ಗೃಹಮಂಡಳಿ ನಿವೇಶನ ನಿರ್ಮಾಣಕ್ಕೆ ಜಾಗ ಸಿಗ್ತಿಲ್ಲ: ಸೋಮಣ್ಣ


Team Udayavani, Jun 16, 2020, 10:45 AM IST

ಗೃಹಮಂಡಳಿ ನಿವೇಶನ ನಿರ್ಮಾಣಕ್ಕೆ ಜಾಗ ಸಿಗ್ತಿಲ್ಲ: ಸೋಮಣ್ಣ

ಹರಿಹರ: ಶೇರಾಪುರದಲ್ಲಿ ಕೆಎಚ್‌ಬಿಯಿಂದ ಅಭಿವೃದ್ಧಿಪಡಿಸಲು ನಿಗದಿಪಡಿಸಿರುವ ಸ್ಥಳಕ್ಕೆ ವಸತಿ ಸಚಿವ ವಿ. ಸೋಮಣ್ಣ ಭೇಟಿ ನೀಡಿ ಪರಿಶೀಲಿಸಿದರು.

ಹರಿಹರ: ಕರ್ನಾಟಕ ಗೃಹ ನಿರ್ಮಾಣ ಮಂಡಳಿಯ ನಿವೇಶನಕ್ಕೆ ರಾಜ್ಯಾದ್ಯಂತ ಬೆಟ್ಟದಷ್ಟು ಅರ್ಜಿಗಳು ಬಂದಿದ್ದು, ಅದಕ್ಕೆ ತಕ್ಕಂತೆ ನಿವೇಶನ ನಿರ್ಮಿಸಲು
ಜಮೀನು ಸಿಗುತ್ತಿಲ್ಲ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು. ನಗರದ ಶೇರಾಪುರದಲ್ಲಿ ಕೆಎಚ್‌ಬಿಯಿಂದ ಅಭಿವೃದ್ಧಿಪಡಿಸಲು ನಿಗದಿಪಡಿಸಿರುವ ಜಮೀನಿಗೆ ಸೋಮವಾರ ಭೇಟಿ ನೀಡಿ ಮಾತನಾಡಿದ ಅವರು, ದುಬಾರಿ ಬೆಲೆಗಾದರೂ ಸರ್ಕಾರ ಜಮೀನು ಖರೀದಿಸಿ ರಾಜ್ಯದಲ್ಲಿನ ಬಡವರಿಗಾಗಿ 10 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿ ಮುಂದಿನ ಒಂದೂವರೆ ವರ್ಷದಲ್ಲಿ ವಿತರಿಸುವ ಗುರಿ ಹೊಂದಲಾಗಿದೆ ಎಂದರು.

