ಪ್ರಸಕ್ತ ಸಾಲಿನಿಂದ ನೂತನ ಶಿಕ್ಷಣ ನೀತಿ


Team Udayavani, Jan 12, 2019, 7:13 AM IST

dvg-1.jpg

ದಾವಣಗೆರೆ: 2019-20ನೇ ಸಾಲಿನಿಂದ ಜಾರಿಗೆ ಬರಲಿರುವ ನೂತನ ಶಿಕ್ಷಣ ನೀತಿಯಡಿ ವೃತ್ತಿ ಶಿಕ್ಷಣ ಶಿಕ್ಷಕರಿಗೆ ಇತರೆ ಶಿಕ್ಷಕರಂತೆ ಸಮಾನ ಪ್ರಾಮುಖ್ಯತೆ, ಆದ್ಯತೆ ದೊರೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಲ್ಲಿನ ಉಪ ನಿರ್ದೇಶಕಿ ಎಚ್.ಎ. ಶಮೀಮ್‌ ತಾಜ್‌ ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶುಕ್ರವಾರ ರೇಣುಕಾ ಮಂದಿರದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಪ್ರೌಢಶಾಲಾ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವ ವಸ್ತು ಪ್ರದರ್ಶನ-2019ರಲ್ಲಿ ಮಾತನಾಡಿದ ಅವರು, ನೂತನ ಶಿಕ್ಷಣ ನೀತಿಯಡಿ ಕನ್ನಡ, ಆಂಗ್ಲ, ವಿಜ್ಞಾನ, ಸಮಾಜ ವಿಜ್ಞಾನ ವಿಷಯ ಶಿಕ್ಷಕರಂತೆ ತೋಟಗಾರಿಕೆ, ಕೃಷಿ, ಸಂಗೀತ ಮುಂತಾದ ವಿಷಯಗಳ ವೃತ್ತಿ ಶಿಕ್ಷಣ ಶಿಕ್ಷಕರಿಗೆ ಸಮಾನ ಆದ್ಯತೆ ನೀಡಲಾಗುವುದು. ಹಾಗಾಗಿ ಇನ್ನು ಮುಂದೆ ವೃತ್ತಿ ಶಿಕ್ಷಣ ಶಿಕ್ಷಕರ ಜವಾಬ್ದಾರಿ ಹೆಚ್ಚಾಗಲಿದೆ. ಎಲ್ಲಾ ಶಿಕ್ಷಕರು ಒಂದು ತಂಡವಾಗಿ ಗುಣಮಟ್ಟದ ಬೋಧನೆಗೆ ಶ್ರಮಿಸಬೇಕು ಎಂದರು.

ನೂತನ ಶಿಕ್ಷಣ ನೀತಿಯಡಿ ವೃತ್ತಿ ಶಿಕ್ಷಣ ಶಿಕ್ಷಕರಿಗೆ ಅನುಕೂಲವಾಗುವಂತೆ ಕೈಪಿಡಿ ಸಿದ್ಧಗೊಳಿಸಲಾಗುತ್ತಿದೆ. ಹಲವಾರು ವಿಷಯ ತಜ್ಞರ ಅಭಿಪ್ರಾಯ ಸಂಗ್ರಹದ ಕೈಪಿಡಿ ಜೂನ್‌ ವೇಳೆಗೆ ಮುದ್ರಣವಾಗಲಿದೆ. ಅಲ್ಲದೆ ವೃತ್ತಿ ಶಿಕ್ಷಣ ಶಿಕ್ಷಕರ ವೇತನ ತಾರತಮ್ಯ ನಿವಾರಣೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಕ್ಷೇತ್ರ ಶಿಕ್ಷಣಾಧಿಕಾರಿಗೆ ಸಮಾಂತರವಾಗಿ ಕಲಬುರುಗಿ ಮತ್ತು ಧಾರವಾಡದಲ್ಲಿ ವೃತ್ತಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಹಿರಿಯ ಸಹಾಯಕ ನಿರ್ದೇಶಕ ಹುದ್ದೆ ಭರ್ತಿ ಮಾಡಲಾಗುವುದು. 16 ಜನ ಶಿಕ್ಷಕರಿಗೆ ಪದೋನ್ನತಿ ನೀಡಲಾಗುವುದು. ಅಂಕಪಟ್ಟಿಯಲ್ಲೂ ವೃತ್ತಿ ಶಿಕ್ಷಣಕ್ಕೆ ಆದ್ಯತೆ ದೊರೆಯಲಿದೆ ಎಂದು ತಿಳಿಸಿದರು.

