ಜ. 5ರವರೆಗೆ ನೀರು ಹರಿಸದಿರಿ


Team Udayavani, Nov 8, 2017, 7:29 PM IST

08-41.jpg

ದಾವಣಗೆರೆ: ಯಾವುದೇ ಕಾರಣಕ್ಕೂ 2018ರ ಜ.5 ವರೆಗೆ ಭದ್ರಾ ನಾಲೆಯಲ್ಲಿ ಹರಿಸಬಾರದು. ಒಂದೊಮ್ಮೆ ನೀರು
ಹರಿಸಿದರೆ ಹೋರಾಟ ನಡೆಸಲಾಗುವುದು ಎಂದು ಭಾರತೀಯ ರೈತ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್‌ ಎಚ್ಚರಿಸಿದ್ದಾರೆ.

ಈಚೆಗೆ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಹಸಿ ಇದೆ. ಮೇಲಾಗಿ ಈಗ ನೀರು ಹರಿಸುವ ಅಗತ್ಯ, ಅವಶ್ಯಕತೆ ಇಲ್ಲ. ಹಾಗಾಗಿ 2018ರ ಜ. 5ರ ನಂತರವೇ ನಾಲೆಯಲ್ಲಿ ನೀರು ಹರಿಸುವ ಮೂಲಕ 5ನೇ ಬಾರಿಗಾದರೂ ಭತ್ತ ಬೆಳೆಯುವುದಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಈ ತಿಂಗಳು, ಮುಂದಿನ ಡಿಸೆಂಬರ್‌ ನಲ್ಲಿ ನೀರು ಹರಿಸಿ, ಮುಂದಿನ ಬೇಸಿಗೆ ಭತ್ತಕ್ಕೆ ನೀರು ಕೊಡದೇ ಇರುವಂತಹ ಕೆಲಸ ಮಾಡಲೇಬಾರದು. ಆದಾಗ್ಯೂ ನ. 10 ರಿಂದ ನಾಲೆಯಲ್ಲಿ ನೀರು ಹರಿಸುವ ಬಗ್ಗೆ ಕಾಡಾ ಸಮಿತಿ ನಿರ್ಧರಿಸಿದೆ. ಒಂದೊಮ್ಮೆ ನೀರು ಹರಿಸಿದಲ್ಲಿ ಹೋರಾಟ ಮಾಡುವುದರಲ್ಲಿ ಎರಡು ಮಾತಿಲ್ಲ. ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು. 

