ಉದ್ಯಮಶೀಲತೆ ಬೆಳವಣಿಗೆಗೆ ಎನ್‌ಇಪಿ ಪೂರಕ

ಉತ್ತಮ ರಾಷ್ಟ್ರ ನಿರ್ಮಾಣಕ್ಕೆ ಅಗತ್ಯ ಉದ್ಯಮಶೀಲತೆ ಬೆಳೆಸಲು ಕಾಳಜಿ ತೋರಿ: ಪಾಣಿಗ್ರಾಹಿ

Team Udayavani, May 17, 2022, 3:15 PM IST

faculty

ಹರಿಹರ: ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಬೆಳೆಸುವಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿಯಾಗಲಿದೆ ಎಂದು ಸಮಗ್ರ ಬೆಳವಣಿಗೆ ಮತ್ತು ಸಂಶೋಧನಾ ವೇದಿಕೆಯ ಸಂಚಾಲಕ ಚಾರುದತ್ತ ಪಾಣಿಗ್ರಾಹಿ ಹೇಳಿದರು.

ನಗರದ ಕಿರ್ಲೋಸ್ಕರ್‌ ಇನ್ಸ್ಟಿಟ್ಯೂಟ್‌ ಆಫ್‌ ಅಡ್ವಾನ್ಸ್‌ಡ್‌ ಮ್ಯಾನೇಜ್‌ಮೆಂಟ್‌ನಲ್ಲಿ (ಕಿಯಾಮ್ಸ್‌) ಸೋಮವಾರ ಪದವಿ ಮತ್ತು ಸ್ನಾತಕೋತ್ತರ ಪದವಿಯ ಪ್ರಾಧ್ಯಾಪಕರಿಗೆ ಆಯೋಜಿಸಿದ್ದ ಬೋಧನಾಭಿವೃದ್ಧಿ ಕಾರ್ಯಕ್ರಮದಲ್ಲಿ ಉದ್ಯಮಶೀಲ ಮನೋಭಾವದ ಬೆಳವಣಿಗೆ ಮತ್ತು ಉದ್ಯಮ ಶೀಲತೆಗೆ ಅಗತ್ಯವಾದ ಪರಿಸರ, ಸಾಮಾಜಿಕ, ಆಡಳಿತಾತ್ಮಕ ಚೌಕಟ್ಟು ಹಾಗೂ ನಿರ್ವಹಣೆ ಬದಲಾವಣೆ ವಿಷಯ ಕುರಿತು ಮಾತನಾಡಿದರು.

ನಮ್ಮ ಮುಂಚಿನ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳಲ್ಲಿ ಉದ್ಯೋಗಶೀಲತೆ ಬೆಳೆಸಲು ವಿಫಲವಾಗಿತ್ತು. ಆದರೆ ಹೊಸ ಶಿಕ್ಷಣ ನೀತಿಯ ಪಠ್ಯಕ್ರಮ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಬೆಳೆಸಲು, ಪ್ರೋತ್ಸಾಹಿಸಲು ಪೂರಕವಾಗಿದೆ. ಅದರಲ್ಲೂ ಉನ್ನತ ಶಿಕ್ಷಣದಲ್ಲಿರುವ ಬೋಧಕರು ವಿದ್ಯಾರ್ಥಿಗಳಲ್ಲಿ ಉತ್ತಮ ರಾಷ್ಟ್ರ ನಿರ್ಮಾಣಕ್ಕೆ ಅಗತ್ಯವಾದ ಉದ್ಯಶೀಲತೆ ಬೆಳೆಸುವ ಕಾಳಜಿ ತೋರಬೇಕು ಎಂದರು.

