ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ
Team Udayavani, Mar 15, 2021, 8:37 PM IST
ದಾವಣಗೆರೆ: ಎಲ್ಲರಲ್ಲೂ ಸ್ನೇಹ ಬೆಳೆಸುವ ಉದ್ದೇಶದಿಂದ ಪ್ರತಿ ವರ್ಷ ಕ್ರಿಕೆಟ್ ಪಂದ್ಯಾವಳಿ ನಡೆಸುತ್ತಿರುವ ಕುಂದುವಾಡ ಯುವಕರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಜಿಲ್ಲಾಕಾರಿ ಮಹಾಂತೇಶ್ ಜಿ. ಬೀಳಗಿ ಮೆಚ್ಚುಗೆ ವ್ಯಕ್ತಪಡಿಸಿದರು.
ಹಳೇ ಕುಂದುವಾಡದಲ್ಲಿ ಮನಾ ಯುವ ಬ್ರಿಗೇಡ್, ಜರವೇಯಿಂದ ಮೂರು ದಿನಗಳ ಕಾಲ ಆಯೋಜಿಸಿದ್ದ ಕುಂದುವಾಡ ಪ್ರೀಮಿಯರ್ ಲೀಗ್ -4 ಕ್ರಿಕೆಟ್ ಟೂರ್ನಿಮೆಂಟ್ನ್ನು ಬ್ಯಾಟಿಂಗ್ ಮಾಡುವ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಗಳ ಯುವಕರಲ್ಲಿ ಸಣ್ಣಪುಟ್ಟ ಗಲಾಟೆಗಳು ಇರುತ್ತವೆ. ಕ್ರಿಕೆಟ್ನಲ್ಲಿ ಎಲ್ಲಾ ಯುವಕರನ್ನು ಒಗ್ಗೂಡಿಸುವ ಮೂಲಕ ಐಪಿಎಲ್ ಮಾದರಿಯಲ್ಲಿ ತುಂಬಾ ಅಚ್ಚುಕಟ್ಟಾಗಿ ಮನಾ ಯುವ ಬ್ರಿಗೇಡ್ ವೇದಿಕೆಯವರು ಕ್ರಿಕೆಟ್ ಆಯೋಜನೆ ಮಾಡಿರುವುದು ಸಂತೋಷದ ವಿಚಾರ ಎಂದರು.
ಮೇಯರ್ ಎಸ್. ಟಿ .ವೀರೇಶ್ ಮಾತನಾಡಿ, ಕ್ರಿಕೆಟ್ ಆಟ ದೈಹಿಕವಾಗಿ ಸಹಾಯವಾಗುತ್ತೆ. ಸ್ನೇಹತ್ವಕ್ಕಾಗಿ ಕ್ರಿಕೆಟ್ ಟೂರ್ನಿ ನಡೆಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ಊರಿನ ಎಲ್ಲಾ ಅಭಿವೃದ್ಧಿ ಕೆಲಸಗಳಿಗೆ ಎಲ್ಲ ಯುವಕರು ಕೈ ಜೋಡಿಸಬೇಕು ಎಂದು ತಿಳಿಸಿದರು.. ವರ್ತಕ ರಾಘವೇಂದ್ರ, ಎನ್. ದಿವಾಕರ್, ಹನುಮಂತಪ್ಪ, ಶಿವಪ್ಪ, ಪತ್ರಕರ್ತರಾದ ಮಧು ನಾಗರಾಜ್ ಕುಂದುವಾಡ, ರಾಜೂ ಕರೂರು, ನಾಗರಾಜ್, ಎಸ್. ಬಿ. ಅಣ್ಣಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್