ಯಾವ ಸರ್ಕಾರಗಳೂ ಕಾರ್ಮಿಕರ ಪರ ಇಲ್ಲ


Team Udayavani, Oct 23, 2017, 2:40 PM IST

23-43.jpg

ದಾವಣಗೆರೆ: ಯಾವ ಸರ್ಕಾರಗಳೂ ಕಾರ್ಮಿಕರ ಪರ ಚಿಂತಿಸುತ್ತಿಲ್ಲ, ಬಂಡವಾಳ ಶಾಹಿಗಳ ಪರ ಇವೆ ಎಂದು ಎಐಯುಟಿಯುಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ. ಸೋಮಶೇಖರ್‌ ದೂರಿದ್ದಾರೆ.

ರೋಟರಿ ಬಾಲಭವನದಲ್ಲಿ ಭಾನುವಾರ ಎಐಯುಟಿಯುಸಿ ಸಂಯೋಜಿದ ದಾವಣಗೆರೆ ವಿಶ್ವವಿದ್ಯಾನಿಲಯದ ಸಿ ಮತ್ತು ಡಿ ಗ್ರೂಪ್‌ ಹೊರಗುತ್ತಿಗೆ ನೌಕರರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಮಿಕರ ಕಲ್ಯಾಣಕ್ಕಾಗಿ ಯಾವುದೇ ಸರ್ಕಾರ ಮುಂದಾಗುತ್ತಿಲ್ಲ. ಬಂಡವಾಳ ಶಾಹಿಗಳು, ಮಾಲಿಕರ ಪರ ಇವೆ ಎಂದರು.  ಪ್ರಸ್ತುತ ಎಲ್ಲಾ ಸರ್ಕಾರಗಳು ಗುತ್ತಿಗೆ ಆಧಾರಿತ ನೌಕರರ ಮೇಲೆ ಅವಲಂಬಿತ ಆಗುತ್ತಿವೆ.ಇದರಿಂದಾಗಿ ಖಾಯಂ ನೌಕರರ ಸಂಖ್ಯೆ ಕಡಮೆ ಆಗುತ್ತಾ ಹೋಗುತ್ತಿದೆ. ಕಾರ್ಮಿಕ, ನೌಕರರ ಪರ ನಿಲ್ಲಬೇಕಿದ್ದ ಸರ್ಕಾರಗಳೇ ತಾವೇ ಮಾಡಿದ ಕಾನೂನು ಉಲ್ಲಂಘನೆ ಮಾಡುತ್ತಿವೆ. ಶ್ರಮಿಕ ವರ್ಗದವರಿಗೆ
ಬೆಲೆ ಕೊಡುತ್ತಿಲ್ಲ. ಗುಲಾಮಗಿರಿ ಜೀವಂತವಾಗಿಡಲು ಕಾನೂನು ರೂಪಿಸುತ್ತಿವೆ. ಇಂತಹ ಸಂದರ್ಭದಲ್ಲಿ  ಕಾರ್ಮಿಕರು ಅರ್ಥಮಾಡಿಕೊಂಡು ಸಮಸ್ಯೆಗಳ ಬಗ್ಗೆ ಹೋರಾಟ ಮಾಡಿ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ತಿಳಿಹೇಳಿದರು. 

ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ತಂದು ಕಾನೂನು ವ್ಯಾಪ್ತಿಯಲ್ಲಿಯೇ ಕಾರ್ಮಿಕರ ಶೋಷಣೆಮಾಡಲು  ಸರ್ಕಾರಗಳು ಅನುವುಮಾಡಿಕೊಡುತ್ತಿವೆ. ಕಾರ್ಮಿಕರನ್ನು ತಿರಸ್ಕಾರ, ನಿರ್ಲಕ್ಷದ ಜೊತೆಗೆ ಅಗೌರವ ತೋರಲಾಗುತ್ತಿದೆ. ಹೊರಗುತ್ತಿಗೆ ನೌಕರರಿಗೆ ಖಾಯಂ ನೌಕರರಿಗೆ ಸಿಗುವಂತಹ ಸೌಲಭ್ಯ ಸಿಗುತ್ತಿಲ್ಲ. ಇಡೀ ದೇಶದಲ್ಲಿಯೇ ಇಂದು ಇಂತಹ ಸ್ಥಿತಿ ಇದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌, ರಜೆ ಸೌಲಭ್ಯಗಳನ್ನು ನೀಡಬೇಕೆಂದು ಕಾನೂನಿನಲ್ಲಿ ಇದೆ. ಆದರೆ, ಅಧಿಕಾರಿಗಳು, ಗುತ್ತಿಗೆದಾರರು ಕಾನೂನು ಉಲ್ಲಂಘನೆ ಮಾಡಿ, ಕಾರ್ಮಿಕರ ಹೆಸರಿನಲ್ಲಿ ಸವಲತ್ತುಗಳ ಲೂಟಿ ಮಾಡುತ್ತಿದ್ದಾರೆ. ಇದರ ವಿರುದ್ಧ ಧ್ವನಿ ಎತ್ತಲು ಯಾರೂ ಸಿದ್ಧರಿಲ್ಲ. ಆದ್ದರಿಂದ ಯಾವುದೇ ಒಬ್ಬ ಕಾರ್ಮಿಕರಿಗೂ ಅನ್ಯಾಯವಾದಲ್ಲಿ ಎಲ್ಲರು ಒಗ್ಗಟ್ಟಿನಿಂದ ಹೋರಾಡಬೇಕು ಎಂದರು.

