ಈಗ ಹಿಂಗಾರು ಬೆಳೆ ವೈಫಲ್ಯ ದರ್ಶನ


Team Udayavani, Feb 28, 2019, 7:52 AM IST

gul-5.jpg

ದಾವಣಗೆರೆ: ಕಳೆದ ಮೂರ್‍ನಾಲ್ಕು ವರ್ಷದಿಂದ ಬರ ಪರಿಸ್ಥಿತಿಗೆ ಸಿಕ್ಕು ತತ್ತರಿಸಿರುವ ಜಿಲ್ಲೆಯ ರೈತರ ಸ್ಥಿತಿ ಹಾಗೂ ಬೆಳೆ ವೈಫಲ್ಯದ ಬಗ್ಗೆ ಕೇಂದ್ರ ಅಧ್ಯಯನ ತಂಡಕ್ಕೆ ಜಿಲ್ಲಾಡಳಿತ ಮನವರಿಕೆ ಮಾಡಿಕೊಟ್ಟಿದೆ.

ಕುಡಿಯುವ ನೀರಿನ ಸಮಸ್ಯೆ, ಅನಾವೃಷ್ಟಿಯಿಂದಾದ ಹಿಂಗಾರು ಬೆಳೆ ವಿಫಲತೆ ಕುರಿತು ಅಧ್ಯಯನಕ್ಕಾಗಿ ಬುಧವಾರ ಜಿಲ್ಲೆಯ ಜಗಳೂರು ಹಾಗೂ ದಾವಣಗೆರೆ ತಾಲೂಕಿನ ಕೆಲವು ಜಮೀನು, ಅಡಕೆ ತೋಟ ಹಾಗೂ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಕೇಂದ್ರ ಸರ್ಕಾರದ ಡಿಎಸಿ ಆ್ಯಂಡ್‌ ಎಫ್‌ಡಬ್ಲ್ಯೂ ಇಲಾಖೆ ಜಂಟಿ ಕಾರ್ಯದರ್ಶಿ ಡಾ| ಅಭಿಲಾಕ್ಷ ಲಿಖೀ ನೇತೃತ್ವದ ಮೂವರನ್ನೊಳಗೊಂಡ ತಂಡಕ್ಕೆ ಜಿಲ್ಲಾಡಳಿತವಲ್ಲದೇ ರೈತರು ಸಹ ತಮ್ಮ ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟರು.

ಈಗಾಗಲೇ ಜಿಲ್ಲೆಯಲ್ಲಿ ಕಳೆದ ಮುಂಗಾರು ಬೆಳೆ ಸಿಗದೇ ಸಂಕಷ್ಟಕ್ಕೀಡಾದ ರೈತರಿಗೆ ಮಳೆ ಕೊರತೆಯಿಂದಾಗಿ ಹಿಂಗಾರು ಸಹ ಕೈಕೊಟ್ಟಿದ್ದು, ಜಮೀನಿನಲ್ಲಿ ಒಣಗಿದ ಜೋಳ, ಅಡಕೆ ತೋಟ, ಗ್ರಾಮಗಳಲ್ಲಿ ಜನ-ಜಾನುವಾರುಗಳಿಗೆ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ಕೇಂದ್ರದ ತಂಡಕ್ಕೆ ದರ್ಶನವಾಯಿತು.

ಮಧ್ಯಾಹ್ನ ಚಿತ್ರದುರ್ಗ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿ, ದೊಣೆಹಳ್ಳಿ ಮಾರ್ಗದಲ್ಲಿ ಜಿಲ್ಲೆ ಪ್ರವೇಶಿಸಿದ ಅಧ್ಯಯನ ತಂಡ, ಜಗಳೂರು ತಾಲೂಕಿನ ಉದ್ದಗಟ್ಟ ಬಳಿ ಮುಸ್ಟೂರು ಶ್ರೀಓಂಕಾರೇಶ್ವರ ಮಠದ ಜಮೀನಿನಲ್ಲಿ ಅನಾವೃಷ್ಟಿಯಿಂದ ಒಣಗಿದ ಜೋಳ ವೀಕ್ಷಿಸಿತು. 4 ಎಕರೆ ಜಮೀನಲ್ಲಿ ಜೋಳ ಸರಿಯಾಗಿ ತೆನೆಗಟ್ಟದೇ ಇರುವುದನ್ನು ನೋಡಿದ ಡಾ| ಅಭಿಲಾಕ್ಷ ಲಿಖೀ ಅವರಿಗೆ ಬೆಳೆ ವೈಫಲ್ಯದ ಬಗ್ಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್‌ ಮಾಹಿತಿ ನೀಡಿದರು.

