ಸಿದ್ಧಗಂಗಾ ಸಂಸ್ಥೆಯಿಂದ ನೀಟ್‌ ತರಬೇತಿ


Team Udayavani, Nov 8, 2020, 7:23 PM IST

ಸಿದ್ಧಗಂಗಾ ಸಂಸ್ಥೆಯಿಂದ ನೀಟ್‌ ತರಬೇತಿ

ದಾವಣಗೆರೆ: ಕಳೆದ ಶೈಕ್ಷಣಿಕ ವರ್ಷ 2019-20ನೇ ಸಾಲಿನಲ್ಲಿ ನೀಟ್‌ ಪರೀಕ್ಷೆ ಬರೆದು, ಕೆಲವೇ ಅಂಕಗಳಲ್ಲಿ ವೈದ್ಯಕೀಯ ಸೀಟ್‌ನಿಂದ ವಂಚಿತರಾದ 50ವಿದ್ಯಾರ್ಥಿಗಳಿಗೆ ಉಚಿತವಾಗಿ ದೀರ್ಘಾವಧಿ ನೀಟ್‌ ತರಬೇತಿ ನೀಡಲು ನಗರದ ಶ್ರೀಸಿದ್ಧಗಂಗಾ ವಿದ್ಯಾಸಂಸ್ಥೆ ಮುಂದಾಗಿದೆ. ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ್‌ ಕೋರಿದರು.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಶಿಕ್ಷಣ ಶಿಲ್ಪಿ, ಸಿದ್ಧಗಂಗಾ ಸಂಸ್ಥೆಯ ಸಂಸ್ಥಾಪಕ ಎಂ.ಎಸ್‌. ಶಿವಣ್ಣನವರ ಸ್ಮರಣಾರ್ಥ ಹಾಗೂ ಸಂಸ್ಥೆಯ ಸುವರ್ಣ ಮಹೋತ್ಸವ ಸವಿನೆನಪಿಗಾಗಿ 2020-21ನೇ ಸಾಲಿನಲ್ಲಿ ನೀಟ್‌ ಪರೀಕ್ಷೆ ಬರೆಯಲು ಇಚ್ಛಿಸುವ ಆಯ್ದ 50 ಮಕ್ಕಳಿಗೆ ದೀರ್ಘಾವಧಿಯ ಉಚಿತ ತರಬೇತಿನೀಡಲಾಗುವುದು. ಕೆಲವೇ ಅಂಕಗಳ ಅಂತರದಿಂದ ಮೆಡಿಕಲ್‌ ಸೀಟ್‌ನಿಂದ ವಂಚಿತರಾದ ಮಕ್ಕಳಿಗೆ ಇದು ಸಂಸ್ಥೆಯ ಕೊಡುಗೆಯಾಗಿದೆ ಎಂದರು.

ಕಳೆದ ಶೈಕ್ಷಣಿಕ ಸಾಲಿನಲ್ಲಿ ಕೋವಿಡ್ ಲಾಕ್‌ಡೌನ್‌ ಕಾರಣದಿಂದ ಬಹಳಷ್ಟು ಮಕ್ಕಳಿಗೆ ನೀಟ್‌ ಪರೀಕ್ಷೆತರಬೇತಿ ಸಮರ್ಪಕವಾಗಿ ಸಿಕ್ಕಿಲ್ಲ. ಕೆಲ ಮಕ್ಕಳು ಕೆಲವೇ ಕೆಲವು ಅಂಕಗಳ ಅಂತರದಲ್ಲಿ ವೈದ್ಯಕೀಯ ಸೀಟ್‌ಕಳೆದುಕೊಂಡಿದ್ದಾರೆ. ಇಂಥ ಮಕ್ಕಳಿಗೆ ಈ ತರಬೇತಿ ಹೆಚ್ಚು ಪ್ರಯೋಜನವಾಗಲಿದೆ ಎಂದರು.

ಸಿದ್ಧಗಂಗಾ ವಿದ್ಯಾಸಂಸ್ಥೆಗೆ 50 ವರ್ಷಗಳು ತುಂಬಲಿದ್ದು, ಇದರ ಅಂಗವಾಗಿ ಹಲವಾರು ಕಾರ್ಯಕ್ರಮ ಹಮ್ಮಿಕೊಳ್ಳಲು ಯೋಜನೆ ತಯಾರಿಸಲಾಗಿತ್ತು. ಮಾರ್ಚ್‌ ತಿಂಗಳಲ್ಲಿ 200 ಮಕ್ಕಳಿಗೆ ಉಚಿತ ಸಿಇಟಿ ತರಬೇತಿ ನೀಡುವ ಯೋಜನೆಯೂ ಒಂದಾಗಿತ್ತು. ಕೋವಿಡ್‌-19 ಕಾರಣದಿಂದಾಗಿ ಮಾರ್ಚ್‌ನಿಂದ ಇಲ್ಲಿಯವರೆಗೆ ಶಾಲಾ- ಕಾಲೇಜುಗಳು ಮುಚ್ಚಿರುವುದರಿಂದ ಈ ಯೋಜನೆ ಕಾರ್ಯರೂಪಕ್ಕೆ ತರಲಾಗಲಿಲ್ಲ. ಇದಕ್ಕೆ ಪರ್ಯಾಯವಾಗಿ ಈಗ 50 ಮಕ್ಕಳಿಗೆ ಉಚಿತ ನೀಟ್‌ ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದರು.

