ಅಧಿಕಾರಿಗಳು ಖುದ್ದು ಸಭೆಗೆ ಬನ್ನಿ


Team Udayavani, Sep 10, 2019, 10:23 AM IST

DG-TDY-2

ಜಗಳೂರು: ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಅಧ್ಯಕ್ಷೆ ಮಂಜುಳ ಅಧ್ಯಕ್ಷತೆಯಲ್ಲಿ ಸೋಮವಾರ ತಾಪಂ ಕೆಡಿಪಿ ಮಾಸಿಕ ಸಭೆ ನಡೆಯಿತು.

ಜಗಳೂರು: ತಾಪಂ ಕೆಡಿಪಿ ಸಭೆ ಹಾಗೂ ಸಾಮಾನ್ಯ ಸಭೆಗಳಿಗೆ ಸಿಬ್ಬಂಯನ್ನು ನಿಯೋಜನೆ ಮಾಡದೇ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಖುದ್ದು ಹಾಜರಿದ್ದು ಮಾಹಿತಿ ನೀಡಬೇಕೆಂದು ತಾಪಂ ಕಾರ್ಯ ನಿರ್ವಾಹಕಾಧಿಕಾರಿ ಮಲ್ಲನಾಯ್ಕ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಪಿಡಿಒ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ಜನರ ಫೋನ್‌ ರಿಸೀವ್‌ ಮಾಡುವುದಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಪ್ರತಿಯೊಬ್ಬ ಸರಕಾರಿ ನೌಕರರ ಕರ್ತವ್ಯವಾಗಿದೆ. ನಿತ್ಯ ಕಚೇರಿಗೆ ಬರುವ ಜನರ ಕುಂದು ಕೊರತೆಗಳನ್ನು ಪರಿಹರಿಸಿ ಎಂದರು.

ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ| ನಾಗರಾಜ್‌ ವರದಿ ಮಂಡಿಸಿ, ಲಕ್ಕಂಪುರ ಹಾಗೂ ಬೊಮ್ಮಕ್ಕನಹಳ್ಳಿಯ ಜನರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮಗಳಿಗೆ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಲ್ಲದೇ ಸೊಳ್ಳೆ ಪರದೆ ವಿತರಿಸಿ ಸ್ವಚ್ಛತೆಯ ಜಾಗೃತಿ ಮೂಡಿಸಲಾಗಿದೆ ಎಂದರು. ತಾಪಂ ಉಪಾಧ್ಯಕ್ಷ ಮುದೇಗೌಡ್ರು ಬಸವರಾಜಪ್ಪ ಮಾತನಾಡಿ, ಆಸ್ಪತ್ರೆಯ ಬಹುತೇಕ ವೈದ್ಯರು ವರ್ಗಾವಣೆಗೊಂಡು ನಿರ್ಗಮಿಸಿದ್ದು, ಈ ಭಾಗದಲ್ಲಿ ವೈದ್ಯರ ಕೊರತೆಯುಂಟಾಗಿ ರೋಗಿಗಳು ಪರದಾಡುವಂತಾಗಿದೆ ಎಂದು ಆರೋಪಿಸಿದರು.

ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರಂಗಪ್ಪ ಮಾತನಾಡಿ, ಮುಂಗಾರು ಮಳೆಯಿಂದಾಗಿ ಹೊಲದ ಬದುಗಳಲ್ಲಿ ಸಾಕಷ್ಟು ಮೇವು ಬೆಳೆದ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಆರಂಭಿಸಲಾಗಿದ್ದ 3 ಗೋಶಾಲೆಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭಾರತಿ ಬಣಕಾರ್‌ ವರದಿ ಮಂಡಿಸಿ, ತಾಲೂಕಿನಲ್ಲಿ 257 ಅಂಗನವಾಡಿ ಕಟ್ಟಡಗಳಿದ್ದು 194 ಸ್ವಂತ ಕಟ್ಟಡದಲ್ಲಿ ಕಾರ್ಯ ನಿರ್ವಹಿಸಿದರೆ 2 ಪಂಚಾಯತ್‌ ಕಟ್ಟಡ, 13 ಸಮುದಾಯ ಭವನ, 26 ಬಾಡಿಗೆ, 20 ಶಾಲಾ ಕೊಠಡಿ, 3 ಇತರೆ ಸರಕಾರಿ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಕೇಂದ್ರಗಳಿಗೆ ಸ್ವಂತ ನಿವೇಶನ ಕಲ್ಪಿಸಿದರೆ ಇಲಾಖೆಯಿಂದ ಕಟ್ಟಡ ನಿರ್ಮಾಣಕ್ಕೆ ಅನುದಾನ ಲಭ್ಯವಾಗಲಿದೆ ಎಂದರು.

ಮೀನುಗಾರಿಕೆ ಇಲಾಖಾಧಿಕಾರಿ ಮಂಜುನಾಥ್‌ ಮಾತನಾಡಿ, ಕಡಿಮೆ ಮಳೆಯಿಂದಾಗಿ ತಾಲೂಕಿನಲ್ಲಿ ಕಳೆದ ಎರಡು ವರ್ಷಗಳಿಂದ ಮತ್ಸ್ಯಪಾಲನೆ ಸಾಧ್ಯವಾಗಿಲ್ಲ. ಕೃಷಿ ಹೊಂಡಗಳಲ್ಲಿ ನೀರು ಸಂಗ್ರಹವಾಗಿದ್ದರೆ ಅಂತಹ ರೈತರಿಗೆ 100 ಮೀನು ಮರಿ ನೀಡಲಾಗುವುದು ಎಂದರು.

ತಾಪಂ ಅಧ್ಯಕ್ಷೆ ಮಂಜುಳಾ ಶಿವಾನಂದಪ್ಪ, ಉಪಾಧ್ಯಕ್ಷ ಮುದೇಗೌಡ್ರು ಬಸವರಾಜಪ್ಪ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಜೆ.ಎಂ. ತಿಪ್ಪೇಸ್ವಾಮಿ, ಯೋಜನಾಧಿಕಾರಿ ಮೋಹನ್‌, ವಿವಿಧ ಇಲಾಖೆ ಅನುಷ್ಠಾನಾಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.