ಇದೇ ವೇಳೆ ಸ್ಥಳದಲ್ಲಿದ್ದ ರೈತ ಸಂಘ (ಹುಚ್ಚವ್ವನಹಳ್ಳಿ ಮಂಜುನಾಥ್‌ ಬಣ)ದ ಜಿರಂಜೀವಿ, ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ತೀವ್ರವಾಗಿದೆ. ಹೆಣ್ಣು ಮಕ್ಕಳು ಬೆಳಗಿನ ಜಾವ ಎದ್ದು ಕೊಡಪಾನ ಹಿಡಿದು ಕೊಂಡು ನೀರಿಗಾಗಿ ಕಾಯಬೇಕಿದೆ. ಇನ್ನು ಜನರಿಗೆ ಕುಡಿಯಲು ನೀರಿಲ್ಲ ಅಂದಮೇಲೆ ಜಾನುವಾರುಗಳಿಗೆ ಎಲ್ಲಿಂದ ನೀರು ವ್ಯವಸ್ಥೆ ಮಾಡಬೇಕು. ಇನ್ನು ಗೋಶಾಲೆ ಪ್ರಾರಂಭಿಸಲು ಹಲವಾರು ಬಾರಿ ಚಳವಳಿ ಮಾಡಿ ಜಿಲ್ಲಾಡಳಿತದ ಗಮನ ಸೆಳೆಯಲಾಗಿದೆ. ಆದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ.

ನಾವು ನಾಲ್ಕು ವರ್ಷದಿಂದ ಸತತವಾಗಿ ಬರಗಾಲ ಎದುರಿಸುತ್ತಿದ್ದೇವೆ. ಮೂರು ವರ್ಷದಿಂದ ಫಸಲ್‌ ಬಿಮಾ ಯೋಜನೆಗೆ ಹಣ ಪಾವತಿಸಿದರೂ ನಮಗೆ ಯಾವುದೇ ಪರಿಹಾರ ಬಂದಿಲ್ಲ ಎಂದು ದೂರಿದಾಗ, ಡಾ| ಅಭಿಲಾಕ್ಷ ಲಿಖೀ, ನಿಮ್ಮ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿ ಭೇಟಿ ಮಾಡಿ, ತಿಳಿಸಿ ಎಂದರು. 

ಅಲ್ಲಿಂದ ತೆರಳಲು ಅನುವಾಗುತ್ತಿದ್ದ ಅಧಿಕಾರಿಗಳ ತಂಡವನ್ನು ಭರಮಸಮುದ್ರ ಕೆರೆ ನೀರು ಹರಿಯದ ಸಮಸ್ಯೆ ತೋರಿಸಲು ಕರೆದೊಯ್ದ ಗ್ರಾಮಸ್ಥರು, ಕೆರೆಗೆ ನೀರು ಬಂದಲ್ಲಿ 30 ಹಳ್ಳಿಗಳಗೆ ಅನುಕೂಲವಾಗಲಿದೆ. ಕ್ಯಾನಲ್‌ನ ಅರ್ಧ ಕಾಮಗಾರಿಯಿಂದಾಗಿ ಕೆರೆಗೆ ನೀರೇ ಹರಿದು ಬರುತ್ತಿಲ್ಲ. ಜನ-ಜಾನುವಾರುಗಳಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ಹೇಳಿದಾಗ, ಆ ಬಗ್ಗೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸುವಂತೆ ತಿಳಿಸಿದರು.

ಭೋಜನದ ನಂತರ ಜಗಳೂರು ತಾಲೂಕಿನ ರಂಗಾಪುರ ಗ್ರಾಮಕ್ಕೆ ಭೇಟಿ ನೀಡಿದ ತಂಡ, ಅಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ವೀಕ್ಷಿಸಿ, ನೀರಿನ ಲಭ್ಯತೆ, ಅದರ ಗುಣಮಟ್ಟ, ಘಟಕ ನಿರ್ವಹಣೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಿತು. ಟ್ಯಾಂಕರ್‌ನಲ್ಲಿ ನೀರು ತಂದು, ಅದನ್ನು ಶುದ್ಧೀಕರಿಸಿ, ಕ್ಯಾನ್‌ ನೀರಿಗೆ ಕನಿಷ್ಠ ರೂ. ವಿಧಿಸಲಾಗುತ್ತಿರುವ ಬಗ್ಗೆ ಮಾಹಿತಿ ನೀಡಿದಾಗ, ನೀರಿಗೆ ಜನರು ಹಣ ಕೊಡುತ್ತಾರಾ? ಅವರಿಗೆ ಆ ಸಾಮರ್ಥ್ಯ ಇದೆಯೇ ಎಂದು ಕೇಂದ್ರ ತಂಡದವರು ಪ್ರಶ್ನಿಸಿದಾಗ, ನಾಮಿನಲ್‌ ಛಾರ್ಜ್‌ ತೆಗೆದುಕೊಳ್ಳುವುದರಿಂದ ಜನರು ಕೊಡುತ್ತಾರೆ ಎಂದು ಅಧಿಕಾರಿ ಹೇಳಿದರು.

