ಜಯಂತಿ ಆಚರಣೆಗೆ ಅಧಿಕಾರಿಗಳ ನಿರ್ಲಕ್ಷ್ಯ: ಆಕ್ರೋಶ


Team Udayavani, Oct 18, 2018, 1:13 PM IST

dvg-2.jpg

ಹರಪನಹಳ್ಳಿ; ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತವತಿಯಿಂದ ಕಿತ್ತೂರು ರಾಣಿ ಚನ್ನಮ್ಮ ಹಾಗೂ ವಾಲ್ಮೀಕಿ ಜಯಂತಿ ನಿಮಿತ್ತ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಗೆ ತಹಶೀಲ್ದಾರ್‌ ಮಧು ಡಾ| ಎನ್‌.ಎನ್‌. ಮಧು ತಡವಾಗಿ ಬಂದಿದ್ದರಿಂದ ವಿವಿಧ ಸಮಾಜ ಮುಖಂಡರಿಂದ ಆಕ್ರೋಶ ವ್ಯಕ್ತವಾಯಿತು.

ಪೂರ್ವಭಾವಿ ಸಭೆ ವಿವಿಧ ಸಮಾಜಗಳ ಮುಖಂಡರು ಹಾಗೂ ಅಧಿಕಾರಿಗಳು ಆಗಮಿಸಿದ್ದರು. ತಹಶೀಲ್ದಾರ್‌ ಅವರು ಮಧ್ಯಾಹ್ನ 12.30 ಸಮಯವಾದರೂ ಆಗಮಿಸಲಿಲ್ಲ. ಅಧಿಕಾರಿಗಳ ವರ್ತನೆಯಿಂದ ರೋಸಿಹೋದ ಮುಖಂಡರಾದ ನಿಚ್ಚವ್ವನಹಳ್ಳಿ ಭೀಮಪ್ಪ, ಎಚ್‌.ಟಿ. ಗಿರೀಶಪ್ಪ, ತಲವಾಗಲು ಮಲ್ಲಿಕಾರ್ಜುನ್‌, ಬೇಲೂರು ಅಂಜಪ್ಪ ಅವರು ಬೇಸರ ವ್ಯಕ್ತಪಡಿಸಿದರು. 

ಸಭೆಗೆ ಬೆರಣಿಕೆಯಷ್ಟು ಅಧಿಕಾರಿಗಳು ಮಾತ್ರ ಆಗಮಿಸಿದ್ದಾರೆ. ಕೆಲವರು ಕಚೇರಿ ಸಿಬ್ಬಂದಿ ಕಳುಹಿಸಿದ್ದಾರೆ. ಪ್ರತಿ ಬಾರಿಯೂ ಅಧಿಕಾರಿಗಳಿಗೆ ನೋಟಿಸ್‌ ಕೊಡುವುದಾಗಿ ಹೇಳುತ್ತೀರಿ. ಯಾರು ನಿಮ್ಮ ನೊಟೀಸ್‌ಗೆ ಹೆದರಿಕೊಂಡು ಸಭೆಗೆ ಬರುತ್ತಿದ್ದಾರೆ ಹೇಳಿ ಎಂದು ಸಮಾಜಕಲ್ಯಾಣ ಅಕಾರಿ ಆನಂದ ಡೊಳ್ಳಿನ್‌ ಅವರನ್ನು ಮುಖಂಡರು ಪ್ರಶ್ನಿಸಿದರು.

ಸಮಾಜದ ಮುಖಂಡರು ಮತ್ತು ಸಂಘ, ಸಂಸ್ಥೆಗಳ ಪದಾಧಿಕಾರಿಗಳನ್ನು ಅಧಿಕಾರಿಗಳು ಒಂದೂವರೆ ತಾಸು ಕಾಯಿಸುತ್ತಿದ್ದಾರೆ. ಬೇಕಿದ್ದರೆ ಮತ್ತೂಂದು ದಿನ ಸಭೆ ನಡೆಸಲಿ, ಸಭೆ ಬಹಿಷ್ಕರಿಸಿ ಹೊರ ನಡೆಯೋಣ ಎಂದು ಉಪನ್ಯಾಸಕ ಎಚ್‌. ಮಲ್ಲಿಕಾರ್ಜುನ್‌ ಸಲಹೆ ನೀಡಿದಾಗ ಬೇಲೂರು ಅಂಜಪ್ಪ, ಎಚ್‌.ಟಿ. ಗಿರೀಶಪ್ಪ ಮತ್ತಿತರರು ಇದಕ್ಕೆ ಧ್ವನಿಗೂಡಿಸಿದರು. 