ಮಕ್ಕಳ ಗುಣಾತ್ಮಕ, ಸೃಜನಾತ್ಮಕ, ಕ್ರಿಯಾತ್ಮಕ ಕಲಿಕೆಗೆ ವೃತ್ತಿ ಶಿಕ್ಷಣ ಅತ್ಯಗತ್ಯ ಎಂಬುದನ್ನು ಮರೆಯಲೇಬಾರದು.ನಾವು ಇತರೆ ಭಾಷಾ ಶಿಕ್ಷಕರ ಮೇಲೆಯೇ ಅವಲಂಬಿತರು, ಶಾಲೆಗಳ ಇತರೆ ಕೆಲಸ ಮಾಡಬೇಕಾದವರು ಎಂಬ ಕೀಳರಿಮೆಯನ್ನು ದೂರ ಮಾಡಬೇಕು. ಅಂತಹ ಅವಕಾಶವನ್ನು ಹೊಸ ಶಿಕ್ಷಣ ನೀತಿ ಮಾಡಿಕೊಡಲಿದೆ ಎಂದು ತಿಳಿಸಿದರು.

ಮಕ್ಕಳಲ್ಲಿ ಧನಾತ್ಮಕ ಚಿಂತನೆ, ಸೃಜನಶೀಲತೆ, ಸಮಸ್ಯೆಗಳನ್ನು ಪರಿಹರಿಸಿ ಕೊಳ್ಳುವ ಸಾಮರ್ಥ್ಯದಂತಹ ಜೀವನ ಕೌಶಲ್ಯ ಅಭಿವೃದ್ಧಿಯಲ್ಲಿ ವೃತ್ತಿ ಶಿಕ್ಷಣ ಶಿಕ್ಷಕರ ಪಾತ್ರ ಅತ್ಯಂತ ಮಹತ್ತರ ಮತ್ತು ಮಹತ್ವದ್ದು. ವೃತ್ತಿ ಶಿಕ್ಷಣ ಶಿಕ್ಷಕರು ಬುದ್ಧಿವಂತ ಮತ್ತು ಕಲಿಕೆಯಲ್ಲಿ ಹಿಂದುಳಿದ ಮಕ್ಕಳಲ್ಲಿನ ಸುಪ್ತ ಪ್ರತಿಭೆ ಗುರುತಿಸಿ, ಅವರು ಯಾವ ವೃತ್ತಿ ಶಿಕ್ಷಣ ಆಯ್ಕೆ ಮಾಡಿಕೊಂಡಲ್ಲಿ ಉತ್ತಮ ಬದುಕನ್ನು ಕಟ್ಟಿಕೊಳ್ಳಬಹುದು ಎಂಬ ವಿಚಾರಗಳ ಬಗ್ಗೆ ಮಾರ್ಗದರ್ಶಕರಾಗಬೇಕು. ಜೀವನದ ದಾರಿಗೆ ಅಗತ್ಯವಾದ ಪ್ರೇರಣೆ ನೀಡಬೇಕು ಎಂದು ಸಲಹೆ ನೀಡಿದರು.