ಅಲ್ಲಿಂದ ತಂಡ ಬಿಳಿಚೊಡು ಗ್ರಾಮದ ಬಳಿ ಶರಣಪ್ಪ ಎಂಬುವರ 4.6 ಎಕರೆ ಅಡಕೆ ತೋಟಕ್ಕೆ ಭೇಟಿ ನೀಡಿದಾಗ ನೀರಿಲ್ಲದೆ ಅಡಕೆ ಮರಗಳು ಒಣಗಿರುವುದು ತಂಡಕ್ಕೆ ಗೋಚರಿಸಿತು. ಪಕ್ಕದಲ್ಲೇ ಇದ್ದ ಮತ್ತೂಬ್ಬರ ಅಡಕೆ ತೋಟ ಹಸಿರಾಗಿರುವುದನ್ನು ನೋಡಿದ ಅಧ್ಯಯನ ತಂಡದ ಲಿಖೀ, ನಿಮ್ಮ ತೋಟ ಒಣಗಿದ್ದರೆ, ಅವರ ತೋಟ ಚೆನ್ನಾಗಿದೆಯಲ್ಲಾ, ಅದು ಹೇಗೆ ಎಂಬುದಾಗಿ ಪ್ರಶ್ನಿಸಿದರು. ಆಗ ರೈತ ಶರಣಪ್ಪ, ತೆಂಗಿನ ಮರಕ್ಕೆ ಪ್ರತಿದಿನ 50 ಲೀಟರ್‌ ಹಾಗೂ ಅಡಕೆ ಮರಕ್ಕೆ 20 ಲೀಟರ್‌ ನೀರಿನ ಅವಶ್ಯಕತೆ ಇದೆ. ಕೊಳವೆಬಾವಿಯಲ್ಲಿ ಅಂತರ್ಜಲ ಬತ್ತಿರುವುದರಿಂದ ತೋಟ ಒಣಗಿದೆ. 

ಮತ್ತೂಂದು ತೋಟದ ಮಾಲೀಕರು, ಕೃಷಿಹೊಂಡ ನಿರ್ಮಿಸಿಕೊಂಡಿದ್ದು, ಅದನ್ನು ಟ್ಯಾಂಕರ್‌ ನೀರಿನಿಂದ ತುಂಬಿಸುತ್ತಾರೆ. ಒಂದು ಟ್ಯಾಂಕರ್‌ಗೆ 800 ರೂ. ನಂತೆ ಪ್ರತಿದಿನ 8 ಟ್ಯಾಂಕರ್‌ ನೀರು ತರಿಸುತ್ತಾರೆ. ಆದ್ದರಿಂದ ಆ ತೋಟ ಉಳಿದುಕೊಂಡಿದೆ. ನನಗೆ ಟ್ಯಾಂಕರ್‌ ನೀರು ತರಿಸುವ ಆರ್ಥಿಕ ಶಕ್ತಿ ಇಲ್ಲ. ಮೇಲಾಗಿ 1000 ಅಡಿ ಕೊರೆದರೂ ನೀರು ಸಿಗಲ್ಲ ಎಂದು ಹೇಳಿದರು. 

ನಂತರ ತಂಡ ದಾವಣಗೆರೆ ಜಿಲ್ಲೆಯ ಬೋರಗೊಂಡನಹಳ್ಳಿಗೆ ಭೇಟಿ ನೀಡಿ, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿತು. ಕೇಂದ್ರ ತಂಡದ ಇನ್ನಿಬ್ಬರು ಅಧಿಕಾರಿಗಳಾದ ಬಿ.ಕೆ. ಶ್ರೀವಾತ್ಸವ ಹಾಗೂ ಬಿ.ಸಿ. ಶರ್ಮಾ ಇದ್ದರು. ಜಿಲ್ಲಾಧಿಕಾರಿ ಜಿ.ಎನ್‌. ಶಿವಮೂರ್ತಿ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಚ್‌.ಬಸವರಾಜೇಂದ್ರ, ಉಪ ವಿಭಾಗಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಕೃಷಿ ಇಲಾಖೆ ಜಂಟಿ ಕಾರ್ಯದರ್ಶಿ ಶರಣಪ್ಪ ಮುದಗಲ್‌, ಜಗಳೂರು ತಹಶೀಲ್ದಾರ್‌ ತಿಮ್ಮಣ್ಣ ಹುಲ್ಲುಮನೆ ತಂಡಕ್ಕೆ ಬರ ಪರಿಸ್ಥಿತಿ ಬಗ್ಗೆ ಅಗತ್ಯ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.