ನಗರದ ಹೊಸ ಕೆಎಚ್‌ಬಿಯಲ್ಲಿ ನಿವೇಶನ ಪಡೆಯಲು ಸುಮಾರು 35, 000 ಸಾವಿರ ಅರ್ಜಿಗಳು ಬಂದಿದ್ದು, ಉದ್ದೇಶಿತ 54 ಎಕರೆಜಮೀನಿನಲ್ಲಿ ಕೇವಲ
800 ರಿಂದ 900 ನಿವೇಶನಗಳನ್ನು ಮಾತ್ರ ಮಾಡಲು ಸಾಧ್ಯ. ಇನ್ನೂ 100 ಎಕರೆ ಜಮೀನು ಖರೀದಿಸಲು ಸರ್ಕಾರ ಸಿದ್ಧವಿದ್ದು, ಅಕ್ಕ ಪಕ್ಕದ ಜಮೀನಿನ ಮಾಲೀಕರ ಮನವೊಲಿಸುವಂತೆ ಶಾಸಕ ಎಸ್‌. ರಾಮಪ್ಪ ಹಾಗೂ ಮಾಜಿ ಶಾಸಕ ಬಿ.ಪಿ. ಹರೀಶ್‌ ಅವರಿಗೆ ಸೂಚಿಸಿದರು. ರಾಜ್ಯದಲ್ಲಿ ಒಟ್ಟು 4535 ಎಕರೆ ಜಮೀನನ್ನು ನಿವೇಶನಕ್ಕಾಗಿ ರಾಜೀವ್‌ ಗಾಂಧಿ  ವಸತಿ ನಿಗಮಕ್ಕೆ ಹಸ್ತಾಂತರ ಮಾಡಿಸಿಕೊಂಡಿದ್ದು ಈ ಜಮೀನುಗಳಲ್ಲಿ 1.25 ಲಕ್ಷ ನಿವೇಶನಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ನೀಡುವ ಯೋಜನೆ ಹಾಕಿಕೊಂಡಿದ್ದೇವೆ. 19 ಲಕ್ಷ ಮನೆಗಳನ್ನು ನಿರ್ಮಿಸುವುದಾಗಿ ಹೇಳಿದ್ದ ಹಿಂದಿನ ಸರ್ಕಾರ ಇದಕ್ಕೆ ಬೇಕಾದ 28 ಸಾವಿರ ಕೋಟಿ ರೂ. ನೀಡಲಿಲ್ಲ. ನಮ್ಮ ಸರಕಾರ ಬಂದ ಕೇವಲ 9 ತಿಂಗಳಲ್ಲಿ 5.40 ಲಕ್ಷ ಮನೆ ನಿರ್ಮಾಣಕ್ಕೆ 8000 ಕೋಟಿ ರೂ. ಮೀಸಲಿಟ್ಟಿದ್ದು, ಮೊದಲ ಕಂತಾಗಿ 1300 ಕೋಟಿ ರೂ. ಬಿಡುಗಡೆ ಮಾಡಿದೆ. ಆವಾಸ್‌ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ 5.40 ಲಕ್ಷ ಮನೆ, ನಗರ ಪ್ರದೇಶದಲ್ಲಿ 4.60 ಲಕ್ಷಮನೆಗಳಿಗೆ ಹಣ ಬಿಡುಗಡೆ ಮಾಡಲು ಸರಕಾರ ಬದ್ಧವಾಗಿದೆ ಎಂದರು.

ಶಾಸಕ ಎಸ್‌. ರಾಮಪ್ಪ, ಮಾಜಿ ಶಾಸಕ ಬಿ.ಪಿ. ಹರೀಶ್‌, ಎಸ್‌.ಎಂ. ವೀರೇಶ್‌, ತಹಶೀಲ್ದಾರ್‌ ಕೆ.ಬಿ. ರಾಮಚಂದ್ರಪ್ಪ, ಪೌರಾಯುಕ್ತೆ ಎಸ್‌. ಲಕ್ಷ್ಮೀ, ಎಇಇ
ಬಿರಾದಾರ್‌ ಇತರರು ಇದ್ದರು.

ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆ
ಹರಿಹರ: ಬಡವರ ಹೆಸರಲ್ಲಿ ಮಾಡಬಾರದ್ದು ಮಾಡಿದರೆ ಆಗಬಾರದ್ದು ಆಗುತ್ತೆ ಎಂದು ಜಿಲ್ಲಾ ಕೊಳಚೆ ನಿರ್ಮೂಲನಾ ಮಂಡಳಿ ಸಿಬ್ಬಂದಿಗೆ ವಸತಿ ಸಚಿವ ವಿ. ಸೋಮಣ್ಣ ಹಿಗ್ಗಾ ಮುಗ್ಗಾ ತರಾಟೆ ತೆಗೆದುಕೊಂಡ ಘಟನೆ ಸೋಮವಾರ ನಡೆಯಿತು. ಇಲ್ಲಿನ ಕಾಳಿದಾಸ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕೊಳಚೆ ನಿರ್ಮೂಲನಾ ಮಂಡಳಿಯ ಕಾಮಗಾರಿಗಳನ್ನು ವಿಕ್ಷೀಸುವ ಸಂದರ್ಭದಲ್ಲಿ ಫಲಾನುಭವಿಗಳ ದೂರಿಗೆ ಸ್ಪಂದಿಸಿದ ಸಚಿವರು, ನಿವೃತ್ತಿ ನಂತರವೂ ಕಛೇರಿಯಲ್ಲಿ ಕಾರ್ಯ ನಿರ್ವಹಿಸುವ ಸಹಾಯಕ ಇಂಜಿನಿಯರ್‌ ಒಬ್ಬರಿಗೆ 10 ರೂ. ಬಿಲ್‌ಗೆ 100 ರೂ. ಬರೆಯುವುದು ನನಗೆ ತಿಳಿದಿದೆ. ಇನ್ನೊಮ್ಮೆ ಕಚೇರಿಯಲ್ಲಿ ಕಂಡರೆ ಎಫ್‌ಐಆರ್‌ ದಾಖಲಿಸಿ ಎಂದು ಸೂಚಿಸಿದರು.

