ಅದ್ಧೂರಿ ಮದುವೆಗೆಬೇಕಿದೆ ಕಡಿವಾಣ


Team Udayavani, Apr 14, 2017, 1:14 PM IST

dvg3.jpg

ದಾವಣಗೆರೆ: ಪ್ರಸ್ತುತ ವಾತಾವರಣದಲ್ಲಿ ಸರಳ ಸಾಮೂಹಿಕ ವಿವಾಹ ಮಹೋತ್ಸವ ಉತ್ತೇಜಿಸುವ ಮೂಲಕ ಅದ್ಧೂರಿ ಮದುವೆಗೆ ಕಡಿವಾಣ ಹಾಕಬೇಕಿದೆ ಎಂದು ಚಿಕ್ಕಬಳ್ಳಾಪುರ ನಂದಿಬೆಟ್ಟದ ಜ್ಞಾನಾನಂದ ಅಶ್ರಮದ ಶ್ರೀ ಶಿವಾತ್ಮಾನಂದ ಸ್ವಾಮೀಜಿ ತಿಳಿಸಿದ್ದಾರೆ.

ವಿಶ್ವಕರ್ಮ ಸಮಾಜ ಸಂಘದಿಂದ ಗುರುವಾರ ಶ್ರೀ ಕಾಳಿಕಾಂಬ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಮೂಹಿಕ ಉಪನಯನ ಮತ್ತು ವಿವಾಹ ಮಹೋತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಅದ್ಧೂರಿ, ಆಡಂಬರದ ಮದುವೆಗೆ ಬದಲಿಗೆ ಕಡಿಮೆ ವೆಚ್ಚದ ಸರಳ ಸಾಮೂಹಿಕ ವಿವಾಹ ಮಹೋತ್ಸವಕ್ಕೆ ಹೆಚ್ಚು ಒತ್ತು ನೀಡಬೇಕು ಎಂದರು. 

ಶಿಲ್ಪ, ಚಿನ್ನ-ಬೆಳ್ಳಿ, ಕಬ್ಬಿಣ, ಮರ ಮುಂತಾದ ಪಂಚಕಸುಬುಗಳನ್ನು ವಿಶ್ವಕ್ಕೆ ಪರಿಚಯಿಸಿದ ವಿಶ್ವಕರ್ಮ ಸಮಾಜ ಬಾಂಧವರು ಸರ್ವ ಧರ್ಮದ ಸಮನ್ವಯ ಬದುಕು ಸಾಗಿಸುತ್ತಿದ್ದಾರೆ. ತಮ್ಮ ಕುಲ ಕಸುಬುಗಳ ಮೂಲಕ ಸಮಾಜದ ಸೇವೆ ಮಾಡುತ್ತಿದೆ. ಸಮಾಜ ಬಾಂಧವರು ಮಕ್ಕಳನ್ನು ವಿದ್ಯಾವಂತರನ್ನಾಗಿಸುವ ಮೂಲಕ ಸಮಾಜವನ್ನು ಬಲಿಷ್ಠಗೊಳಿಸಬೇಕು ಎಂದು ತಿಳಿಸಿದರು. 

ಅರೆಮಾದನಹಳ್ಳಿಯ ಸುಜ್ಞಾನ ಪ್ರಭುಪೀಠದ ಶ್ರೀ ಶಿವಸುಜ್ಞಾನತೀರ್ಥ ಸ್ವಾಮೀಜಿ ಮಾತನಾಡಿ, ವಿಶ್ವಕರ್ಮ ಸಮಾಜದಲ್ಲಿ 36ಕ್ಕೂ ಹೆಚ್ಚು ಪೀಠಗಳಿವೆ. ಅತಿ ಹೆಚ್ಚು ಪೀಠಗಳ ಹೊಂದಿರುವ ಸಮಾಜಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ಸಮಾಜ ಇತರೆ ಸಮಾಜಗಳಂತೆ ಪ್ರಬಲ, ಪ್ರಭಾವಿಯಾಗಿ ಬೆಳೆದಿಲ್ಲ.

