ಪುನೀತ್‌ ರಾಜ್‌ಕುಮಾರ್‌ ನಿಜವಾದ ಜನನಾಯಕ: ಶ್ರೀ


Team Udayavani, Nov 15, 2021, 1:45 PM IST

ಪುನೀತ್‌ ರಾಜ್‌ಕುಮಾರ್‌ ನಿಜವಾದ ಜನನಾಯಕ: ಶ್ರೀ

ದಾವಣಗೆರೆ: ಈಚೆಗೆ ನಿಧನರಾದ ಚಿತ್ರನಟ ಪುನೀತ್‌ ರಾಜ್‌ಕುಮಾರ್‌ ನಿಜವಾದ ಜನನಾಯಕ ಆಗಿದ್ದರು ಎಂದು ದಾವಣಗೆರೆ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಸ್ಮರಿಸಿದರು.

ದಾವಣಗೆರೆ ಜಿಲ್ಲೆ ವಾದ್ಯಗೋಷ್ಠಿ ಕಲಾವಿದರ ಸಂಘದ ವತಿಯಿಂದ ಶಿವಯೋಗಿ ರಂಗಮಂದಿರದಲ್ಲಿ ಆಯೋಜಿಸಿದ್ದ ಅಪ್ಪು ಗೀತ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿನಿಮಾದಲ್ಲಿ ಬಣ್ಣ ಹಾಕಿಕೊಂಡು ನಾಯಕನಾಗುವುದು ಬಹಳ ಸುಲಭ. ಆದರೆ, ನಿಜವಾದ ಜನ ನಾಯಕನಾಗುವುದು ಕಷ್ಟ. ಅದಕ್ಕೆ ಅಪವಾದ ಎನ್ನುವಂತೆ ಪುನೀತ್‌ ರಾಜಕುಮಾರ್‌ ಅವರು ನಿಜವಾದ ಜನನಾಯಕನಾಗಿ ಬೆಳೆದರು ಎಂದು ತಿಳಿಸಿದರು.

