ಕರ್ತವ್ಯ ಪಾಲನೆ ಪ್ರತಿಯೊಬ್ಬರ ಜವಾಬ್ದಾರಿ; ಪ್ರವೀಣ್‌ ನಾಯಕ್‌

ದೌರ್ಜನ್ಯಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳು ಪೋಕ್ಸೋ ಅಡಿಯಲ್ಲಿ ಬರುತ್ತವೆ.

Team Udayavani, Dec 1, 2022, 6:17 PM IST

ಕರ್ತವ್ಯ ಪಾಲನೆ ಪ್ರತಿಯೊಬ್ಬರ ಜವಾಬ್ದಾರಿ; ಪ್ರವೀಣ್‌ ನಾಯಕ್‌

ದಾವಣಗೆರೆ: ಮೂಲಭೂತ ಕರ್ತವ್ಯಗಳ ಪಾಲನೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಕಾನೂನು ಸೇವಾ ಸದಸ್ಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್‌ ನಾಯಕ್‌ ಹೇಳಿದರು.

ಭಾರತ ಸಂವಿಧಾನ ಸಪ್ತಾಹದ ಅಂಗವಾಗಿ ಬುಧವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ನ್ಯೂ ಡೆಲ್ಲಿ ಪಬ್ಲಿಕ್‌ ಸ್ಕೂಲ್‌ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ ಅಡಿ ಮೂಲಭೂತ ಹಕ್ಕುಗಳ ಬಗ್ಗೆ ಹೋರಾಟ ಮಾಡುತ್ತೇವೆ. ಆದರೆ ಈ ಹಂತದಲ್ಲಿ ಮೂಲಭೂತ ಕರ್ತವ್ಯಗಳನ್ನೇ ಮರೆಯುತ್ತಿದ್ದೇವೆ. ಸಂವಿಧಾನದ ಬಗ್ಗೆ ತಿಳಿದುಕೊಳ್ಳಬೇಕು. ಸುಪ್ರೀಂ ಕೋರ್ಟ್‌
ನಿರ್ದೇಶನದಂತೆ ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯಗಳ ಪಾಲನೆ ಮಾಡಬೇಕು ಎಂದರು.

ಶಾಲಾ-ಕಾಲೇಜುಗಳಲ್ಲಿ ಆಂಗ್ಲ ಭಾಷೆಯ ಜೊತೆಗೆ ಕನ್ನಡ ಮಾಧ್ಯಮವನ್ನು ಕಡ್ಡಾಯವಾಗಿ ಕಲಿಸಬೇಕು. ಕನ್ನಡದಲ್ಲೇ ಮಾತನಾಡಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಪೋಷಕರು ಮನೆಗಳಲ್ಲೂ ಮಕ್ಕಳೊಂದಿಗೆ ಆಂಗ್ಲ ಭಾಷೆಯಲ್ಲಿ ಮಾತನಾಡುತ್ತಾರೆ. ಕನ್ನಡಿಗರಾದ ನಾವು ಕನ್ನಡದಲ್ಲೇ ಮಾತನಾಡೋಣ, ವ್ಯವಹರಿಸೋಣ, ಬರೆಯೋಣ. ಎಲ್ಲವನ್ನೂ ಕನ್ನಡದಲ್ಲಿ ಮಾಡುವ ಮೂಲಕ ಕನ್ನಡವನ್ನು ಉಳಿಸಿ, ಬೆಳೆಸಬೇಕಿದೆ. ಬೇರೆ ಭಾಷೆಗಳ ಬಗ್ಗೆ ದುರಾಭಿಮಾನ ಬೇಡ ಎಂದು ಸಲಹೆ ನೀಡಿದರು.

ಹಿರಿಯ ನ್ಯಾಯವಾದಿ ಎಲ್‌.ಎಚ್‌. ಅರುಣ್‌ ಕುಮಾರ್‌ ಮಾತನಾಡಿ, ಸಂವಿಧಾನದ ಅಂಗವಾಗಿ ಏರ್ಪಡಿಸಿರುವ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧಿಗಳು ಮನೋಭಾವದಿಂದ ಭಾಗವಹಿಸಬೇಕು. ಸೋಲು-ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ಸ್ಪರ್ಧಾತ್ಮಕ ಯುಗದಲ್ಲಿ ಮೂಲಭೂತ
ಹಕ್ಕುಗಳ ಜೊತೆಗೆ ಮೂಲಭೂತ ಕರ್ತವ್ಯ, ಸಂವಿಧಾನದ ಬಗ್ಗೆ ಅರಿತುಕೊಂಡರೆ ಸಹೋದರತೆ, ಏಕತೆ ಮೂಡುತ್ತದೆ ಎಂದು ತಿಳಿಸಿದರು.