ಸಮಾಜ ಬಾಂಧವರು ತಮ್ಮ ಜೊತೆಗೆ ಪೀಠ ಬೆಳೆಸುವಂತಾಗಬೇಕು. ಒಳಪಂಗಡ ಮರೆತು ವಿಶ್ವಕರ್ಮ ಸಮಾಜ ಬಾಂಧವರೆಲ್ಲ ಒಂದಾಗಿ ಏಕತೆಯ ಸಾಧಿಸಬೇಕು ಎಂದು ತಿಳಿಸಿದರು. ಈಚೆಗೆ ಶಿಕ್ಷಣವಂತರ ಸಂಖ್ಯೆ ಹೆಚ್ಚಾಗುತ್ತಿರುವಂತೆ ಮಾಧ್ಯಮಗಳ ಸಂಸ್ಕಾರಕ್ಕೆ ಹೆಚ್ಚು ಒಳಗಾಗುತ್ತಿದ್ದಾರೆ.

ಮಾಧ್ಯಮಗಳಲ್ಲಿ ಪ್ರಸಾರ, ಪ್ರಕಟವಾಗುವ ಸಂಸ್ಕಾರಕ್ಕೆ ಸಂಬಂಧಿಸಿದ ವಿಚಾರಗಳು ಧಾರ್ಮಿಕ ಸಂಸ್ಕಾರಕ್ಕಿಂತಲೂ ಹೆಚ್ಚಿನ ಪ್ರಭಾವ ಬೀರುವುದು ಕಾಣಬಹುದು. ನಾವು ಎಷ್ಟೇ ಜ್ಞಾನವಂತರೇ ಆಗಿದ್ದರೂ ಧಾರ್ಮಿಕ ಸಂಸ್ಕಾರ ಇಲ್ಲದೇ ಹೋದಲ್ಲಿ ಅದು ಸಮಾಜಕ್ಕೆ ಮಾರಕ ಆಗಲಿದೆ ಎಂದು ಎಚ್ಚರಿಸಿದರು. 

ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿ, ಗಂಡ-ಹೆಂಡತಿ ಸಂಸಾರ ರಥದ ಎರಡು ಗಾಲಿಗಳು. ಒಬ್ಬರನ್ನೊಬ್ಬರು ಚೆನ್ನಾಗಿ ಅರಿತುಕೊಂಡು, ಹೊಂದಾಣಿಕೆಯಿಂದ ಸುಖ ಜೀವನ ನಡೆಸಬೇಕು. ಮಕ್ಕಳನ್ನು ಉತ್ತಮ ವಿದ್ಯಾವಂತರನ್ನಾಗಿ ಮಾಡುವ ಮೂಲಕ ಸಮಾಜಕ್ಕೆ ಅಮೂಲ್ಯ ಕಾಣಿಕೆ ನೀಡಬೇಕು ಎಂದು ತಿಳಿಸಿದರು.  

ವಿಶ್ವಕರ್ಮ ಸಮಾಜ ಸಂಘದ ಅಧ್ಯಕ್ಷ ಬಸಾಪುರದ ಬಿ. ನಾಗೇಂದ್ರಚಾರ್‌ ಅಧ್ಯಕ್ಷತೆ ವಹಿಸಿದ್ದರು. ಖ್ಯಾತ ಜವಳಿ ವರ್ತಕ ಬಿ.ಸಿ. ಉಮಾಪತಿ, ವಿಶ್ವಕರ್ಮ ಸಮಾಜದ ಅಧ್ಯಕ್ಷ ಕೆ.ಪಿ. ಮರಿಯಾಚಾರ್‌, ಕೆ.ಎನ್‌. ಪುಟ್ಟಸ್ವಾಮಿ, ಎಚ್‌. ಎನ್‌. ಜಯಾಚಾರ್‌ ಇತರರು ಇದ್ದರು. 15 ಜೋಡಿ ಮದುವೆ ನೆರವೇರಿತು. 57 ವಟುಗಳಿಗೆ ಸಾಮೂಹಿಕ ಉಪನಯನ ನೆರವೇರಿಸಲಾಯಿತು.  

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

13-davangere

Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು

drowned

Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.