ವಿದ್ಯಾಸಂಸ್ಥೆಯ ನಿರ್ದೇಶಕ ಡಾ.ಡಿ.ಎಸ್‌. ಜಯಂತ್‌ ಮಾತನಾಡಿ, ಉಚಿತ ನೀಟ್‌ ತರಬೇತಿಗಾಗಿ ನಡೆಯುವ ಆಯ್ಕೆ 2019-20ನೇ ಸಾಲಿನಲ್ಲಿ ನೀಟ್‌ ಪರೀಕ್ಷೆ ಬರೆದ ಅಂಕಗಳ ಆಧಾರದ ಮೇಲೆ ಅವಲಂಬಿಸಿದೆ. ನೀಟ್‌ ಪರೀಕ್ಷೆಯಲ್ಲಿ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು 400ಕ್ಕಿಂತ ಹೆಚ್ಚು, ಹಿಂದುಳಿದ ವರ್ಗದವರು 350ಕ್ಕಿಂತ ಹೆಚ್ಚು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜಾತಿಗೆ ಸೇರಿದ ವಿದ್ಯಾರ್ಥಿಗಳು 300ಕ್ಕಿಂತ ಹೆಚ್ಚು ಅಂಕಗಳಿಸಿ, ವೈದ್ಯಕೀಯ ಸೀಟ್‌ನಿಂದ ವಂಚಿತರಾಗಿರಬೇಕು. ಅಂಥ ಮಕ್ಕಳ ಕುಟುಂಬದ ವಾರ್ಷಿಕ ಆದಾಯ ಎಂಟು ಲಕ್ಷ ರೂ. ಒಳಗಿರಬೇಕು. ರಾಜ್ಯದ ಯಾವುದೇ ಭಾಗದ ವಿದ್ಯಾರ್ಥಿಗಳೂ ಸಹ ಉಚಿತ ತರಬೇತಿ ಪಡೆಯಬಹುದಾಗಿದೆ ಎಂದರು.

ಮೊದಲು ಬಂದ 50ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ವಿವರಗಳಿಗಾಗಿ 99822 30899 ಗೆ ಮಿಸ್ಡ್ಕಾಲ್‌ ನೀಡಿ, ನ. 18ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಉಳಿದವರು ನಿಗದಿತ ಶುಲ್ಕ ಪಾವತಿಸಿ ನೀಟ್‌ ತರಬೇತಿ ಪಡೆಯಬಹುದಾಗಿದೆ. ಬಾಲಕ-ಬಾಲಕಿಯರಿಗೆ ಪ್ರತ್ಯೇಕ ಹಾಸ್ಟೆಲ್‌ ವ್ಯವಸ್ಥೆ ಇರುತ್ತದೆ. ನೋಂದಣಿ ಇಂದಿನಿಂದಲೇ ಪ್ರಾರಂಭವಾಗಿದೆ. ಸರಕಾರದ ಮಾರ್ಗಸೂಚಿ ಗಮನಿಸಿ ನ. 23ರಿಂದ ಆನ್‌ಲೈನ್‌ ಇಲ್ಲವೇ ಆಫ್‌ಲೈನ್‌ನಲ್ಲಿ ತರಬೇತಿ ಆರಂಭವಾಗಲಿದೆ ಎಂದರು.

ಲಾಕ್‌ಡೌನ್‌ ಅವಧಿಯಲ್ಲಿ ವಿದ್ಯಾಸಂಸ್ಥೆಯಿಂದ ಮೂರನೇ ತರಗತಿಯಿಂದ ಪಿಯುಸಿ ವರೆಗೆ ಅನುಭವಿ ಶಿಕ್ಷಕರು ಮಾಡಿದ ಪಾಠದ ವಿಡಿಯೋಗಳನ್ನು ಮಾಡಿ ಯುಟ್ಯೂಬ್‌ಗ ಹಾಕಲಾಗಿದೆ. 29400 ಜನರು ಚಂದಾದಾರರಾಗಿದ್ದು, 40ಲಕ್ಷ ಜನರು ವೀಕ್ಷಿಸಿದ್ದಾರೆ ಎಂದು ಡಾ. ಜಯಂತ್‌ ಇದೇ ಸಂದರ್ಭದಲ್ಲಿ ತಿಳಿಸಿದರು.

ವಿದ್ಯಾಸಂಸ್ಥೆಯ ಪ್ರಾಚಾರ್ಯೆ ಗಾಯತ್ರಿ ಚಿಮ್ಮಡ್‌, ಉಪನ್ಯಾಸಕರಾದ ಎಲ್‌.ವಿ. ಸುಬ್ರಹ್ಮಣ್ಯ, ಕೆ.ಸಿ. ಸಿದ್ದಪ್ಪ, ಯು.ಡಿ. ಲಕ್ಷ್ಮೀ ನಾರಾಯಣ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.