ್ತು ಹರಿಹರ ನಗರ ಠಾಣೆ, ಕಂದಾಯ, ಅಗ್ನಿಶಾಮಕ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