ಎಲ್ಲ ಭಾಷೆಗಳಲ್ಲೂ ಏಕತೆಯನ್ನು ಕಾಣುವ ಭಾರತ ಹಲವು ಭಾಷೆ ಒಳಗೊಂಡಿದೆ. ನಾವೆಲ್ಲರೂ ಭಾರತೀಯರೇ. ಮೂಲ ಗ್ರಂಥ ಸಂವಿಧಾನ ಎಂದು ಹೇಳಿಕೊಳ್ಳಬೇಕೆ ವಿನಃ ಆಯಾ ಜಾತಿ ಧರ್ಮದ ಅನುಸಾರದಲ್ಲಿ ಗ್ರಂಥಗಳನ್ನು ಹೇಳಬಾರದು. ಅವುಗಳನ್ನು ಸಮುದಾಯಕ್ಕೆ ಸೀಮಿತವಾಗಿಟ್ಟು ಕೊಳ್ಳಬೇಕು ಎಂದರು.

ಮುಖ್ಯ ಶಿಕ್ಷಕಿ ಬಿ.ಎಸ್‌. ಪೂರ್ಣಿಮಾ ಅಧ್ಯಕ್ಷತೆ ವಹಿಸಿದ್ದರು. ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿ ಕಾರಿ ಟಿ. ಅಂಬಣ್ಣ, ಶಿಕ್ಷಣ ಸಂಯೋಜಕ ಡಿ. ನಾಗರಾಜ್‌, ಕೆ.ಜಿ. ರವಿಕುಮಾರ್‌, ಶಾಲಾ ಕಾರ್ಯದರ್ಶಿ ಸಂತೋಷ್‌ಕುಮಾರ್‌, ಸಹನಾ ಸಂತೋಷ್‌ಕುಮಾರ್‌ ಇತರರು ಇದ್ದರು.

ಹಿಂಜರಿಕೆ ಬಿಟ್ಟು ಹೇಳಿಕೆ ನೀಡಿ
ಪೋಕ್ಸೋ ಎಂದರೆ ಕೇವಲ ಬಾಲಕಿಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳಲ್ಲ. 18 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳು ಪೋಕ್ಸೋ ಅಡಿಯಲ್ಲಿ ಬರುತ್ತವೆ. ಸಂತ್ರಸ್ತರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಉಚಿತವಾಗಿ ಕಾನೂನು ನೆರವು ನೀಡಲಾಗುತ್ತದೆ. ಮಕ್ಕಳ ಸ್ನೇಹಿ ನ್ಯಾಯಾಲಯಗಳನ್ನು ರೂಪಿಸಲಾಗಿದೆ.

ಮಕ್ಕಳಿಗೆ ಗುಪ್ತವಾಗಿ ವಿಚಾರಣೆ ಮಾಡಲಾಗುತ್ತಿದೆ. ಮಕ್ಕಳು ಯಾವುದೇ ರೀತಿಯ ದೌರ್ಜನ್ಯಗಳಾದಾಗ ಮುಕ್ತವಾಗಿ ನ್ಯಾಯಾಲಯ ಇಲ್ಲವೇ ಪೊಲೀಸ್‌ ಠಾಣೆಗೆ
ಹಾಜರಾಗಿ ದೂರು ಅಥವಾ ಹೇಳಿಕೆ ನೀಡಬೇಕು. ಯಾವುದೇ ಭಯ ಬೇಡ ಎಂದು ಕಾನೂನು ಸೇವಾ ಸದಸ್ಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್‌ ನಾಯಕ್‌ ತಿಳಿಸಿದರು.

ಟಾಪ್ ನ್ಯೂಸ್

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

Davanagere; ಕಾಂಗ್ರೆಸ್ ಸಂಧಾನ ವಿಫಲ; ನಾಮಪತ್ರ ಹಿಂಪಡೆಯಲು ವಿನಯ್ ಕುಮಾರ್ ನಕಾರ

Davanagere; ಕಾಂಗ್ರೆಸ್ ಸಂಧಾನ ವಿಫಲ; ನಾಮಪತ್ರ ಹಿಂಪಡೆಯಲು ವಿನಯ್ ಕುಮಾರ್ ನಕಾರ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.