ಬಳಿಕ ಸಭೆಯಿಂದ ಹೊರ ನಡೆಯಲು ಮುಂದಾದಾಗ ತಹಶೀಲ್ದಾರ್‌ ಡಾ| ಎನ್‌.ಎನ್‌. ಮಧು ಅವರು ಆಗಮಿಸಿದರು. ಆರಸೀಕೆರೆಯಿಂದ ಬರುವಾಗ ವಾಹನ ಪಂಚರ್‌ ಆಗಿತ್ತು. ಹಾಗಾಗಿ ಕ್ಷಮಿಸಿ ಎಂದು ವಿವಿಧ ಸಮಾಜದ ಮುಖಂಡರನ್ನು ಕೋರಿದರು.

ಪ್ರಮುಖ ಇಲಾಖೆಗಳ ಅಧಿಕಾರಿಗಳು ಸಭೆಗೆ ಆಗಮಿಸಿಲ್ಲ. ದಾರ್ಶನಿಕರ ಜಯಂತಿಗಳ ಆಚರಣೆಗೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ನೀವು ಸಭೆ ನಡೆಸಿದರದೂ ಏನೂ ಪ್ರಯೋಜನವಿಲ್ಲ. ಸಭೆ ಮಂದೂಡಿ ಎಂದು ಹಲವು ಮುಖಂಡರು ತಹಶೀಲ್ದಾರ್‌ ಅವರನ್ನು ಒತ್ತಾಯಿಸಿದರು.

 ದಸರಾ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆಗಳಿವೆ. ನಂತರ ಸಭೆ ನಡೆಸುವುದು ಕಷ್ಟವಾಗುತ್ತಿದೆ. ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್‌ ನೀಡಲಾಗುವುದು. ಕಡ್ಡಾಯವಾಗಿ ಎಲ್ಲ ಜಯಂತಿ ಹಾಗೂ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಭಾಗವಹಿಸಬೇಕು. ಇಲ್ಲವಾದಲ್ಲಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ತಹಶೀಲ್ದಾರ್‌ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಅ. 23ರಂದು ಪಟ್ಟಣದ ನಟರಾಜ ಕಲಾಭವನದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಹಾಗೂ ಅ. 24ರಂದು ಜ್ಯೂನಿಯರ್‌
ಕಾಲೇಜ್‌ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಯಿತು. ಪಟ್ಟಣದ ಐಬಿ ವೃತ್ತದಿಂದ ಕಾರ್ಯಕ್ರಮ ನಡೆಯುವ ಸ್ಥಳದವರೆಗೆ ಮೆರವಣಿಗೆ ಹಾಗೂ ಆಯಾ ಸಮಾಜದ ಪ್ರತಿಭಾವಂತ  ವಿದ್ಯಾ ಕಾರಿಗಳಿಗೆ ಪ್ರತಿಭಾ ಪುರಸ್ಕಾರ
ನೀಡಲು ನಿರ್ಧರಿಸಲಾಯಿತು. ವಿವಿಧ ಇಲಾಖೆ ಅಧಿಕಾರಿಗಳಿಗೆ ಕಾರ್ಯಕ್ರಮದ ಜವಾಬ್ದಾರಿ ವಹಿಸಲಾಯಿತು.

ಸಿಪಿಐ ಡಿ. ದುರುಗಪ್ಪ, ವಿವಿಧ ಸಮಾಜದ ಮುಖಂಡರಾದ ನಿಚ್ಚವ್ವನಹಳ್ಳಿ ಪರುಶುರಾಮಪ್ಪ, ಪಾಟೀಲ್‌ ಬೆಟ್ಟನಗೌಡ, ಶಿರಹಟ್ಟಿ ದಂಡೆಪ್ಪ, ಅರಸೀಕೆರೆ ಸುರೇಶ್‌, ರವಿ ಅಧಿಕಾರ್‌, ನೀಲಗುಂದ ಮನೋಜ್‌, ಲೀಲಾ ಲಿಂಗರಾಜ್‌, ನಾಗರಾಜ್‌, ಸೋಮನಾಥ್‌, ಸಿ.ಲೋಕ್ಯನಾಯ್ಕ, ನಾಗರಾಜ್‌, ಕಬ್ಬಳ್ಳಿ ಮೈಲಪ್ಪ, ಅಧಿಕಾರಿಗಳು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.