ಮಳೆಯ ಕೊರತೆ, ಅತಿಯಾದ ಮಳೆಯ ತೊಂದರೆ ನಡುವೆಯೂ ಮೆಕ್ಕೆಜೋಳ ಬೆಳೆಯಲಾಗಿದೆ. ಈಗಾಗಲೇ ಮಾರುಕಟ್ಟೆಗೆ ಬರುತ್ತಿದೆ. ಪ್ರತಿ ಕ್ವಿಂಟಾಲ್‌ ಗೆ 1 ಸಾವಿರಕ್ಕಿಂತಲೂ ಕಡಿಮೆ ಬೆಲೆ ಇದೆ. ರೈತರಿಗೆ ಸಾಕಷ್ಟು ನಷ್ಟವಾಗುತ್ತಿದೆ. ಹಾಗಾಗಿ ರಾಜ್ಯ ಸರ್ಕಾರ ಕೇಂದ್ರದತ್ತ ಬೊಟ್ಟು ಮಾಡದೆ, ಕೂಡಲೇ ಎಲ್ಲಾ ಕಡೆ ಖರೀದಿ ಕೇಂದ್ರ ಪ್ರಾರಂಭಿಸಿ, ಮೆಕ್ಕೆಜೋಳ ಇತರೆ ಬೆಳೆ ಖರೀದಿಸಿ, ರೈತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಅಧಿಕಾರವಧಿಯಲ್ಲಿ 1 ಸಾವಿರ ಕೋಟಿ ಅನುದಾನದ ಆವರ್ತ ನಿಧಿ ಪ್ರಾರಂಭಿಸಿ, ಮೆಕ್ಕೆಜೋಳ ಇತರೆ ಬೆಳೆ ಖರೀದಿ ಮಾಡಲಾಗಿತ್ತು. ಸರ್ಕಾರ ಖರೀದಿ ಮಾಡಿದ್ದ ಬೆಳೆಯನ್ನು ಮಾರಾಟ ಮಾಡಿದ್ದರಿಂದ ಲಾಭವೂ ಸಿಕ್ಕಿತ್ತು. ಸರ್ಕಾರ ಕೂಡಲೇ ಖರೀದಿ ಕೇಂದ್ರ ಪ್ರಾರಂಭಿಸಿ, ಮೆಕ್ಕೆಜೋಳ, ಇತರೆ ಬೆಳೆ ಖರೀದಿಸಬೇಕು ಎಂದು ಒತ್ತಾಯಿಸಿದರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರೊ| ಸಿ. ನರಸಿಂಹಪ್ಪ ಮಾತನಾಡಿ, ಭದ್ರಾ ಜಲಾಶಯದಲ್ಲಿ 140 ಅಡಿ ನೀರಿದ್ದಾಗಲೆ ಭತ್ತದ ಬೆಳೆಗೆ ಕೊಡಬೇಕು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಮನವಿ ಮಾಡಲಾಗಿತ್ತು. ಆದರೆ, ಅವರು ಸ್ಪಂದಿಸಲೇ ಇಲ್ಲ. ಕೆರೆ ತುಂಬಿಸಲಿಕ್ಕೆ, ಅಡಕೆ ತೋಟಕ್ಕೆಂದು ಈಗಾಗಲೇ ನೀರು ಹರಿಸಲಾಗಿದೆ. ಯಾವುದೇ ಸಭೆ ನಡೆಸದೆ ನ. 10 ರಿಂದ ನೀರು ಹರಿಸುವುದಕ್ಕೆ ಕಾಡಾ ಸಮಿತಿ ನಿರ್ಧರಿಸಿದೆ. ಇಂತಹ ಖಂಡನೀಯ, ಹೇಯ, ರೈತ ವಿರೋಧಿ ತೀರ್ಮಾನದ ಮೂಲಕ ಕಾಡಾ ಸಮಿತಿ ದಾವಣಗೆರೆ ಭಾಗದ ಅಚ್ಚುಕಟ್ಟುದಾರರನ್ನು ಅಕ್ಷರಶಃ ಕಾಡುತ್ತಿದೆ ಎಂದು ದೂರಿದರು.

ನವೆಂಬರ್‌, ಡಿಸೆಂಬರ್‌ನಲ್ಲಿ ನಾಲೆಯಲ್ಲಿ ನೀರು ಹರಿಸುವ ಮೂಲಕ ಈ ಬಾರಿಯೂ ಬೇಸಿಗೆ ಭತ್ತಕ್ಕೆ ನೀರು ಕೊಡದೇ ಇರುವ ಯತ್ನ ನಡೆಯುತ್ತಿದೆ. 5ನೇ ಬಾರಿಯೂ ಬೇಸಿಗೆ ಭತ್ತಕ್ಕೆ ನೀರು ಕೊಡದೇ ಇದ್ದರೆ ದಾವಣಗೆರೆ ಆರ್ಥಿಕ ಪರಿಸ್ಥಿತಿಯೇ ಅಲ್ಲೋಲ ಕಲ್ಲೋಲವಾಗಲಿದೆ. ಬೇಸಿಗೆ ಭತ್ತಕ್ಕೆ ನೀರು ಕೊಡುವ ಉದ್ದೇಶ ಮುಂದಿಟ್ಟುಕೊಂಡು ಯಾವುದೇ ಕಾರಣಕ್ಕೂ 2018 ರ ಜ. 5ರ ವರೆಗೆ ನೀರು ಹರಿಸಬಾರದು. ನೀರು ಹರಿಸದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಒಕ್ಕೂಟದ ಎಚ್‌.ಆರ್‌. ಲಿಂಗರಾಜ್‌ ಶಾಮನೂರು, ಬಿ.ಎಂ. ಸತೀಶ್‌, ಧನಂಜಯ ಕಡ್ಲೆಬಾಳು, ಕುಂದುವಾಡ ಮಹೇಶ್‌, ಶಿವರಾಜ್‌ ಪಾಟೀಲ್‌ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.