ಖಾಸಗಿ ಅಥವಾ ಸರ್ಕಾರದ ಯಾವುದೇ ಅಭಿವೃದ್ಧಿ ಕಾರ್ಯಗಳಲ್ಲಿ ಪರಿಸರ ಮತ್ತು ಸಾಮಾಜಿಕ ಕಳಕಳಿಯಿರುವ ಆಡಳಿತ ವ್ಯವಸ್ಥೆ ಬರಬೇಕು. ಜಾಗತಿಕ ಮಟ್ಟದಲಿ ಈ ಬಗ್ಗೆ ಕೆಲಸಗಳಾಗುತ್ತಿದ್ದು, ಮುಂದಿನ ದಿನಗಳಲ್ಲಿ ಯಾವುದೇ ಉದ್ಯಮ ನಡೆಯಲು ಅದರ ಪರಿಸರ, ಸಮಾಜ ಮತ್ತು ಆಡಳಿತಾತ್ಮಕ ಬದ್ಧತೆ ಪ್ರಮುಖ ಅಂಶವಾಗಲಿದೆ. ಈ ಬಗ್ಗೆ ಅರಿವು ಮೂಡಿಸಲು ಶಿಕ್ಷಣದಲ್ಲಿ ಸೂಕ್ತ ಪಠ್ಯಕ್ರಮ ಮತ್ತು ಚಟುವಟಿಕೆಗಳನ್ನು ಅಳವಡಿಸಿಕೊಳ್ಳುವುದು ಇಂದಿನ ಅವಶ್ಯವಾಗಿದೆ ಎಂದರು.

ಈವರೆಗೆ ಮಾನವನ ಏಳಿಗೆಗಾಗಿ ಆದ ಪರಿಸರ ಹಾನಿಯಿಂದ, ಕೈಗಾರಿಕೀಕರಣದಿಂದ ಆದ ಸಾಮಾಜಿಕ ಅಸಮತೋಲನದಿಂದ ನಾವೆಲ್ಲರೂ ಅದರ ದುಷ್ಪರಿಣಾಮಗಳನ್ನು ಎದುರಿಸಬೇಕಾಗಿದೆ. ಯಾವ ಅಭಿವೃದ್ಧಿಯಿಂದ ನಮ್ಮ ಪರಿಸರ, ನೆಮ್ಮದಿ ಹಾಳಾಗುವುದೋ, ಮಾಲಿನ್ಯ ಹೆಚ್ಚಾಗುವುದೋ, ಆರೋಗ್ಯ ಕ್ಷೀಣಿಸುವುದೋ ಅಂತಹ ಸಾಮಾಜಿಕ, ಆಡಳಿತ ವ್ಯವಸ್ಥೆಯನ್ನು ತಿರಸ್ಕರಿಸಬೇಕು ಎಂದು ಕರೆ ನೀಡಿದರು. ಸಂಪನ್ಮೂಲ ವ್ಯಕ್ತಿ ಸುಚೇತಾ ಹೋಟಾ ಮಾತನಾಡಿ, ಕೋವಿಡ್‌ ನಂತರ ಜಾಗತಿಕ ಮಟ್ಟದಲ್ಲಿ ಅನೇಕ ಬದಲಾವಣೆಗಳಾಗುತ್ತಿವೆ. ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌, ಮಷಿನ್‌ ಲರ್ನಿಂಗ್‌, ಇಂಟರ್ನೆಟ್‌ ಆಫ್‌ ಥಿಂಗಸ್‌ ಇಂದಿನ ಅವಶ್ಯಕತೆಗಳಾಗಿದ್ದು, ಇವುಳಿಂದಾಗುವ ಬದಲಾವಣೆಯನ್ನು ನಿರ್ವಹಿಸುವ ಕೌಶಲ್ಯವನ್ನು ಬೋಧಕರು ಮತ್ತು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಸಂಪನ್ಮೂಲ ವ್ಯಕ್ತಿಗಳಾದ ಚಾರುದತ್ತ ಪಾಣಿಗ್ರಹಿ ಮತ್ತು ಸುಚೇತಾ ಹೋಟಾ ಇವರಿಗೆ ಕಿಯಾಮ್ಸ ನಿರ್ದೇಶಕ ಡಾ| ಬಿಪ್ಲಬ್‌ ಕುಮಾರ್‌ ಬಿಸ್ವಾಲ್‌, ಪ್ರಾಧ್ಯಪಕ ಡಾ| ವಿ.ಎಸ್‌.ಪೈ ಮತ್ತು ಡಾ| ಸುಧಾಂಶು ನಂದಾ ಸನ್ಮಾನಿಸಿದರು. ಭಾಗವಹಿಸಿದ್ದ ಉಪನ್ಯಾಸರಿಕರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಸಹಪ್ರಾಧ್ಯಾಪಕ ಮತ್ತು ಡೀನ್‌ ಡಾ|ನಾಗರಾಜ್‌ ವಿ. ಬೇವಿನ ಮರದ್‌, ಡಾ|ಆರ್ಥರ್‌ ಪರ್ನಾಂಡಿಸ್‌, ಡಾ| ಚೇತನ್‌ ವಿ. ಹಿರೇಮಠ ಇತರರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.