ದುಡಿಯುವ ವರ್ಗಕ್ಕೆ ಸ್ವಾತಂತ್ರ ಸಿಗುತ್ತಿಲ್ಲ. ಮಾಲಿಕರು, ಬಂಡವಾಳಶಾಹಿ, ಕೈಗಾರಿಕೋದ್ಯಮಿಗಳಿಗೆ ಮಾತ್ರ ಸ್ವಾತಂತ್ರ ಸಿಕ್ಕಿದೆ. ಇವರೆಲ್ಲರು ಕಾರ್ಮಿಕರನ್ನು ಶೋಷಣೆ ಮಾಡುತ್ತಾ ದೇಶವನ್ನು ಲೂಟಿ ಮಾಡುತ್ತಿದ್ದಾರೆ. ಆಡಳಿತಕ್ಕೆ ಬರುವ ಎಲ್ಲಾ ಸರ್ಕಾರಗಳು ಕಾರ್ಮಿಕರ, ಜನಸಮಾನ್ಯರ ಪರವಾಗಿಲ್ಲ. ದೇಶದಲ್ಲಿ ಭ್ರಷ್ಟಚಾರ, ಕಾರ್ಮಿಕರಿಗೆ ಅನ್ಯಾಯ, ಉದ್ಯೋಗವಿಲ್ಲದೆ ಯುವಕರು ಅಲೆದಾಟ ನಿಂತಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಲ್ಲುತ್ತಿಲ್ಲ. ರೈತರ ಸಾಲ ಮನ್ನಾವಾಗಿಲ್ಲ. ಇಂತಹ ಸಮಸ್ಯೆಗಳ ಬಗೆಹರಿಸುವುದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಾಗಲಿ ಮುಂದಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದಾವಣಗೆರೆ ವಿವಿ ಸಿ ಮತ್ತು ಡಿ ಗ್ರೂಪ್‌ ಹೊರಗುತ್ತಿಗೆ ನೌಕರರ ಸಂಘದ ಗೌರವ ಅಧ್ಯಕ್ಷ ಮಂಜುನಾಥ್‌ ಕೈದಾಳೆ ಮಾತನಾಡಿ, ಹೋರಾಟದ ಫಲವಾಗಿ ಕನಿಷ್ಠ ವೇತನ ದೊರೆತ್ತಿದ್ದು, ವಿವಿ ಹೊರಗುತ್ತಿಗೆ ನೌಕರರ ಸಂಘದೊಂದಿಗೆ ಎಐಯುಟಿಯುಸಿ ಸಂಘಟನೆಯ ಮುಖೇನಾ ವಿಶ್ವವಿದ್ಯಾಲಯ ಆವರಣದಲ್ಲಿ ಅನಿರ್ದಿಷ್ಟ ಹೋರಾಟದಲ್ಲಿ ಮಹಿಳೆಯರು ಭಾಗವಹಿಸಿದ್ದು, ಹೋರಾಟಕ್ಕೆ ಜಯ ಸಿಕ್ಕಿದೆ. ಮುಂದಿನ ದಿನಗಳಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಉಳಿದ ಸವಲತ್ತಿಗೆ ಹೋರಾಡೋಣ ಎಂದರು. 

ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಎಂ.ಎನ್‌.ಶ್ರೀರಾಮ್‌, ಮಂಜುನಾಥ್‌ ಕುಕ್ಕವಾಡ, ಎಲ್‌.ಎಚ್‌. ಪ್ರಕಾಶ್‌, ಆರ್‌.
ತಿಪ್ಪೇಶ್‌, ರುದ್ರೇಶ್‌, ಸಣ್ಣಕೊಟ್ರೇಗೌಡ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.