ಹೆಸರು ನೋಂದಾಯಿಸಲು ನ.6 ಕೊನೆ ದಿನ


Team Udayavani, Oct 15, 2019, 11:00 AM IST

dg-tdy-2

ದಾವಣಗೆರೆ: ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಗೆ ಪದವೀಧರರು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ನ. 6 ಕೊನೆಯ ದಿನವಾಗಿದ್ದು, ಅರ್ಹರು ಅಗತ್ಯ ದಾಖಲಾತಿ ಒದಗಿಸಿ, ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ತಿಳಿಸಿದ್ದಾರೆ.

ಸೋಮವಾರ, ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿ ಸಿದ್ಧತೆ ಸಂಬಂಧಿ ಸಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿ, ಪದವೀಧರರ ಕ್ಷೇತ್ರದ ಚುನಾವಣೆಯ ವಿಶೇಷವೆಂದರೆ ಪ್ರತಿ ಚುನಾವಣೆಯಲ್ಲಿ ಪದವೀಧರರು ನೋಂದಾಯಿಸಿಕೊಳ್ಳಬೇಕು.

ಹಿಂದಿನ ಚುನಾವಣೆಯಲ್ಲಿ ನೋಂದಾಯಿಸಿಕೊಂಡಿದ್ದರೆ ಅದು ಈ ಬಾರಿಯ ಚುನಾವಣೆಗೆ ಅನ್ವಯಿಸುವುದಿಲ್ಲ. ಹಾಗಾಗಿ ನವೆಂಬರ್‌ 6ರ ಒಳಗೆ ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರು ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕೆಂದರು. ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರುಗಳನ್ನು ಅ.1ರಿಂದ ನೋಂದಣಿ ಮಾಡಲಾಗುತ್ತಿದೆ. ಪದವೀಧರರು ನಮೂನೆ-18 ಅರ್ಜಿ ಭರ್ತಿ ಮಾಡಿ ಸಲ್ಲಿಸಲು ನ.6 ಅಂತಿಮ ದಿನವಾಗಿರುತ್ತದೆ. ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಕರಡು ಪಟ್ಟಿಯನ್ನು ನ. 19 ಹಾಗೂ ಅಂತಿಮ ಮತದಾರರ ಪರಿಷ್ಕರಣಾ ಪಟ್ಟಿಯನ್ನು ಡಿ. 30ರಂದು ಪ್ರಕಟಿಸಲಾಗುವುದು ಎಂದರು.

ಆಗ್ನೇಯ ಪದವೀಧರರ ಕ್ಷೇತ್ರದ ವ್ಯಾಪ್ತಿಗೆ ಜಿಲ್ಲೆಯ ದಾವಣಗೆರೆ, ಹರಿಹರ ಮತ್ತು ಜಗಳೂರು ತಾಲೂಕುಗಳು ಒಳಪಡಲಿದ್ದು, ಮತದಾರರ ಪಟ್ಟಿ ಸಿದ್ಧತೆಗೆ ಸಂಬಂಧಿ ಸಿದಂತೆ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು. ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಗೆ ಸೇರ್ಪಡೆಗೆ 1-11-2019ಕ್ಕಿಂತ ಮೂರು ವರ್ಷದ ಹಿಂದೆ ಪದವೀಧರರಾಗಿರಬೇಕು. ಪದವಿ ಪೂರೈಸಿದ ಬಗ್ಗೆ ದೃಢೀಕೃತ ಅಂಕಪಟ್ಟಿ, ಸರ್ಕಾರಿ ನೌಕರರಾಗಿದ್ದಲ್ಲಿ ಕಚೇರಿಯ ಪತ್ರಾಂಕಿತ ಅಧಿಕಾರಿಯಿಂದ ಮೂರನೇ ಅನುಸೂಚಿ ನಮೂನೆಯನ್ನು ದೃಢೀಕರಿಸಿದ ಪತ್ರ ಹಾಗೂ ಸ್ಥಳೀಯ ನಿವಾಸಿ ಬಗ್ಗೆ ದಾಖಲಾತಿ ಪತ್ರ ಸಲ್ಲಿಸಬೇಕು. ನಮೂನೆ 18 ಅರ್ಜಿಯನ್ನು ಭರ್ತಿಮಾಡಿ ದಾವಣಗೆರೆ, ಹರಿಹರ ಮತ್ತು ಜಗಳೂರು ತಾಲೂಕು ಕಚೇರಿಗೆ ಹಾಗೂ ದಾವಣಗೆರೆ ನಗರ ವ್ಯಾಪ್ತಿಯಲ್ಲಿರುವವರು ಮಹಾನಗರಪಾಲಿಕೆಯಲ್ಲಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.  ಮುಖಂಡರ ದೂರು: ಸಭೆಯಲ್ಲಿದ್ದ ಬಿಜೆಪಿಯ ಪ್ರಭು ಹಾಗೂ ಬಿಎಸ್‌ಪಿಯ ಎಚ್‌. ಮಲ್ಲೇಶ್‌, ಬಿಎಲ್‌ಓ ಗಳು ಮನೆ ಮನೆ ಭೇಟಿ ನೀಡಿ, ಮತದಾರರ ಪಟ್ಟಿ ಸಮರ್ಪಕವಾಗಿ ಪರಿಶೀಲನೆ ನಡೆಸುತ್ತಿಲ್ಲ ಎಂದು ದೂರಿದರು.

ಜಿಲ್ಲಾ ಧಿಕಾರಿಗಳು ಪ್ರತಿಕ್ರಿಯಿಸಿ, ಬಿಎಲ್‌ಓಗಳು ಕಡ್ಡಾಯವಾಗಿ ಮನೆ ಮನೆ ಭೇಟಿ ನೀಡಿ ಮತದಾರರ ಪಟ್ಟಿಯ ಪರಿಶೀಲನೆ ನಡೆಸಬೇಕು ಹಾಗೂ ಮತದಾರರ ಪಟ್ಟಿಗೆ ತಿದ್ದುಪಡಿಗೆ ಸಂಬಂಧಿಸಿದ ಅರ್ಜಿ ನಮೂನೆಗಳನ್ನು ವಿತರಿಸಬೇಕೆಂದು ಸೂಚಿಸಿದರು.

ಜಿ.ಪಂ. ಸಿಇಓ ಪದ್ಮ ಬಸವಂತಪ್ಪ, ಪ್ರಭಾರ ಅಪರ ಜಿಲ್ಲಾಧಿಕಾರಿ ನಜ್ಮಾ, ಪಾಲಿಕೆ ಆಯುಕ್ತ ಮಂಜುನಾಥ ಬಳ್ಳಾರಿ, ಡಿಡಿಪಿಐ ಸಿ.ಆರ್‌.ಪರಮೇಶ್ವರಪ್ಪ, ಡಿಡಿಪಿಯು ನಿರಂಜನ, ಚುನಾವಣಾ ತಹಶೀಲ್ದಾರ್‌ ಪ್ರಸಾದ್‌, ಪಾಲಿಕೆಯ ಗದಿಗೇಶ್‌, ಇತರೆ ಅಧಿ ಕಾರಿಗಳು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.