ಮೇಯರ್‌ ಶೋಭಾ ಪಲ್ಲಾಗಟ್ಟೆ ಮಾತನಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ವೃತ್ತಿ ಶಿಕ್ಷಣಕ್ಕೆ ಮೂಲ ಕಾರಣಕರ್ತರು. ಪ್ರತಿಯೊಬ್ಬರು, ಅದರಲ್ಲೂ ಹೆಣ್ಣುಮಕ್ಕಳು ಸ್ವಾವಲಂಬಿ ಜೀವನ ನಡೆಸಲು ವೃತ್ತಿ ಶಿಕ್ಷಣ ಅತೀ ಮುಖ್ಯ. ವೃತ್ತಿ ಶಿಕ್ಷಣ ಶಿಕ್ಷಕರು ಮಕ್ಕಳ ಮುಂದಿನ ಭವಿಷ್ಯಕ್ಕೆ ಒಳ್ಳೆಯ ಮಾರ್ಗದರ್ಶಕರಾಗಬೇಕು ಎಂದು ಆಶಿಸಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ ಉಪ ನಿರ್ದೇಶಕ ಎಚ್.ಕೆ. ಲಿಂಗರಾಜ್‌, ತಾವು ಅನೇಕ ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವೃತ್ತಿ ಶಿಕ್ಷಣ ಶಿಕ್ಷಕರು ಒಂದು ರೀತಿಯ ಕೀಳರಿಮೆಯಲ್ಲಿ ಇರುವುದು ಕಂಡು ಬರುತ್ತದೆ. ಮಕ್ಕಳ ಕಲಿಕೆಯ ಶೇ.15 ಭಾಗ ಸೃಜನಶೀಲತೆ ಬೆಳೆಸುವ ವೃತ್ತಿ ಶಿಕ್ಷಕರ ಪಾತ್ರ ಅತೀ ಮಹತ್ವದ್ದು. ಪುಸ್ತಕದ ತಿರುಳು ವಿದ್ಯಾರ್ಥಿಗಳ ಮಸ್ತಕಕ್ಕೆ ಹೋಗಲು ವೃತ್ತಿ ಶಿಕ್ಷಣ ಶಿಕ್ಷಕರು ನೆರವಾಗಬೇಕು. ಮಕ್ಕಳು ಬದುಕನ್ನು ಕಟ್ಟಿಕೊಳ್ಳಲು ಪ್ರೇರಣೆ ನೀಡುವ ವೃತ್ತಿ ಶಿಕ್ಷಣ ಶಿಕ್ಷಕರು ತಮ್ಮ ವೃತ್ತಿಯ ಬಗ್ಗೆ ಹೆಮ್ಮೆ, ಆತ್ಮವಿಶ್ವಾಸ ಹೊಂದಿರಬೇಕು ಎಂದು ತಿಳಿಸಿದರು.

ಡೆಪ್ಯುಟಿ ಮೇಯರ್‌ ಕೆ. ಚಮನ್‌ಸಾಬ್‌, ವೃತ್ತಿ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಎಚ್.ಡಿ. ಎಲ್ಲಪ್ಪ, ಸಿದ್ದಮ್ಮ, ಬಿ. ದಿಳ್ಯೆಪ್ಪ, ಶಿವಾನಾಯ್ಕ, ಡಿ.ಎಸ್‌. ನಾಗಭೂಷಣ್‌, ಸಿದ್ದರಾಮಯ್ಯ, ಜಯಶಂಕರ್‌, ಶಿವಶಂಕರ್‌, ಮುಬಾರಕ್‌ಅಲಿ, ಮಲ್ಲಯ್ಯ ಇತರರು ಇದ್ದರು.

ಪ್ರೇಮಾ ಮತ್ತು ಸಂಗಡಿಗರು ನಾಡಗೀತೆ ಹಾಡಿದರು. ಬಿ.ಎನ್‌. ರಾಮರೆಡ್ಡಿ ಸ್ವಾಗತಿಸಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.