ಬಡವರ ಹಣ ತಿಂದವರಿಗೆ ಬರಬಾರದ್ದು ಬರುತ್ತದೆ ಎಂದು ಎಚ್ಚರಿಸಿದ ಸಚಿವ ಸೋಮಣ್ಣ, ಕಾಮಗಾರಿ ನಿರ್ವಹಿಸುತ್ತಿರುವ ಅಧಿಕಾರಿಯನ್ನು ಬದಲಿಸುವಂತೆ ಮಂಡಳಿಯ ಅಧಿಕಾರಿಗಳಿಗೆ ಸೂಚಿಸಿದರು. ಮಂಡಳಿಯಿಂದ
ನಿರ್ಮಿಸುತ್ತಿರುವ ಮನೆಗಳಿಗೆ ಭೇಟಿ ನೀಡಿ ಗುಣಮಟ್ಟ ಪರೀಶಿಲಿಸಿದ ಅವರು, ಕಳಪೆ ಕಾಮಗಾರಿ ನಡೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ
ಮಾಡಲಾಗುವುದು ಎಂದು ಎಚ್ಚರಿಸಿದರು.

ಬೆಂಗಳೂರು ಬಿಬಿಎಂಪಿ ಮಾದರಿಯಲ್ಲಿ ಸ್ಥಳಿಯ ಸಂಸ್ಥೆಯ ಪರಮಾಧಿಕಾರ ಬಳಸಿಕೊಂಡು ನಗರಸಭೆ ವ್ಯಾಪ್ತಿಯ ಬಿ ಖಾತೆಯ ನಿವೇಶನ, ಮನೆಗಳನ್ನು ಸಕ್ರಮಗೊಳಿಸುವ ಮೂಲಕ ನಗರಸಭೆ ಆದಾಯ ಹೆಚ್ಚಿಸಿಕೊಳ್ಳಿ ಎಂದು ಪೌರಾಯುಕ್ತೆ ಎಸ್‌. ಲಕ್ಷ್ಮೀಅವರಿಗೆ ವಸತಿ ಸಚಿವರು ಸಲಹೆ
ನೀಡಿದರು. ನಗರದ ಆಸ್ತಿಗಳಿಗೆ ವಿಧಿಸುತ್ತಿರುವ ಸ್ಟಾಂಪ್‌ ಡ್ನೂಟಿ ದಾವಣಗೆರೆ ನಗರಕ್ಕಿಂತ ಹೆಚ್ಚಾಗಿದೆ ಎಂಬ ದೂರಿದೆ. ಕೂಡಲೇ ಸಭೆ ನಡೆಸಿ ಮುದ್ರಾಂಕ ಶುಲ್ಕ ಪರಿಷ್ಕರಿಸಿ ವರದಿ ಸಲ್ಲಿಸಿ. ಗುತ್ತೂರು ಸಮೀಪದ ಹೆಲಿಪ್ಯಾಡ್‌ ಬಳಿಯ 8.31 ಎಕರೆ ಜಮೀನಿನಲ್ಲಿ ಜಿ+2 ಮಾದರಿಯಲ್ಲಿ ವಸತಿ ಸಂಕೀರ್ಣ ನಿರ್ಮಾಣಕ್ಕೆ ನೀಲನಕ್ಷೆ ರೂಪಿಸಿ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಟಾಪ್ ನ್ಯೂಸ್

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.