ಪುನೀತ್‌ ರಾಜ್‌ಕುಮಾರ್‌ ಅವರು ಬಾಲ್ಯದಿಂದಲೇ ನಟನೆ ಮಾಡುತ್ತ ಹಲವಾರು ಚಿತ್ರಗಳ ಮಾಡುವ ಮೂಲಕ ನಾಡಿನ ಪ್ರಶಂಸೆ ಪಡೆದಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ ನಟನೆಯ ಜೊತೆಗೆ ಅತ್ಯುತ್ತಮ ಸಮಾಜಮುಖೀ ಕೆಲಸಗಳು ಮಾಡುವ ಮೂಲಕ ಸಾರ್ಥಕತೆ ಬದುಕ ಸಾಗಿಸಿದ್ದಾರೆ. ಈಗ ಅವರು ನಮ್ಮೊಂದಿಗೆ ಭೌತಿಕವಾಗಿ ಇಲ್ಲ. ಆದರೆ, ಎಲ್ಲರ ಹೃದಯದಲ್ಲಿ ಪೂಜಿಸಲ್ಪಡುತ್ತಿದ್ದಾರೆ. ಮಾನವರಾಗಿ ಜನಿಸಿದ ಮೇಲೆ ಬದುಕಿದರೆ ಹೀಗೆ ಬದುಕಬೇಕು ಎಂಬುದ ತೋರಿಸಿ ಕೊಟ್ಟಿದ್ದಾರೆ. ಪ್ರತಿಯೊಬ್ಬರಿಗೆ ಮಾದರಿಯಾಗಿದ್ದಾರೆ ಎಂದು ತಿಳಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ. ನಾರಾಯಣಗೌಡ ಬಣ) ಜಿಲ್ಲಾ ಅಧ್ಯಕ್ಷ ಎಂ.ಎಸ್‌. ರಾಮೇಗೌಡ ಮಾತನಾಡಿ ಒಬ್ಬ ಕಲಾವಿದ ಹೇಗೆ ಇರಬೇಕು ಎಂಬುದನ್ನ ಪುನೀತ್‌ ರಾಜ್‌ಕುಮಾರ್‌ ತೋರಿಸಿಕೊಟ್ಟು ಹೋಗಿದ್ದಾರೆ. ಅಪ್ಪು ಅವರು ಎಲ್ಲರನ್ನೂ ಅಪ್ಪಿಕೊಳ್ಳುವ ಮನಸ್ಸು ಮತ್ತು ಒಪ್ಪಿಕೊಳ್ಳುವ ಹೃದಯ ಶ್ರೀಮಂತಿಕೆಯುಳ್ಳ ಮಹಾನ್‌ ಕಲಾವಿದ. ಪುನೀತ್‌ ರಾಜಕುಮಾರ್‌ ಅವರು ಮಾಡಿದ ಸಾಧನೆ ದೇಶಕ್ಕೆ ಮಾದರಿಯಾಗಿದೆ. ಎಲ್ಲ ರಾಜಕಾರಣಿಗಳು ಅಂತಹ ಮಾದರಿ ಕೆಲಸ ಮಾಡಿದರೆ ಭಾರತದಲ್ಲಿ ಬಡತನ ನಿರ್ಮೂಲನೆ ಮಾಡಲು ಸಹಕಾರವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಇಂದಿನ ಯುವ ಜನಾಂಗಕ್ಕೆ ಮಾದರಿಯಾಗಿರುವ ಅಪ್ಪು ಅವರು ಇನ್ನು ಬಹಳ ಕಾಲ ನಮ್ಮೊಂದಿಗೆ ಇರಬೇಕಿತ್ತು. ಬಾಳಿ ಬದುಕ ಬೇಕಾಗಿತ್ತು. ಸಾವಿರಾರು ಜನರಿಗೆ ಬದುಕು ಕಟ್ಟಿಕೊಟ್ಟ ಪುನೀತ್‌ ರಾಜಕುಮಾರ್‌ ಅವರು ಎಲ್ಲರಿಗೂ ಮಾರ್ಗದರ್ಶಿ. ತಂದೆ ರಾಜಕುಮಾರ್‌ ಹೆಸರು ಮಾಡಿದರೆ. ಮಗ ಪುನೀತ್‌ ರಾಜ್‌ಕುಮಾರ್‌ ಮತ್ತೂಂದು ರೀತಿಯಲ್ಲಿ ಹೆಸರು ಮಾಡಿ ಕನ್ನಡದ ಕೀರ್ತಿ ಬೆಳೆಸಿ ಕೀರ್ತಿ ತಂದಿದ್ದಾರೆ. ಆದರೆ, ಅಂತಹವರು ಇಂದಿಗೆ ನಮ್ಮೊಂದಿಗಿಲ್ಲ ಎಂಬುದು ಬೇಸರದ ಸಂಗತಿ ಎಂದು ವಿಷಾದಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಲೇಡೀಸ್‌ ಕ್ಲಬ್‌ ಅಧ್ಯಕ್ಷೆ ಅಮೀರಾಬಾನು ವಾದ್ಯಗೋಷ್ಠಿ ಕಲಾವಿದರ ಸಂಘದ ಅಧ್ಯಕ್ಷ ಪರಮೇಶ್‌, ಹರೀಶ್‌, ಪರಮೇಶ್‌, ಮಂಜುನಾಥ್‌ ಇತರರು ಇದ್ದರು. ಪುನೀತ್‌ ರಾಜ್‌ಕುಮಾರ್‌ರವರ ಹಾಡುಗಳ ಹಾಡುವ ಮೂಲಕ ಗೀತ ನುಡಿನಮನ ಸಲ್ಲಿಸಲಾಯಿತು.

ಟಾಪ್ ನ್ಯೂಸ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.